Advertisement
MIRROR FOCUS

ಅಡಿಕೆ ಮಾರುಕಟ್ಟೆ | ಚಾಲಿ ಅಡಿಕೆ ಧಾರಣೆಯಲ್ಲಿ ಏಕೆ ಏರಿಳಿತ ? | ಏರಿಳಿತಕ್ಕೆ ಕಾರಣಗಳು ಏನು ? |

Share

ಅಡಿಕೆ ಮಾರುಕಟ್ಟೆಯಲ್ಲಿ ಕಳೆದ ಒಂದು ವಾರದಿಂದ ಏರಿಳಿತಗಳು ಕಂಡುಬಂದಿದೆ. ಖಾಸಗಿ ಮಾರುಕಟ್ಟೆ ಹಾಗೂ ಕ್ಯಾಂಪ್ಕೋ ಮತ್ತು ಇತರ ಸಹಕಾರಿ ಸಂಸ್ಥೆಗಳ ಧಾರಣೆಯಲ್ಲಿ ಸ್ವಲ್ಪ ವ್ಯತ್ಯಾಸ ಇದೆ. ನವೆಂಬರ್‌ ಬಳಿಕ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಂಡುಬರುವ ಹೊತ್ತಲ್ಲ ಧಾರಣೆ ಏಕೆ ಕಳೆಗುಂದಿದೆ ಎಂಬುದು  ಕುತೂಹಲದ ಪ್ರಶ್ನೆಯಾಗಿದೆ.

ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ 380, ಹಳೆ ಅಡಿಕೆ 485, ಚೋಲ್‌ 550 ರೂಪಾಯಿಗೆ ಕ್ಯಾಂಪ್ಕೋ ಖರೀದಿ ಮಾಡುತ್ತಿತ್ತು. ಈಗ ಚೋಲ್‌ ಅಡಿಕೆ ಧಾರಣೆಯಲ್ಲಿ  ಇಳಿಕೆ ಮಾಡಿದೆ. ಇದೇ ವೇಳೆ ಖಾಸಗಿ ಮಾರುಕಟ್ಟೆಯಲ್ಲಿ  ಹೊಸ ಅಡಿಕೆ 390 ರೂಪಾಯಿ ಹಳೆದ ಅಡಿಕೆ 480 ರೂಪಾಯಿ ಹಾಗೂ ಚೋಲ್‌ ಅಡಿಕೆ 555 ರೂಪಾಯಿಗೆ ಖರೀದಿ ನಡೆಸುತ್ತಿದ್ದಾರೆ.  ಕಳೆದ ಒಂದು ವಾರದಿಂದ ಹಳೆ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಡಿಮೆಯಾಗಿದೆ. ಇದೇ ಟ್ರೆಂಡ್‌ ಇನ್ನೂ ಕೆಲವು ದಿನ ಮುಂದುವರಿಯುವ ಸಾಧ್ಯತೆ ಹೆಚ್ಚಿದೆ.

ಗುಜರಾತ್‌ ಚುನಾವಣೆ ಘೋಷಣೆಯಾದ ಬಳಿಕ ಅಡಿಕೆ ಮಾರುಕಟ್ಟೆಯಲ್ಲೂ ಪ್ರಭಾವ ಕಂಡಿದೆ. ಚುನಾವಣೆ ಘೋಷಣೆಯಾದ ಬಳಿಕ ತಪಾಸಣೆಗಳು ನಡೆಯುತ್ತಿದೆ. ಚೆಕ್‌ ಪೋಸ್ಟ್‌ಗಳು, ಬಿಲ್‌ ಸೇರಿದಂತೆ ಹಲವು ಕಡೆ ತಪಾಸಣೆ ನಡೆಯುತ್ತದೆ. ಹೀಗಾಗಿ ಅಡಿಕೆ ಸಾಗಾಣಿಕೆಗೂ ಸಮಸ್ಯೆಯಾಗುತ್ತದೆ. ಆದರೆ ಬಿಲ್‌ , ಜಿಎಸ್‌ಟಿ ಸಹಿತ ಅಧಿಕೃತವಾಗಿ ಸಾಗಾಟ ಮಾಡುವ ಸಂಸ್ಥೆಗಳು ಈ ಸಮಸ್ಯೆ ಉಂಟಾಗುವುದಿಲ್ಲ. ಕ್ಯಾಂಪ್ಕೋ ಹಾಗೂ ಇತರ ಸಹಕಾರಿ ಸಂಸ್ಥೆಗಳು ಈಗ ಅಧಿಕೃತವಾಗಿ ಸಾಗಾಟ, ಮಾರಾಟ ಮಾಡುವುದಕ್ಕೆ ಅಷ್ಟೊಂದು ಸಮಸ್ಯೆಯಾಗುವುದಿಲ್ಲ.

ಡಿಸೆಂಬರ್‌ ಮೊದಲ ವಾರದ ವರೆಗೆ ಗುಜರಾತ್‌ ಚುನಾವಣಾ ಬ್ಯುಸಿ ಇರುತ್ತದೆ. ಈ ತಿಂಗಳಲ್ಲಿ ಇನ್ನೂ 10 ದಿನಗಳ ಕಾಲ ಅಡಿಕೆ ಮಾರುಕಟ್ಟೆಯಲ್ಲಿ  ಏರಿಳಿತಗಳು ಕಂಡುಬರಬಹುದು. ಅದಾದ ಬಳಿಕ ಮತ್ತೆ ಅಡಿಕೆ ಮಾರುಕಟ್ಟೆ ಯಥಾಸ್ಥಿತಿಗೆ ಬರಲಿದೆ ಎನ್ನುವುದು  ಮಾರುಕಟ್ಟೆ ಮಾಹಿತಿ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

12 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

20 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

21 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago