MIRROR FOCUS

ಅಡಿಕೆ ಮಾರುಕಟ್ಟೆ | ಗುಜರಾತ್‌ ಚುನಾವಣೆ ಬಳಿಕ ಅಡಿಕೆ ಧಾರಣೆ ಏರಿಕೆ ನಿರೀಕ್ಷೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಏರಿಕೆಯ ಸೂಚನೆ ಕಂಡುಬಂದಿದೆ. ಚಾಲಿ ಅಡಿಕೆ ಧಾರಣೆ ಏರಿಕೆಯ ಹಾದಿಯಲ್ಲಿದ್ದು ಎರಡು ದಿನಗಳಿಂದ ಅಡಿಕೆ ಮಾರುಕಟ್ಟೆ ಉತ್ಸಾಹದ ಕಡೆಗೆ ಸಾಗಿದೆ. ಕ್ಯಾಂಪ್ಕೋ ಅಡಿಕೆ ಧಾರಣೆಯಲ್ಲಿ 5 ರೂಪಾಯಿ ಏರಿಕೆ ಮಾಡಿದೆ. ಇದರ ಬೆನ್ನಲ್ಲೇ ಖಾಸಗಿ ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೂಡಾ ಧಾರಣೆ ಏರಿಕೆಯ ಹಾದಿಯಲ್ಲಿ ಸಾಗಿದೆ.ಸದ್ಯ ಕ್ಯಾಂಪ್ಕೋ ಚಾಲಿ ಅಡಿಕೆಯ ಹೊಸ ಅಡಿಕೆಯನ್ನು 380 ಹಳೆ ಅಡಿಕೆ 490 ರೂಪಾಯಿಗೆ ಹಾಗೂ ಡಬಲ್‌ ಚೋಲ್‌ 545 ರೂಪಾಯಿಗೆ ಖರೀದಿ ನಡೆಸುತ್ತಿದೆ. 

Advertisement

ಗುಜರಾತ್‌ ಚುನಾವಣೆಯ ಬಳಿಕ ಅಡಿಕೆ ಧಾರಣೆ ಏರಿಕೆಯ ಹಾದಿಯಲ್ಲಿ ಸಾಗಲಿದೆ. ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ  ಭಾರೀ ನಿರೀಕ್ಷೆಯನ್ನು ಅಡಿಕೆ ಬೆಳೆಗಾರರು ಇರಿಸಿಕೊಳ್ಳಬೇಕಾಗಿಲ್ಲ ಎಂಬುದು ಮಾರುಕಟ್ಟೆ ವರದಿ ಹೇಳುತ್ತದೆ.

ಹೊಸ ಅಡಿಕೆ ಧಾರಣೆ ಈಗ 380 ರೂಪಾಯಿ ಇದ್ದು ಈ ಧಾರಣೆ ಇನ್ನೂ ಸ್ವಲ್ಪ ಏರಿಕೆಯ ನಿರೀಕ್ಷೆ ಇದೆ. ಹಳೆ ಅಡಿಕೆ ಧಾರಣೆಯು ಸದ್ಯ 480 ರೂಪಾಯಿ ಆಸುಪಾಸಿನಲ್ಲಿಯೇ ಮುಂದುವರಿದು ನಂತರ 450 ರೂಪಾಯಿ ಆಸುಪಾಸಿನಲ್ಲಿ ಅಡಿಕೆ ಮಾರುಕಟ್ಟೆ ನಿಲ್ಲಲಿದೆ. ಭಾರೀ ಪ್ರಮಾಣದಲ್ಲಿ ಅಡಿಕೆ ಮಾರುಕಟ್ಟೆ ಏರಿಕೆಯಾದರೆ ಅಡಿಕೆ ವ್ಯಾಪಾರಿಗಳಿಗೂ, ಮಾರಾಟಗಾರರಿಗೂ ಸಮಸ್ಯೆಯಾಗುವುದರಿಂದ ಈ ಬಾರಿ ಅಡಿಕೆ ಮಾರುಕಟ್ಟೆ ನಿಯಂತ್ರಣಕ್ಕೆ ಬರಲಿದೆ. ಸಂಸ್ಥೆಗಳು ಕೂಡಾ ಅಡಿಕೆ ಮಾರುಕಟ್ಟೆಯನ್ನು ಭಾರೀ ಪ್ರಮಾಣದಲ್ಲಿ ಏರಿಕೆಯಾಗದಂತೆ ತಡೆಯುವ ಸಾಧ್ಯತೆ ಹೆಚ್ಚಿದೆ. ಹಿಂದೆ ಚಾಲಿ ಹೊಸ ಅಡಿಕೆ ಹಾಗೂ ಹಳೆ ಅಡಿಕೆಗೆ 20-30 ರೂಪಾಯಿ ವ್ಯತ್ಯಾಸ ಇತ್ತು. ಈ ಬಾರಿ 100 ರೂಪಾಯಿ ವ್ಯತ್ಯಾಸ ಇದ್ದು ಈ ಅಂತರ ಕಡಿಮೆಯಾಗಲಿದೆ. 450 ರೂಪಾಯಿ ಧಾರಣೆಯಲ್ಲಿ ಸ್ಥಿರವಾಗುವ ನಿರೀಕ್ಷೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಮರನಾಥ ಯಾತ್ರೆ ಹಿನ್ನೆಲೆ | ಜುಲೈ 1 ರಿಂದ ಆಗಸ್ಟ್  ತಿಂಗಳವರೆಗೆ ಅಮರನಾಥ ಹಾರಾಟ ನಿಷೇಧ ವಲಯ

ಜಮ್ಮು - ಕಾಶ್ಮೀರ ಸರ್ಕಾರ ಅಮರನಾಥ ಗುಹೆ ದೇಗುಲಕ್ಕೆ ಹೋಗುವ ಎಲ್ಲಾ ಮಾರ್ಗಗಳನ್ನು…

24 minutes ago

ಹವಾಮಾನ ವರದಿ | 18-06-2025 | ರೈತರೇ ಗಮನಿಸಿ- ಜೂ.21 ರವರೆಗೆ ಮಳೆ ಕಡಿಮೆ ಇರಲಿದೆ | ಔಷಧಿ ಸಿಂಪಡಣೆಗೆ ಸಿಗಬಹುದು ಅವಕಾಶ |

ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯು ರಾಜಸ್ಥಾನ ತಲುಪಿದ್ದು, ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.…

3 hours ago

ಹಂಸ ಮಹಾಪುರುಷ ರಾಜಯೋಗ | ಈ 3 ರಾಶಿಯವರಿಗೆ ಸಂಪತ್ತಿನ ಸುರಿಮಳೆ..!

2025 ರಲ್ಲಿ ಗುರು ಗ್ರಹವು ತನ್ನ ಸ್ವಂತ ರಾಶಿಯಾದ ಮೇಷದಲ್ಲಿ ಸಂಚರಿಸುತ್ತಿದ್ದಾಗ, ಶುಕ್ರ…

9 hours ago

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

18 hours ago

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…

18 hours ago

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…

18 hours ago