ಅಕಾಲಿಕ ಮಳೆ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಅಡಿಕೆ ಬೆಳೆ ಕುಸಿತ ಕಂಡಿದೆ. ಮುಂದಿನ ದಿನಗಳಲ್ಲಿ ಅಡಿಕೆಯ ಅಭಾವ ತೀವ್ರ ರೀತಿಯಲ್ಲಿ ಮಾರುಕಟ್ಟೆಯನ್ನು ಕಾಡಲಿದೆ. ಹಬ್ಬದ ನಂತರ ಮಾರುಕಟ್ಟೆ ಚೇತರಿಕೆ ಕಾಣುವ ಎಲ್ಲಾ ಲಕ್ಷಣಗಳು ಇರುವುದಾಗಿ ಅಡಿಕೆ ಮಾರುಕಟ್ಟೆ ತಜ್ಞರ ಅಭಿಪ್ರಾಯ. ಹೀಗಾಗಿ ರೈತರು ಗಾಳಿಸುದ್ಧಿ ಮತ್ತು ಊಹಾಪೋಹಗಳಿಗೆ ಕಿವಿಗೊಡುವ ಅವಶ್ಯಕತೆ ಇಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿನ ಚುನಾವಣೆ ಮತ್ತು ಈಗ ವಿಪರೀತ ಚಳಿಯ ವಾತಾವರಣದಿಂದಾಗಿ ಅಡಿಕೆ ಮಾರುಕಟ್ಟೆ ಚೇತರಿಕೆ ಕಾಣಲು ಸಾಧ್ಯವಾಗಲಿಲ್ಲ. ಚಳಿಗಾಲದಲ್ಲಿ ದಾಸ್ತಾನಿನ ಸಮಸ್ಯೆಗಳನ್ನು ಎದುರಿಸುವುದರಿಂದ ಸಾಮಾನ್ಯವಾಗಿ ಪಾನ್ಮಸಾಲಾ ಕಂಪನಿಗಳು ಪೂರ್ಣ ಸಾಮರ್ಥ್ಯದಲ್ಲಿ ಉತ್ಪಾದನೆಯನ್ನು ಮಾಡುವುದಿಲ್ಲ. ಹಾಗಾಗಿ ಈ ಸಮಯದಲ್ಲಿ ಅಡಿಕೆಗೆ ಬೇಡಿಕೆ ಕುಸಿಯುವುದು ಸಾಮಾನ್ಯ. ಇದರ ಪರಿಣಾಮ ಕರಾವಳಿ ಭಾಗದ ಚಾಲಿ ಅಡಿಕೆಯ ಮಾರುಕಟ್ಟೆಯನ್ನೂ ಬಾಧಿಸುತ್ತದೆ. ಕಳೆದ ಒಂದು ತಿಂಗಳಿಂದ ತೀವ್ರ ಕುಸಿತ ಕಂಡಿದ್ದ ಕೆಂಪಡಿಕೆ ದರ ಎರಡು ದಿನಗಳಿಂದ ಚೇತರಿಸಿಕೊಳ್ಳುತ್ತಿದೆ ಮತ್ತು ಉತ್ತರ ಭಾರತದ ವರ್ತಕರಿಂದ ಉತ್ತಮ ಬೇಡಿಕೆಗಳು ಬರುತ್ತಿವೆ.
ಕಳೆದ ಎರಡು ತಿಂಗಳಿಗೂ ಮೇಲ್ಪಟ್ಟು ಚಾಲಿ ಅಡಿಕೆ ಉತ್ತರ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ರವಾನೆಯಾಗಿರುವುದಿಲ್ಲ. ಇದರಿಂದ ಅಲ್ಲಿ ಚಾಲಿ ಅಡಿಕೆ ದಾಸ್ತಾನು ಅಗತ್ಯಕ್ಕಿಂತ ತುಂಬಾ ಕಡಿಮೆಯಾಗಿದೆ. ಸಹಕಾರಿ ಸಂಘಗಳ ನಿರಂತರ ಅನುಸರಣಾ ಕ್ರಮಗಳಿಂದಾಗಿ ಕನಿಷ್ಠ ಅಮದು ಬೆಲೆಯನ್ನು ಹೆಚ್ಚಿಸಿ ಆದೇಶ ಹೊರಡಿಸುವಂತೆ ,ವಾಣಿಜ್ಯ ಸಚಿವಾಲಯದಿಂದ ಕೃಷಿಸಚಿವಾಲಯಕ್ಕೆ ಶಿಫಾರಸ್ಸನ್ನು ಕಳುಹಿಸಲಾಗಿದೆ. ಶೀಘ್ರ ಆದೇಶ ನೀಡುವುದಾಗಿ ಕೇಂದ್ರ ಸಚಿವೆ ಶೋಭ ಕರಂದ್ಲಾಜೆಯವರು ಆಶ್ವಾಸನೆ ನೀಡಿದ್ದಾರೆ. ಕೇಂದ್ರದ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ವಿದೇಶಿ ಅಡಿಕೆಯ ಆಮದಿಗೆ ತಡೆಬಿದ್ದಿದೆ. ಅದಕ್ಕಾಗಿ ಕ್ಯಾಂಪ್ಕೊ ಕೇಂದ್ರ ಸರಕಾರಕ್ಕೆ ಅಭಿನಂದನೆ ಸಲ್ಲಿಸುತ್ತದೆ. ಸಂಕ್ರಾಂತಿ ಹಬ್ಬದ ನಂತರ ಚಳಿ ಕಡಿಮೆಯಾಗಿ ಬೇಡಿಕೆ ಉತ್ತಮಗೊಳ್ಳುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ ಎಂದು ಅವರು ತಿಳಿಸಿದ್ದಾರೆ.
ಸದ್ಯ ರೈತರು ಹಣದ ಅವಶ್ಯಕತೆ ಇರುವಷ್ಟೇ ಅಡಿಕೆ ಮಾರಾಟ ಮಾಡವುದರ ಮೂಲಕ ಮಾರುಕಟ್ಟೆಯಲ್ಲಿ ಆಗಬಹುದಾದ ಚೇತರಿಕೆಯ ಲಾಭದ ಸದುಪಯೋಗ ಪಡೆಯಬಹುದು.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…