Advertisement
ಸುದ್ದಿಗಳು

ಅಡಿಕೆ ಮಾರುಕಟ್ಟೆ ಚೇತರಿಕೆಯಾಗಲಿದೆ – ಕ್ಯಾಂಪ್ಕೋ ಭರವಸೆ

Share

ಅಕಾಲಿಕ ಮಳೆ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಅಡಿಕೆ ಬೆಳೆ ಕುಸಿತ ಕಂಡಿದೆ. ಮುಂದಿನ ದಿನಗಳಲ್ಲಿ ಅಡಿಕೆಯ ಅಭಾವ ತೀವ್ರ ರೀತಿಯಲ್ಲಿ ಮಾರುಕಟ್ಟೆಯನ್ನು ಕಾಡಲಿದೆ. ಹಬ್ಬದ ನಂತರ ಮಾರುಕಟ್ಟೆ ಚೇತರಿಕೆ ಕಾಣುವ ಎಲ್ಲಾ ಲಕ್ಷಣಗಳು ಇರುವುದಾಗಿ ಅಡಿಕೆ ಮಾರುಕಟ್ಟೆ ತಜ್ಞರ ಅಭಿಪ್ರಾಯ. ಹೀಗಾಗಿ  ರೈತರು ಗಾಳಿಸುದ್ಧಿ ಮತ್ತು ಊಹಾಪೋಹಗಳಿಗೆ ಕಿವಿಗೊಡುವ ಅವಶ್ಯಕತೆ ಇಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿನ ಚುನಾವಣೆ ಮತ್ತು ಈಗ ವಿಪರೀತ ಚಳಿಯ ವಾತಾವರಣದಿಂದಾಗಿ ಅಡಿಕೆ ಮಾರುಕಟ್ಟೆ ಚೇತರಿಕೆ ಕಾಣಲು ಸಾಧ್ಯವಾಗಲಿಲ್ಲ. ಚಳಿಗಾಲದಲ್ಲಿ ದಾಸ್ತಾನಿನ ಸಮಸ್ಯೆಗಳನ್ನು ಎದುರಿಸುವುದರಿಂದ ಸಾಮಾನ್ಯವಾಗಿ ಪಾನ್‌ಮಸಾಲಾ ಕಂಪನಿಗಳು ಪೂರ್ಣ ಸಾಮರ್ಥ್ಯದಲ್ಲಿ ಉತ್ಪಾದನೆಯನ್ನು ಮಾಡುವುದಿಲ್ಲ. ಹಾಗಾಗಿ ಈ ಸಮಯದಲ್ಲಿ ಅಡಿಕೆಗೆ ಬೇಡಿಕೆ ಕುಸಿಯುವುದು ಸಾಮಾನ್ಯ. ಇದರ ಪರಿಣಾಮ ಕರಾವಳಿ ಭಾಗದ ಚಾಲಿ ಅಡಿಕೆಯ ಮಾರುಕಟ್ಟೆಯನ್ನೂ ಬಾಧಿಸುತ್ತದೆ. ಕಳೆದ ಒಂದು ತಿಂಗಳಿಂದ ತೀವ್ರ ಕುಸಿತ ಕಂಡಿದ್ದ ಕೆಂಪಡಿಕೆ ದರ ಎರಡು ದಿನಗಳಿಂದ ಚೇತರಿಸಿಕೊಳ್ಳುತ್ತಿದೆ ಮತ್ತು ಉತ್ತರ ಭಾರತದ ವರ್ತಕರಿಂದ ಉತ್ತಮ ಬೇಡಿಕೆಗಳು ಬರುತ್ತಿವೆ.

ಕಳೆದ ಎರಡು ತಿಂಗಳಿಗೂ ಮೇಲ್ಪಟ್ಟು ಚಾಲಿ ಅಡಿಕೆ ಉತ್ತರ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ರವಾನೆಯಾಗಿರುವುದಿಲ್ಲ. ಇದರಿಂದ ಅಲ್ಲಿ ಚಾಲಿ ಅಡಿಕೆ ದಾಸ್ತಾನು ಅಗತ್ಯಕ್ಕಿಂತ ತುಂಬಾ ಕಡಿಮೆಯಾಗಿದೆ. ಸಹಕಾರಿ ಸಂಘಗಳ ನಿರಂತರ ಅನುಸರಣಾ ಕ್ರಮಗಳಿಂದಾಗಿ ಕನಿಷ್ಠ ಅಮದು ಬೆಲೆಯನ್ನು ಹೆಚ್ಚಿಸಿ ಆದೇಶ ಹೊರಡಿಸುವಂತೆ ,ವಾಣಿಜ್ಯ ಸಚಿವಾಲಯದಿಂದ ಕೃಷಿಸಚಿವಾಲಯಕ್ಕೆ ಶಿಫಾರಸ್ಸನ್ನು ಕಳುಹಿಸಲಾಗಿದೆ. ಶೀಘ್ರ ಆದೇಶ ನೀಡುವುದಾಗಿ ಕೇಂದ್ರ ಸಚಿವೆ ಶೋಭ ಕರಂದ್ಲಾಜೆಯವರು ಆಶ್ವಾಸನೆ ನೀಡಿದ್ದಾರೆ. ಕೇಂದ್ರದ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ವಿದೇಶಿ ಅಡಿಕೆಯ ಆಮದಿಗೆ ತಡೆಬಿದ್ದಿದೆ. ಅದಕ್ಕಾಗಿ ಕ್ಯಾಂಪ್ಕೊ ಕೇಂದ್ರ ಸರಕಾರಕ್ಕೆ ಅಭಿನಂದನೆ ಸಲ್ಲಿಸುತ್ತದೆ. ಸಂಕ್ರಾಂತಿ ಹಬ್ಬದ ನಂತರ ಚಳಿ ಕಡಿಮೆಯಾಗಿ ಬೇಡಿಕೆ ಉತ್ತಮಗೊಳ್ಳುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಸದ್ಯ ರೈತರು ಹಣದ ಅವಶ್ಯಕತೆ ಇರುವಷ್ಟೇ ಅಡಿಕೆ ಮಾರಾಟ ಮಾಡವುದರ ಮೂಲಕ ಮಾರುಕಟ್ಟೆಯಲ್ಲಿ ಆಗಬಹುದಾದ ಚೇತರಿಕೆಯ ಲಾಭದ ಸದುಪಯೋಗ ಪಡೆಯಬಹುದು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

5 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

5 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

9 hours ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

9 hours ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

9 hours ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

9 hours ago