Advertisement
MIRROR FOCUS

ಅಡಿಕೆ ಮಾರುಕಟ್ಟೆ | ಚಾಲಿ ಅಡಿಕೆ ಧಾರಣೆಯಲ್ಲಿ ಏಕೆ ಏರಿಳಿತ ? | ಏರಿಳಿತಕ್ಕೆ ಕಾರಣಗಳು ಏನು ? |

Share

ಅಡಿಕೆ ಮಾರುಕಟ್ಟೆಯಲ್ಲಿ ಕಳೆದ ಒಂದು ವಾರದಿಂದ ಏರಿಳಿತಗಳು ಕಂಡುಬಂದಿದೆ. ಖಾಸಗಿ ಮಾರುಕಟ್ಟೆ ಹಾಗೂ ಕ್ಯಾಂಪ್ಕೋ ಮತ್ತು ಇತರ ಸಹಕಾರಿ ಸಂಸ್ಥೆಗಳ ಧಾರಣೆಯಲ್ಲಿ ಸ್ವಲ್ಪ ವ್ಯತ್ಯಾಸ ಇದೆ. ನವೆಂಬರ್‌ ಬಳಿಕ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಂಡುಬರುವ ಹೊತ್ತಲ್ಲ ಧಾರಣೆ ಏಕೆ ಕಳೆಗುಂದಿದೆ ಎಂಬುದು  ಕುತೂಹಲದ ಪ್ರಶ್ನೆಯಾಗಿದೆ.

ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ 380, ಹಳೆ ಅಡಿಕೆ 485, ಚೋಲ್‌ 550 ರೂಪಾಯಿಗೆ ಕ್ಯಾಂಪ್ಕೋ ಖರೀದಿ ಮಾಡುತ್ತಿತ್ತು. ಈಗ ಚೋಲ್‌ ಅಡಿಕೆ ಧಾರಣೆಯಲ್ಲಿ  ಇಳಿಕೆ ಮಾಡಿದೆ. ಇದೇ ವೇಳೆ ಖಾಸಗಿ ಮಾರುಕಟ್ಟೆಯಲ್ಲಿ  ಹೊಸ ಅಡಿಕೆ 390 ರೂಪಾಯಿ ಹಳೆದ ಅಡಿಕೆ 480 ರೂಪಾಯಿ ಹಾಗೂ ಚೋಲ್‌ ಅಡಿಕೆ 555 ರೂಪಾಯಿಗೆ ಖರೀದಿ ನಡೆಸುತ್ತಿದ್ದಾರೆ.  ಕಳೆದ ಒಂದು ವಾರದಿಂದ ಹಳೆ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಡಿಮೆಯಾಗಿದೆ. ಇದೇ ಟ್ರೆಂಡ್‌ ಇನ್ನೂ ಕೆಲವು ದಿನ ಮುಂದುವರಿಯುವ ಸಾಧ್ಯತೆ ಹೆಚ್ಚಿದೆ.

ಗುಜರಾತ್‌ ಚುನಾವಣೆ ಘೋಷಣೆಯಾದ ಬಳಿಕ ಅಡಿಕೆ ಮಾರುಕಟ್ಟೆಯಲ್ಲೂ ಪ್ರಭಾವ ಕಂಡಿದೆ. ಚುನಾವಣೆ ಘೋಷಣೆಯಾದ ಬಳಿಕ ತಪಾಸಣೆಗಳು ನಡೆಯುತ್ತಿದೆ. ಚೆಕ್‌ ಪೋಸ್ಟ್‌ಗಳು, ಬಿಲ್‌ ಸೇರಿದಂತೆ ಹಲವು ಕಡೆ ತಪಾಸಣೆ ನಡೆಯುತ್ತದೆ. ಹೀಗಾಗಿ ಅಡಿಕೆ ಸಾಗಾಣಿಕೆಗೂ ಸಮಸ್ಯೆಯಾಗುತ್ತದೆ. ಆದರೆ ಬಿಲ್‌ , ಜಿಎಸ್‌ಟಿ ಸಹಿತ ಅಧಿಕೃತವಾಗಿ ಸಾಗಾಟ ಮಾಡುವ ಸಂಸ್ಥೆಗಳು ಈ ಸಮಸ್ಯೆ ಉಂಟಾಗುವುದಿಲ್ಲ. ಕ್ಯಾಂಪ್ಕೋ ಹಾಗೂ ಇತರ ಸಹಕಾರಿ ಸಂಸ್ಥೆಗಳು ಈಗ ಅಧಿಕೃತವಾಗಿ ಸಾಗಾಟ, ಮಾರಾಟ ಮಾಡುವುದಕ್ಕೆ ಅಷ್ಟೊಂದು ಸಮಸ್ಯೆಯಾಗುವುದಿಲ್ಲ.

ಡಿಸೆಂಬರ್‌ ಮೊದಲ ವಾರದ ವರೆಗೆ ಗುಜರಾತ್‌ ಚುನಾವಣಾ ಬ್ಯುಸಿ ಇರುತ್ತದೆ. ಈ ತಿಂಗಳಲ್ಲಿ ಇನ್ನೂ 10 ದಿನಗಳ ಕಾಲ ಅಡಿಕೆ ಮಾರುಕಟ್ಟೆಯಲ್ಲಿ  ಏರಿಳಿತಗಳು ಕಂಡುಬರಬಹುದು. ಅದಾದ ಬಳಿಕ ಮತ್ತೆ ಅಡಿಕೆ ಮಾರುಕಟ್ಟೆ ಯಥಾಸ್ಥಿತಿಗೆ ಬರಲಿದೆ ಎನ್ನುವುದು  ಮಾರುಕಟ್ಟೆ ಮಾಹಿತಿ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

5 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

17 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

18 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 day ago