Advertisement
MIRROR FOCUS

ಅಡಿಕೆ ಮಾರುಕಟ್ಟೆ ಏಕೆ ಇಳಿಕೆಯಾಗುತ್ತಿದೆ…? | ಬರ್ಮಾ ಅಡಿಕೆ ಮಿಕ್ಸ್‌ ಆಗುತ್ತಿದೆಯೇ ಇಲ್ಲಿನ ಅಡಿಕೆಗೆ….? | ಬೆಳೆಗಾರರು ಮಾಡಬೇಕಾದ್ದೇನು..?

Share

ಕಳೆದ ಒಂದು ವಾರದಿಂದ ಅಡಿಕೆ ಧಾರಣೆ ಸ್ಥಿರತೆಯಲ್ಲಿ ಇಲ್ಲ.ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ. ಈಗಿನ ಟ್ರೆಂಡ್‌ ಪ್ರಕಾರ ಚಾಲಿ ಅಡಿಕೆ ಮಾರುಕಟ್ಟೆಯು 420 ಹಾಗೂ 425 ರೂಪಾಯಿ ಆಸುಪಾಸಿಗೆ ಬರಲಿದೆ. ಈ ನಡುವೆಯೇ ಅಡಿಕೆ ಮಾರುಕಟ್ಟೆಯನ್ನು ಅಸ್ಥಿರ ಮಾಡುವ ಪ್ರಯತ್ನವೂ ನಡೆಯುತ್ತಿದೆ ಎಂಬ ಅನುಮಾನ ಮೂಡುತ್ತಿದೆ. ಬರ್ಮಾ ಅಡಿಕೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗೆ ಬಂದಿದೆ ಎನ್ನುವ ಮಾಹಿತಿ ಇದೆ. ಇದಕ್ಕಾಗಿ ಅಡಿಕೆ ಬೆಳೆಗಾರರು ಜಾಗೃತರಾಗಬೇಕಿದೆ.

ಅಡಿಕೆ ಧಾರಣೆ ಕಳೆದ ಕೆಲವು ದಿನಗಳಿಂದ ಇಳಿಕೆಯಾಗುತ್ತಿದೆ. ಎರಡು ದಿನಗಳ ಹಿಂದೆ ಚಾಲಿ ಹಳೆ ಅಡಿಕೆ ಧಾರಣೆ ಏರಿಕೆ ಎಂದು ಖಾಸಗಿ ವಲಯದಲ್ಲಿ ಹೇಳಿದ್ದರೂ, ಮತ್ತೆ ಇಳಿಕೆಯಲ್ಲಿದೆ. ಹೊಸ ಚಾಲಿ ಅಡಿಕೆಯಲ್ಲೂ ಏರಿಕೆ ಕಾಣಲಿಲ್ಲ. ಚೋಲ್‌ ಅಡಿಕೆ ಮಾರುಕಟ್ಟೆಯೂ ತೇಜಿ ಇಲ್ಲ. ಈ ನಡುವೆ ಧಾರಣೆ ಮತ್ತಷ್ಟು ಇಳಿಕೆ ಮಾಡುವ ತಂತ್ರ ನಡೆಯುತ್ತಿದೆ ಎಂದು ಮಾರುಕಟ್ಟೆ ವಲಯ ಅಭಿಪ್ರಾಯಪಡುತ್ತಿದೆ. ಇದಕ್ಕಾಗಿ ಅಡಿಕೆ ಬೆಳೆಗಾರರು ಎಚ್ಚರಿಕೆ ವಹಿಸಬೇಕಿದೆ.

ಕೃಷಿಕರ ಸಂಸ್ಥೆಯಾಗಿರುವ ಕ್ಯಾಂಪ್ಕೋ ಅಡಿಕೆ ಧಾರಣೆಯನ್ನು ಸ್ವಲ್ಪ ಮಟ್ಟಿಗೆ ಕುಸಿಯದಂತೆ ತಡೆದಿದೆ. ಕುಸಿತ ಕಾಣಲು ಬಿಡಲಿಲ್ಲ. ಹೀಗಾಗಿ ಈಗ ಏಕಾಏಕಿ ಹೆಚ್ಚಿನ ಪ್ರಮಾಣದ ಅಡಿಕೆಯನ್ನು ಕ್ಯಾಂಪ್ಕೋ ಮೂಲಕ ಮಾರಾಟ ಮಾಡುವ ತಂತ್ರ ನಡೆಯುತ್ತಿದೆ. ಈ ಮೂಲಕ ಅಡಿಕೆ ಮಾರುಕಟ್ಟೆಯನ್ನು ಇಳಿಕೆ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಡುತ್ತಿದ್ದಾರೆ. ಕಳೆದ ಎರಡು ಮೂರು ದಿನಗಳಿಂದ ಕ್ಯಾಂಪ್ಕೋ ಮೂಲಕ ವಿವಿಧ ಕಡೆ ಕೆಲವು ಖಾಸಗಿ ವಲಯದ ವ್ಯಾಪಾರಿಗಳು ಅಡಿಕೆಯನ್ನು ಮಾರಾಟ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ ಎನ್ನುವುದು ಮಾರುಕಟ್ಟೆ ವಲಯದಿಂದ ಬಂದಿರುವ ಮಾಹಿತಿ.

ಒಮ್ಮೆಲೇ ಅಧಿಕ ಪ್ರಮಾಣದ ಅಡಿಕೆಯನ್ನು ಕ್ಯಾಂಪ್ಕೋ ಮೂಲಕ ಮಾರಾಟ ಮಾಡಿ ಮಾರುಕಟ್ಟೆಯನ್ನು ಮತ್ತಷ್ಟು ಇಳಿಕೆ ಮಾಡುವ ತಂತ್ರ ಇದು. ಆ ಬಳಿಕ ಮತ್ತೆ ಧಾರಣೆ ಏರಿಕೆ ಮಾಡಿ ಮದ್ಯವರ್ತಿಗಳು ಲಾಭಗಳಿಸುವ ವ್ಯವಸ್ಥಿತವಾದ ಜಾಲವೊಂದು ಇದರ ಹಿಂದೆ ಇದೆ ಎಂದು ಮಾಹಿತಿ.

ಇದರ ಜೊತೆಗೇ ಅಡಿಕೆ ಮಾರುಕಟ್ಟೆಯಲ್ಲಿ ಈಗ ಬರ್ಮಾ ಅಡಿಕೆ ಸದ್ದು ಮಾಡುತ್ತಿದೆ. ಗ್ರಾಮೀಣ ಭಾಗದವರೆಗೂ ಈ ಅಡಿಕೆ ಈಗ ಬರುತ್ತಿದೆ. ಬರ್ಮಾ ಅಡಿಕೆಯನ್ನು ಇಲ್ಲಿನ ಅಡಿಕೆ ಜೊತೆ ಮಿಶ್ರಣ ಮಾಡಿ ಕ್ಯಾಂಪ್ಕೋ ಸಹಿತ ಕೆಲವು ಕಡೆ ಮಾರಾಟ ಮಾಡುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಹಿಂದೆಯೂ ಇಂತಹದ್ದೇ ತಂತ್ರ ನಡೆದಿತ್ತು, ಆಗಲೂ ಅಡಿಕೆ ಧಾರಣೆ ಕುಸಿತ ಕಂಡಿತ್ತು.

ಹೀಗಾಗಿ ಈಗ ಅಡಿಕೆ ಬೆಳೆಗಾರರು ತೀರಾ ಎಚ್ಚರಿಕೆ ವಹಿಸಬೇಕಾಗಿದೆ. ಬೆಳೆಗಾರರು ನೇರವಾಗಿ ಸಹಕಾರಿ ಸಂಸ್ಥೆಗಳಿಗೆ ಅಥವಾ ಅಧಿಕೃತ ವ್ಯಾಪಾರಿಗಳಿಗೆ ಕೃಷಿಕರಿಗೆ ಅಗತ್ಯಕ್ಕೆ  ತಕ್ಕಂತೆ ಅಡಿಕೆ ಮಾರಾಟ ಮಾಡುವ ಮೂಲಕ ಅಡಿಕೆ ಮಾರುಕಟ್ಟೆಯನ್ನು ಸ್ಥಿರತೆ ಮಾಡುವಲ್ಲಿ ಪ್ರಯತ್ನ ನಡೆಸಬೇಕಿದೆ. ಕ್ಯಾಂಪ್ಕೋ ಕೂಡಾ  ಅಡಿಕೆ ಧಾರಣೆ ಸ್ಥಿರತೆಗೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ. ಬರ್ಮಾ ಅಡಿಕೆ ಮಿಶ್ರಣಗೊಂಡು ಕ್ಯಾಂಪ್ಕೋ ಕೇಂದ್ರಗಳಿಗೂ ಬರುವ ಸಾಧ್ಯತೆ ಇರುವುದರಿಂದ ಬೆಳೆಗಾರರ ಹೊರತಾದ ಅಡಿಕೆ ಖರೀದಿಯ ವೇಳೆಯೂ ಎಚ್ಚರಿಕೆ ಅಗತ್ಯ ಇದೆ. ಈ ಹಿಂದೆ ಮಳೆಯ ಕಾರಣದಿಂದ ಅಡಿಕೆ ಗುಣಮಟ್ಟ ಕುಸಿತವಾಗಿ ಸಂಸ್ಥೆಗೆ ನಷ್ಟ ಉಂಟಾಗಿತ್ತು. ಈಗ ಮತ್ತೆ ಬರ್ಮಾದಂತಹ ಕಳಪೆ ಗುಣಮಟ್ಟದ ಅಡಿಕೆ ಸಂಸ್ಥೆಯ ಗೋದಾಮು ಸೇರದಂತೆ ಎಚ್ಚರ ವಹಿಸಬೇಕಿದೆ.

ಅಡಿಕೆ ಮಾರುಕಟ್ಟೆ ಕಳೆದ ಕೆಲವು ದಿನಗಳಿಂದಲೂ ಉತ್ಸಾಹದಲ್ಲಿ ಇಲ್ಲ. ಅಡಿಕೆ ಧಾರಣೆ  ವಿಪರೀತ ಏರಿಕೆಯ ಕಾರಣದಿಂದ  ಅಡಿಕೆ ಬಳಸುವ ಪ್ರದೇಶಗಳಲ್ಲಿ ಅಡಿಕೆ ಮಾರಾಟವೂ ಸಲೀಸಾಗಿ ನಡೆಯುತ್ತಿರಲಿಲ್ಲ. ಇದಕ್ಕಾಗಿ ಬೇಡಿಕೆಯ ಕೊರತೆ ಉಂಟಾಗಿ ಅಡಿಕೆ ಧಾರಣೆಯೂ ಇಳಿಕೆಯಾಗುತ್ತಿದೆ. ಇದರ ಜೊತೆಗೇ ಕಳಪೆ ಗುಣಮಟ್ಟದ ಬರ್ಮಾ ಅಡಿಕೆ ಹಾವಳಿ ಈಚೆಗೆ ಹೆಚ್ಚಾಗಿದೆ. ಇದೆಲ್ಲಾ ಕಾರಣದಿಂದ ಅಡಿಕೆ ಧಾರಣೆ ಸದ್ಯ ಇಳಿಕೆಯಾಗಿದೆ. ಪ್ರತೀ ಬಾರಿ ಚೌತಿಯ ನಂತರ ಅಡಿಕೆ ಧಾರಣೆ ಏರಿಕೆಯಾಗುತ್ತದೆ. ಈ ಬಾರಿ ಮಾತ್ರಾ ಇಳಿಕೆಯಾಗಿದೆ. ಈಗ ಅಡಿಕೆ ಬೆಳೆಗಾರರೂ ಎಚ್ಚರವಾಗಿದ್ದರೆ ಧಾರಣೆಯಲ್ಲಿ ಕೊಂಚ ಸುಧಾರಣೆ ಸಾಧ್ಯವಿದೆ. ಮುಂದಿನ 15 ದಿನಗಳ ಒಳಗೆ ಧಾರಣೆ ಸ್ಥಿರತೆ ಸಾಧ್ಯ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

2 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

6 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

12 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

13 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

2 days ago