Advertisement
ಸುದ್ದಿಗಳು

ಅಡಿಕೆ ಮಾರುಕಟ್ಟೆ ಚೇತರಿಕೆಯಾಗಲಿದೆ – ಕ್ಯಾಂಪ್ಕೋ ಭರವಸೆ

Share

ಅಕಾಲಿಕ ಮಳೆ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಅಡಿಕೆ ಬೆಳೆ ಕುಸಿತ ಕಂಡಿದೆ. ಮುಂದಿನ ದಿನಗಳಲ್ಲಿ ಅಡಿಕೆಯ ಅಭಾವ ತೀವ್ರ ರೀತಿಯಲ್ಲಿ ಮಾರುಕಟ್ಟೆಯನ್ನು ಕಾಡಲಿದೆ. ಹಬ್ಬದ ನಂತರ ಮಾರುಕಟ್ಟೆ ಚೇತರಿಕೆ ಕಾಣುವ ಎಲ್ಲಾ ಲಕ್ಷಣಗಳು ಇರುವುದಾಗಿ ಅಡಿಕೆ ಮಾರುಕಟ್ಟೆ ತಜ್ಞರ ಅಭಿಪ್ರಾಯ. ಹೀಗಾಗಿ  ರೈತರು ಗಾಳಿಸುದ್ಧಿ ಮತ್ತು ಊಹಾಪೋಹಗಳಿಗೆ ಕಿವಿಗೊಡುವ ಅವಶ್ಯಕತೆ ಇಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿನ ಚುನಾವಣೆ ಮತ್ತು ಈಗ ವಿಪರೀತ ಚಳಿಯ ವಾತಾವರಣದಿಂದಾಗಿ ಅಡಿಕೆ ಮಾರುಕಟ್ಟೆ ಚೇತರಿಕೆ ಕಾಣಲು ಸಾಧ್ಯವಾಗಲಿಲ್ಲ. ಚಳಿಗಾಲದಲ್ಲಿ ದಾಸ್ತಾನಿನ ಸಮಸ್ಯೆಗಳನ್ನು ಎದುರಿಸುವುದರಿಂದ ಸಾಮಾನ್ಯವಾಗಿ ಪಾನ್‌ಮಸಾಲಾ ಕಂಪನಿಗಳು ಪೂರ್ಣ ಸಾಮರ್ಥ್ಯದಲ್ಲಿ ಉತ್ಪಾದನೆಯನ್ನು ಮಾಡುವುದಿಲ್ಲ. ಹಾಗಾಗಿ ಈ ಸಮಯದಲ್ಲಿ ಅಡಿಕೆಗೆ ಬೇಡಿಕೆ ಕುಸಿಯುವುದು ಸಾಮಾನ್ಯ. ಇದರ ಪರಿಣಾಮ ಕರಾವಳಿ ಭಾಗದ ಚಾಲಿ ಅಡಿಕೆಯ ಮಾರುಕಟ್ಟೆಯನ್ನೂ ಬಾಧಿಸುತ್ತದೆ. ಕಳೆದ ಒಂದು ತಿಂಗಳಿಂದ ತೀವ್ರ ಕುಸಿತ ಕಂಡಿದ್ದ ಕೆಂಪಡಿಕೆ ದರ ಎರಡು ದಿನಗಳಿಂದ ಚೇತರಿಸಿಕೊಳ್ಳುತ್ತಿದೆ ಮತ್ತು ಉತ್ತರ ಭಾರತದ ವರ್ತಕರಿಂದ ಉತ್ತಮ ಬೇಡಿಕೆಗಳು ಬರುತ್ತಿವೆ.

ಕಳೆದ ಎರಡು ತಿಂಗಳಿಗೂ ಮೇಲ್ಪಟ್ಟು ಚಾಲಿ ಅಡಿಕೆ ಉತ್ತರ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ರವಾನೆಯಾಗಿರುವುದಿಲ್ಲ. ಇದರಿಂದ ಅಲ್ಲಿ ಚಾಲಿ ಅಡಿಕೆ ದಾಸ್ತಾನು ಅಗತ್ಯಕ್ಕಿಂತ ತುಂಬಾ ಕಡಿಮೆಯಾಗಿದೆ. ಸಹಕಾರಿ ಸಂಘಗಳ ನಿರಂತರ ಅನುಸರಣಾ ಕ್ರಮಗಳಿಂದಾಗಿ ಕನಿಷ್ಠ ಅಮದು ಬೆಲೆಯನ್ನು ಹೆಚ್ಚಿಸಿ ಆದೇಶ ಹೊರಡಿಸುವಂತೆ ,ವಾಣಿಜ್ಯ ಸಚಿವಾಲಯದಿಂದ ಕೃಷಿಸಚಿವಾಲಯಕ್ಕೆ ಶಿಫಾರಸ್ಸನ್ನು ಕಳುಹಿಸಲಾಗಿದೆ. ಶೀಘ್ರ ಆದೇಶ ನೀಡುವುದಾಗಿ ಕೇಂದ್ರ ಸಚಿವೆ ಶೋಭ ಕರಂದ್ಲಾಜೆಯವರು ಆಶ್ವಾಸನೆ ನೀಡಿದ್ದಾರೆ. ಕೇಂದ್ರದ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ವಿದೇಶಿ ಅಡಿಕೆಯ ಆಮದಿಗೆ ತಡೆಬಿದ್ದಿದೆ. ಅದಕ್ಕಾಗಿ ಕ್ಯಾಂಪ್ಕೊ ಕೇಂದ್ರ ಸರಕಾರಕ್ಕೆ ಅಭಿನಂದನೆ ಸಲ್ಲಿಸುತ್ತದೆ. ಸಂಕ್ರಾಂತಿ ಹಬ್ಬದ ನಂತರ ಚಳಿ ಕಡಿಮೆಯಾಗಿ ಬೇಡಿಕೆ ಉತ್ತಮಗೊಳ್ಳುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಸದ್ಯ ರೈತರು ಹಣದ ಅವಶ್ಯಕತೆ ಇರುವಷ್ಟೇ ಅಡಿಕೆ ಮಾರಾಟ ಮಾಡವುದರ ಮೂಲಕ ಮಾರುಕಟ್ಟೆಯಲ್ಲಿ ಆಗಬಹುದಾದ ಚೇತರಿಕೆಯ ಲಾಭದ ಸದುಪಯೋಗ ಪಡೆಯಬಹುದು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

4 days ago