Advertisement
MIRROR FOCUS

ಅಡಿಕೆ ಮಾರುಕಟ್ಟೆ | ಗುಜರಾತ್‌ ಚುನಾವಣೆ ಬಳಿಕ ಅಡಿಕೆ ಧಾರಣೆ ಏರಿಕೆ ನಿರೀಕ್ಷೆ |

Share

ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಏರಿಕೆಯ ಸೂಚನೆ ಕಂಡುಬಂದಿದೆ. ಚಾಲಿ ಅಡಿಕೆ ಧಾರಣೆ ಏರಿಕೆಯ ಹಾದಿಯಲ್ಲಿದ್ದು ಎರಡು ದಿನಗಳಿಂದ ಅಡಿಕೆ ಮಾರುಕಟ್ಟೆ ಉತ್ಸಾಹದ ಕಡೆಗೆ ಸಾಗಿದೆ. ಕ್ಯಾಂಪ್ಕೋ ಅಡಿಕೆ ಧಾರಣೆಯಲ್ಲಿ 5 ರೂಪಾಯಿ ಏರಿಕೆ ಮಾಡಿದೆ. ಇದರ ಬೆನ್ನಲ್ಲೇ ಖಾಸಗಿ ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೂಡಾ ಧಾರಣೆ ಏರಿಕೆಯ ಹಾದಿಯಲ್ಲಿ ಸಾಗಿದೆ.ಸದ್ಯ ಕ್ಯಾಂಪ್ಕೋ ಚಾಲಿ ಅಡಿಕೆಯ ಹೊಸ ಅಡಿಕೆಯನ್ನು 380 ಹಳೆ ಅಡಿಕೆ 490 ರೂಪಾಯಿಗೆ ಹಾಗೂ ಡಬಲ್‌ ಚೋಲ್‌ 545 ರೂಪಾಯಿಗೆ ಖರೀದಿ ನಡೆಸುತ್ತಿದೆ. 

Advertisement
Advertisement

ಗುಜರಾತ್‌ ಚುನಾವಣೆಯ ಬಳಿಕ ಅಡಿಕೆ ಧಾರಣೆ ಏರಿಕೆಯ ಹಾದಿಯಲ್ಲಿ ಸಾಗಲಿದೆ. ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ  ಭಾರೀ ನಿರೀಕ್ಷೆಯನ್ನು ಅಡಿಕೆ ಬೆಳೆಗಾರರು ಇರಿಸಿಕೊಳ್ಳಬೇಕಾಗಿಲ್ಲ ಎಂಬುದು ಮಾರುಕಟ್ಟೆ ವರದಿ ಹೇಳುತ್ತದೆ.

Advertisement

ಹೊಸ ಅಡಿಕೆ ಧಾರಣೆ ಈಗ 380 ರೂಪಾಯಿ ಇದ್ದು ಈ ಧಾರಣೆ ಇನ್ನೂ ಸ್ವಲ್ಪ ಏರಿಕೆಯ ನಿರೀಕ್ಷೆ ಇದೆ. ಹಳೆ ಅಡಿಕೆ ಧಾರಣೆಯು ಸದ್ಯ 480 ರೂಪಾಯಿ ಆಸುಪಾಸಿನಲ್ಲಿಯೇ ಮುಂದುವರಿದು ನಂತರ 450 ರೂಪಾಯಿ ಆಸುಪಾಸಿನಲ್ಲಿ ಅಡಿಕೆ ಮಾರುಕಟ್ಟೆ ನಿಲ್ಲಲಿದೆ. ಭಾರೀ ಪ್ರಮಾಣದಲ್ಲಿ ಅಡಿಕೆ ಮಾರುಕಟ್ಟೆ ಏರಿಕೆಯಾದರೆ ಅಡಿಕೆ ವ್ಯಾಪಾರಿಗಳಿಗೂ, ಮಾರಾಟಗಾರರಿಗೂ ಸಮಸ್ಯೆಯಾಗುವುದರಿಂದ ಈ ಬಾರಿ ಅಡಿಕೆ ಮಾರುಕಟ್ಟೆ ನಿಯಂತ್ರಣಕ್ಕೆ ಬರಲಿದೆ. ಸಂಸ್ಥೆಗಳು ಕೂಡಾ ಅಡಿಕೆ ಮಾರುಕಟ್ಟೆಯನ್ನು ಭಾರೀ ಪ್ರಮಾಣದಲ್ಲಿ ಏರಿಕೆಯಾಗದಂತೆ ತಡೆಯುವ ಸಾಧ್ಯತೆ ಹೆಚ್ಚಿದೆ. ಹಿಂದೆ ಚಾಲಿ ಹೊಸ ಅಡಿಕೆ ಹಾಗೂ ಹಳೆ ಅಡಿಕೆಗೆ 20-30 ರೂಪಾಯಿ ವ್ಯತ್ಯಾಸ ಇತ್ತು. ಈ ಬಾರಿ 100 ರೂಪಾಯಿ ವ್ಯತ್ಯಾಸ ಇದ್ದು ಈ ಅಂತರ ಕಡಿಮೆಯಾಗಲಿದೆ. 450 ರೂಪಾಯಿ ಧಾರಣೆಯಲ್ಲಿ ಸ್ಥಿರವಾಗುವ ನಿರೀಕ್ಷೆ ಇದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

2 hours ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

3 hours ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

6 hours ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

7 hours ago

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…

11 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

1 day ago