Advertisement
MIRROR FOCUS

ಅಡಿಕೆ ಮಾರುಕಟ್ಟೆ | ಚಾಲಿ ಅಡಿಕೆ ಧಾರಣೆಯಲ್ಲಿ ಏಕೆ ಏರಿಳಿತ ? | ಏರಿಳಿತಕ್ಕೆ ಕಾರಣಗಳು ಏನು ? |

Share

ಅಡಿಕೆ ಮಾರುಕಟ್ಟೆಯಲ್ಲಿ ಕಳೆದ ಒಂದು ವಾರದಿಂದ ಏರಿಳಿತಗಳು ಕಂಡುಬಂದಿದೆ. ಖಾಸಗಿ ಮಾರುಕಟ್ಟೆ ಹಾಗೂ ಕ್ಯಾಂಪ್ಕೋ ಮತ್ತು ಇತರ ಸಹಕಾರಿ ಸಂಸ್ಥೆಗಳ ಧಾರಣೆಯಲ್ಲಿ ಸ್ವಲ್ಪ ವ್ಯತ್ಯಾಸ ಇದೆ. ನವೆಂಬರ್‌ ಬಳಿಕ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಂಡುಬರುವ ಹೊತ್ತಲ್ಲ ಧಾರಣೆ ಏಕೆ ಕಳೆಗುಂದಿದೆ ಎಂಬುದು  ಕುತೂಹಲದ ಪ್ರಶ್ನೆಯಾಗಿದೆ.

ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ 380, ಹಳೆ ಅಡಿಕೆ 485, ಚೋಲ್‌ 550 ರೂಪಾಯಿಗೆ ಕ್ಯಾಂಪ್ಕೋ ಖರೀದಿ ಮಾಡುತ್ತಿತ್ತು. ಈಗ ಚೋಲ್‌ ಅಡಿಕೆ ಧಾರಣೆಯಲ್ಲಿ  ಇಳಿಕೆ ಮಾಡಿದೆ. ಇದೇ ವೇಳೆ ಖಾಸಗಿ ಮಾರುಕಟ್ಟೆಯಲ್ಲಿ  ಹೊಸ ಅಡಿಕೆ 390 ರೂಪಾಯಿ ಹಳೆದ ಅಡಿಕೆ 480 ರೂಪಾಯಿ ಹಾಗೂ ಚೋಲ್‌ ಅಡಿಕೆ 555 ರೂಪಾಯಿಗೆ ಖರೀದಿ ನಡೆಸುತ್ತಿದ್ದಾರೆ.  ಕಳೆದ ಒಂದು ವಾರದಿಂದ ಹಳೆ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಡಿಮೆಯಾಗಿದೆ. ಇದೇ ಟ್ರೆಂಡ್‌ ಇನ್ನೂ ಕೆಲವು ದಿನ ಮುಂದುವರಿಯುವ ಸಾಧ್ಯತೆ ಹೆಚ್ಚಿದೆ.

ಗುಜರಾತ್‌ ಚುನಾವಣೆ ಘೋಷಣೆಯಾದ ಬಳಿಕ ಅಡಿಕೆ ಮಾರುಕಟ್ಟೆಯಲ್ಲೂ ಪ್ರಭಾವ ಕಂಡಿದೆ. ಚುನಾವಣೆ ಘೋಷಣೆಯಾದ ಬಳಿಕ ತಪಾಸಣೆಗಳು ನಡೆಯುತ್ತಿದೆ. ಚೆಕ್‌ ಪೋಸ್ಟ್‌ಗಳು, ಬಿಲ್‌ ಸೇರಿದಂತೆ ಹಲವು ಕಡೆ ತಪಾಸಣೆ ನಡೆಯುತ್ತದೆ. ಹೀಗಾಗಿ ಅಡಿಕೆ ಸಾಗಾಣಿಕೆಗೂ ಸಮಸ್ಯೆಯಾಗುತ್ತದೆ. ಆದರೆ ಬಿಲ್‌ , ಜಿಎಸ್‌ಟಿ ಸಹಿತ ಅಧಿಕೃತವಾಗಿ ಸಾಗಾಟ ಮಾಡುವ ಸಂಸ್ಥೆಗಳು ಈ ಸಮಸ್ಯೆ ಉಂಟಾಗುವುದಿಲ್ಲ. ಕ್ಯಾಂಪ್ಕೋ ಹಾಗೂ ಇತರ ಸಹಕಾರಿ ಸಂಸ್ಥೆಗಳು ಈಗ ಅಧಿಕೃತವಾಗಿ ಸಾಗಾಟ, ಮಾರಾಟ ಮಾಡುವುದಕ್ಕೆ ಅಷ್ಟೊಂದು ಸಮಸ್ಯೆಯಾಗುವುದಿಲ್ಲ.

ಡಿಸೆಂಬರ್‌ ಮೊದಲ ವಾರದ ವರೆಗೆ ಗುಜರಾತ್‌ ಚುನಾವಣಾ ಬ್ಯುಸಿ ಇರುತ್ತದೆ. ಈ ತಿಂಗಳಲ್ಲಿ ಇನ್ನೂ 10 ದಿನಗಳ ಕಾಲ ಅಡಿಕೆ ಮಾರುಕಟ್ಟೆಯಲ್ಲಿ  ಏರಿಳಿತಗಳು ಕಂಡುಬರಬಹುದು. ಅದಾದ ಬಳಿಕ ಮತ್ತೆ ಅಡಿಕೆ ಮಾರುಕಟ್ಟೆ ಯಥಾಸ್ಥಿತಿಗೆ ಬರಲಿದೆ ಎನ್ನುವುದು  ಮಾರುಕಟ್ಟೆ ಮಾಹಿತಿ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

5 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

6 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

8 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

8 hours ago

ಹವಾಮಾನ ವರದಿ | 04-07-2026 | ಜುಲೈ 10ರ ಬಳಿಕ ಕರ್ನಾಟಕದಲ್ಲಿ ಮುಂಗಾರು ದುರ್ಬಲ..? ಕರಾವಳಿ-ಮಲೆನಾಡಿನಲ್ಲಿ ಮಳೆ ಇಳಿಕೆಗೆ ಮುನ್ಸೂಚನೆ

ಜುಲೈ 10ರ ಬಳಿಕ ರಾಜ್ಯದಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

9 hours ago

2026ರಲ್ಲಿ ಜಗತ್ತಿನ ಅಂತ್ಯವೇ..? 1960ರ ‘ಡೂಮ್ಸ್‌ಡೇ’ ಅಧ್ಯಯನದ ನಿಜಾಂಶ ಏನು..?

1960ರ ವಿಜ್ಞಾನ ಲೇಖನವು 2026ರಲ್ಲಿ ಜಗತ್ತು ಅಂತ್ಯವಾಗುತ್ತದೆ ಎಂದು ಹೇಳಿಲ್ಲ. ಅದು ಕೇವಲ…

9 hours ago