Advertisement
MIRROR FOCUS

ಅಡಿಕೆ ಮಾರುಕಟ್ಟೆ | ಚಾಲಿ ಅಡಿಕೆ ಧಾರಣೆಯಲ್ಲಿ ಏಕೆ ಏರಿಳಿತ ? | ಏರಿಳಿತಕ್ಕೆ ಕಾರಣಗಳು ಏನು ? |

Share

ಅಡಿಕೆ ಮಾರುಕಟ್ಟೆಯಲ್ಲಿ ಕಳೆದ ಒಂದು ವಾರದಿಂದ ಏರಿಳಿತಗಳು ಕಂಡುಬಂದಿದೆ. ಖಾಸಗಿ ಮಾರುಕಟ್ಟೆ ಹಾಗೂ ಕ್ಯಾಂಪ್ಕೋ ಮತ್ತು ಇತರ ಸಹಕಾರಿ ಸಂಸ್ಥೆಗಳ ಧಾರಣೆಯಲ್ಲಿ ಸ್ವಲ್ಪ ವ್ಯತ್ಯಾಸ ಇದೆ. ನವೆಂಬರ್‌ ಬಳಿಕ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಂಡುಬರುವ ಹೊತ್ತಲ್ಲ ಧಾರಣೆ ಏಕೆ ಕಳೆಗುಂದಿದೆ ಎಂಬುದು  ಕುತೂಹಲದ ಪ್ರಶ್ನೆಯಾಗಿದೆ.

ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ 380, ಹಳೆ ಅಡಿಕೆ 485, ಚೋಲ್‌ 550 ರೂಪಾಯಿಗೆ ಕ್ಯಾಂಪ್ಕೋ ಖರೀದಿ ಮಾಡುತ್ತಿತ್ತು. ಈಗ ಚೋಲ್‌ ಅಡಿಕೆ ಧಾರಣೆಯಲ್ಲಿ  ಇಳಿಕೆ ಮಾಡಿದೆ. ಇದೇ ವೇಳೆ ಖಾಸಗಿ ಮಾರುಕಟ್ಟೆಯಲ್ಲಿ  ಹೊಸ ಅಡಿಕೆ 390 ರೂಪಾಯಿ ಹಳೆದ ಅಡಿಕೆ 480 ರೂಪಾಯಿ ಹಾಗೂ ಚೋಲ್‌ ಅಡಿಕೆ 555 ರೂಪಾಯಿಗೆ ಖರೀದಿ ನಡೆಸುತ್ತಿದ್ದಾರೆ.  ಕಳೆದ ಒಂದು ವಾರದಿಂದ ಹಳೆ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಡಿಮೆಯಾಗಿದೆ. ಇದೇ ಟ್ರೆಂಡ್‌ ಇನ್ನೂ ಕೆಲವು ದಿನ ಮುಂದುವರಿಯುವ ಸಾಧ್ಯತೆ ಹೆಚ್ಚಿದೆ.

ಗುಜರಾತ್‌ ಚುನಾವಣೆ ಘೋಷಣೆಯಾದ ಬಳಿಕ ಅಡಿಕೆ ಮಾರುಕಟ್ಟೆಯಲ್ಲೂ ಪ್ರಭಾವ ಕಂಡಿದೆ. ಚುನಾವಣೆ ಘೋಷಣೆಯಾದ ಬಳಿಕ ತಪಾಸಣೆಗಳು ನಡೆಯುತ್ತಿದೆ. ಚೆಕ್‌ ಪೋಸ್ಟ್‌ಗಳು, ಬಿಲ್‌ ಸೇರಿದಂತೆ ಹಲವು ಕಡೆ ತಪಾಸಣೆ ನಡೆಯುತ್ತದೆ. ಹೀಗಾಗಿ ಅಡಿಕೆ ಸಾಗಾಣಿಕೆಗೂ ಸಮಸ್ಯೆಯಾಗುತ್ತದೆ. ಆದರೆ ಬಿಲ್‌ , ಜಿಎಸ್‌ಟಿ ಸಹಿತ ಅಧಿಕೃತವಾಗಿ ಸಾಗಾಟ ಮಾಡುವ ಸಂಸ್ಥೆಗಳು ಈ ಸಮಸ್ಯೆ ಉಂಟಾಗುವುದಿಲ್ಲ. ಕ್ಯಾಂಪ್ಕೋ ಹಾಗೂ ಇತರ ಸಹಕಾರಿ ಸಂಸ್ಥೆಗಳು ಈಗ ಅಧಿಕೃತವಾಗಿ ಸಾಗಾಟ, ಮಾರಾಟ ಮಾಡುವುದಕ್ಕೆ ಅಷ್ಟೊಂದು ಸಮಸ್ಯೆಯಾಗುವುದಿಲ್ಲ.

ಡಿಸೆಂಬರ್‌ ಮೊದಲ ವಾರದ ವರೆಗೆ ಗುಜರಾತ್‌ ಚುನಾವಣಾ ಬ್ಯುಸಿ ಇರುತ್ತದೆ. ಈ ತಿಂಗಳಲ್ಲಿ ಇನ್ನೂ 10 ದಿನಗಳ ಕಾಲ ಅಡಿಕೆ ಮಾರುಕಟ್ಟೆಯಲ್ಲಿ  ಏರಿಳಿತಗಳು ಕಂಡುಬರಬಹುದು. ಅದಾದ ಬಳಿಕ ಮತ್ತೆ ಅಡಿಕೆ ಮಾರುಕಟ್ಟೆ ಯಥಾಸ್ಥಿತಿಗೆ ಬರಲಿದೆ ಎನ್ನುವುದು  ಮಾರುಕಟ್ಟೆ ಮಾಹಿತಿ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

2 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

20 hours ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago