MIRROR FOCUS

ಅಡಿಕೆ ಮಾರುಕಟ್ಟೆ ಏಕೆ ಇಳಿಕೆಯಾಗುತ್ತಿದೆ…? | ಬರ್ಮಾ ಅಡಿಕೆ ಮಿಕ್ಸ್‌ ಆಗುತ್ತಿದೆಯೇ ಇಲ್ಲಿನ ಅಡಿಕೆಗೆ….? | ಬೆಳೆಗಾರರು ಮಾಡಬೇಕಾದ್ದೇನು..?

Share

ಕಳೆದ ಒಂದು ವಾರದಿಂದ ಅಡಿಕೆ ಧಾರಣೆ ಸ್ಥಿರತೆಯಲ್ಲಿ ಇಲ್ಲ.ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ. ಈಗಿನ ಟ್ರೆಂಡ್‌ ಪ್ರಕಾರ ಚಾಲಿ ಅಡಿಕೆ ಮಾರುಕಟ್ಟೆಯು 420 ಹಾಗೂ 425 ರೂಪಾಯಿ ಆಸುಪಾಸಿಗೆ ಬರಲಿದೆ. ಈ ನಡುವೆಯೇ ಅಡಿಕೆ ಮಾರುಕಟ್ಟೆಯನ್ನು ಅಸ್ಥಿರ ಮಾಡುವ ಪ್ರಯತ್ನವೂ ನಡೆಯುತ್ತಿದೆ ಎಂಬ ಅನುಮಾನ ಮೂಡುತ್ತಿದೆ. ಬರ್ಮಾ ಅಡಿಕೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗೆ ಬಂದಿದೆ ಎನ್ನುವ ಮಾಹಿತಿ ಇದೆ. ಇದಕ್ಕಾಗಿ ಅಡಿಕೆ ಬೆಳೆಗಾರರು ಜಾಗೃತರಾಗಬೇಕಿದೆ.

ಅಡಿಕೆ ಧಾರಣೆ ಕಳೆದ ಕೆಲವು ದಿನಗಳಿಂದ ಇಳಿಕೆಯಾಗುತ್ತಿದೆ. ಎರಡು ದಿನಗಳ ಹಿಂದೆ ಚಾಲಿ ಹಳೆ ಅಡಿಕೆ ಧಾರಣೆ ಏರಿಕೆ ಎಂದು ಖಾಸಗಿ ವಲಯದಲ್ಲಿ ಹೇಳಿದ್ದರೂ, ಮತ್ತೆ ಇಳಿಕೆಯಲ್ಲಿದೆ. ಹೊಸ ಚಾಲಿ ಅಡಿಕೆಯಲ್ಲೂ ಏರಿಕೆ ಕಾಣಲಿಲ್ಲ. ಚೋಲ್‌ ಅಡಿಕೆ ಮಾರುಕಟ್ಟೆಯೂ ತೇಜಿ ಇಲ್ಲ. ಈ ನಡುವೆ ಧಾರಣೆ ಮತ್ತಷ್ಟು ಇಳಿಕೆ ಮಾಡುವ ತಂತ್ರ ನಡೆಯುತ್ತಿದೆ ಎಂದು ಮಾರುಕಟ್ಟೆ ವಲಯ ಅಭಿಪ್ರಾಯಪಡುತ್ತಿದೆ. ಇದಕ್ಕಾಗಿ ಅಡಿಕೆ ಬೆಳೆಗಾರರು ಎಚ್ಚರಿಕೆ ವಹಿಸಬೇಕಿದೆ.

ಕೃಷಿಕರ ಸಂಸ್ಥೆಯಾಗಿರುವ ಕ್ಯಾಂಪ್ಕೋ ಅಡಿಕೆ ಧಾರಣೆಯನ್ನು ಸ್ವಲ್ಪ ಮಟ್ಟಿಗೆ ಕುಸಿಯದಂತೆ ತಡೆದಿದೆ. ಕುಸಿತ ಕಾಣಲು ಬಿಡಲಿಲ್ಲ. ಹೀಗಾಗಿ ಈಗ ಏಕಾಏಕಿ ಹೆಚ್ಚಿನ ಪ್ರಮಾಣದ ಅಡಿಕೆಯನ್ನು ಕ್ಯಾಂಪ್ಕೋ ಮೂಲಕ ಮಾರಾಟ ಮಾಡುವ ತಂತ್ರ ನಡೆಯುತ್ತಿದೆ. ಈ ಮೂಲಕ ಅಡಿಕೆ ಮಾರುಕಟ್ಟೆಯನ್ನು ಇಳಿಕೆ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಡುತ್ತಿದ್ದಾರೆ. ಕಳೆದ ಎರಡು ಮೂರು ದಿನಗಳಿಂದ ಕ್ಯಾಂಪ್ಕೋ ಮೂಲಕ ವಿವಿಧ ಕಡೆ ಕೆಲವು ಖಾಸಗಿ ವಲಯದ ವ್ಯಾಪಾರಿಗಳು ಅಡಿಕೆಯನ್ನು ಮಾರಾಟ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ ಎನ್ನುವುದು ಮಾರುಕಟ್ಟೆ ವಲಯದಿಂದ ಬಂದಿರುವ ಮಾಹಿತಿ.

ಒಮ್ಮೆಲೇ ಅಧಿಕ ಪ್ರಮಾಣದ ಅಡಿಕೆಯನ್ನು ಕ್ಯಾಂಪ್ಕೋ ಮೂಲಕ ಮಾರಾಟ ಮಾಡಿ ಮಾರುಕಟ್ಟೆಯನ್ನು ಮತ್ತಷ್ಟು ಇಳಿಕೆ ಮಾಡುವ ತಂತ್ರ ಇದು. ಆ ಬಳಿಕ ಮತ್ತೆ ಧಾರಣೆ ಏರಿಕೆ ಮಾಡಿ ಮದ್ಯವರ್ತಿಗಳು ಲಾಭಗಳಿಸುವ ವ್ಯವಸ್ಥಿತವಾದ ಜಾಲವೊಂದು ಇದರ ಹಿಂದೆ ಇದೆ ಎಂದು ಮಾಹಿತಿ.

ಇದರ ಜೊತೆಗೇ ಅಡಿಕೆ ಮಾರುಕಟ್ಟೆಯಲ್ಲಿ ಈಗ ಬರ್ಮಾ ಅಡಿಕೆ ಸದ್ದು ಮಾಡುತ್ತಿದೆ. ಗ್ರಾಮೀಣ ಭಾಗದವರೆಗೂ ಈ ಅಡಿಕೆ ಈಗ ಬರುತ್ತಿದೆ. ಬರ್ಮಾ ಅಡಿಕೆಯನ್ನು ಇಲ್ಲಿನ ಅಡಿಕೆ ಜೊತೆ ಮಿಶ್ರಣ ಮಾಡಿ ಕ್ಯಾಂಪ್ಕೋ ಸಹಿತ ಕೆಲವು ಕಡೆ ಮಾರಾಟ ಮಾಡುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಹಿಂದೆಯೂ ಇಂತಹದ್ದೇ ತಂತ್ರ ನಡೆದಿತ್ತು, ಆಗಲೂ ಅಡಿಕೆ ಧಾರಣೆ ಕುಸಿತ ಕಂಡಿತ್ತು.

ಹೀಗಾಗಿ ಈಗ ಅಡಿಕೆ ಬೆಳೆಗಾರರು ತೀರಾ ಎಚ್ಚರಿಕೆ ವಹಿಸಬೇಕಾಗಿದೆ. ಬೆಳೆಗಾರರು ನೇರವಾಗಿ ಸಹಕಾರಿ ಸಂಸ್ಥೆಗಳಿಗೆ ಅಥವಾ ಅಧಿಕೃತ ವ್ಯಾಪಾರಿಗಳಿಗೆ ಕೃಷಿಕರಿಗೆ ಅಗತ್ಯಕ್ಕೆ  ತಕ್ಕಂತೆ ಅಡಿಕೆ ಮಾರಾಟ ಮಾಡುವ ಮೂಲಕ ಅಡಿಕೆ ಮಾರುಕಟ್ಟೆಯನ್ನು ಸ್ಥಿರತೆ ಮಾಡುವಲ್ಲಿ ಪ್ರಯತ್ನ ನಡೆಸಬೇಕಿದೆ. ಕ್ಯಾಂಪ್ಕೋ ಕೂಡಾ  ಅಡಿಕೆ ಧಾರಣೆ ಸ್ಥಿರತೆಗೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ. ಬರ್ಮಾ ಅಡಿಕೆ ಮಿಶ್ರಣಗೊಂಡು ಕ್ಯಾಂಪ್ಕೋ ಕೇಂದ್ರಗಳಿಗೂ ಬರುವ ಸಾಧ್ಯತೆ ಇರುವುದರಿಂದ ಬೆಳೆಗಾರರ ಹೊರತಾದ ಅಡಿಕೆ ಖರೀದಿಯ ವೇಳೆಯೂ ಎಚ್ಚರಿಕೆ ಅಗತ್ಯ ಇದೆ. ಈ ಹಿಂದೆ ಮಳೆಯ ಕಾರಣದಿಂದ ಅಡಿಕೆ ಗುಣಮಟ್ಟ ಕುಸಿತವಾಗಿ ಸಂಸ್ಥೆಗೆ ನಷ್ಟ ಉಂಟಾಗಿತ್ತು. ಈಗ ಮತ್ತೆ ಬರ್ಮಾದಂತಹ ಕಳಪೆ ಗುಣಮಟ್ಟದ ಅಡಿಕೆ ಸಂಸ್ಥೆಯ ಗೋದಾಮು ಸೇರದಂತೆ ಎಚ್ಚರ ವಹಿಸಬೇಕಿದೆ.

ಅಡಿಕೆ ಮಾರುಕಟ್ಟೆ ಕಳೆದ ಕೆಲವು ದಿನಗಳಿಂದಲೂ ಉತ್ಸಾಹದಲ್ಲಿ ಇಲ್ಲ. ಅಡಿಕೆ ಧಾರಣೆ  ವಿಪರೀತ ಏರಿಕೆಯ ಕಾರಣದಿಂದ  ಅಡಿಕೆ ಬಳಸುವ ಪ್ರದೇಶಗಳಲ್ಲಿ ಅಡಿಕೆ ಮಾರಾಟವೂ ಸಲೀಸಾಗಿ ನಡೆಯುತ್ತಿರಲಿಲ್ಲ. ಇದಕ್ಕಾಗಿ ಬೇಡಿಕೆಯ ಕೊರತೆ ಉಂಟಾಗಿ ಅಡಿಕೆ ಧಾರಣೆಯೂ ಇಳಿಕೆಯಾಗುತ್ತಿದೆ. ಇದರ ಜೊತೆಗೇ ಕಳಪೆ ಗುಣಮಟ್ಟದ ಬರ್ಮಾ ಅಡಿಕೆ ಹಾವಳಿ ಈಚೆಗೆ ಹೆಚ್ಚಾಗಿದೆ. ಇದೆಲ್ಲಾ ಕಾರಣದಿಂದ ಅಡಿಕೆ ಧಾರಣೆ ಸದ್ಯ ಇಳಿಕೆಯಾಗಿದೆ. ಪ್ರತೀ ಬಾರಿ ಚೌತಿಯ ನಂತರ ಅಡಿಕೆ ಧಾರಣೆ ಏರಿಕೆಯಾಗುತ್ತದೆ. ಈ ಬಾರಿ ಮಾತ್ರಾ ಇಳಿಕೆಯಾಗಿದೆ. ಈಗ ಅಡಿಕೆ ಬೆಳೆಗಾರರೂ ಎಚ್ಚರವಾಗಿದ್ದರೆ ಧಾರಣೆಯಲ್ಲಿ ಕೊಂಚ ಸುಧಾರಣೆ ಸಾಧ್ಯವಿದೆ. ಮುಂದಿನ 15 ದಿನಗಳ ಒಳಗೆ ಧಾರಣೆ ಸ್ಥಿರತೆ ಸಾಧ್ಯ ಇದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…

2 hours ago

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…

2 hours ago

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…

17 hours ago

ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…

17 hours ago

ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…

17 hours ago

ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ

ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…

17 hours ago