Advertisement
MIRROR FOCUS

ಅಡಿಕೆ ಮಾರುಕಟ್ಟೆ ಏಕೆ ಇಳಿಕೆಯಾಗುತ್ತಿದೆ…? | ಬರ್ಮಾ ಅಡಿಕೆ ಮಿಕ್ಸ್‌ ಆಗುತ್ತಿದೆಯೇ ಇಲ್ಲಿನ ಅಡಿಕೆಗೆ….? | ಬೆಳೆಗಾರರು ಮಾಡಬೇಕಾದ್ದೇನು..?

Share

ಕಳೆದ ಒಂದು ವಾರದಿಂದ ಅಡಿಕೆ ಧಾರಣೆ ಸ್ಥಿರತೆಯಲ್ಲಿ ಇಲ್ಲ.ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ. ಈಗಿನ ಟ್ರೆಂಡ್‌ ಪ್ರಕಾರ ಚಾಲಿ ಅಡಿಕೆ ಮಾರುಕಟ್ಟೆಯು 420 ಹಾಗೂ 425 ರೂಪಾಯಿ ಆಸುಪಾಸಿಗೆ ಬರಲಿದೆ. ಈ ನಡುವೆಯೇ ಅಡಿಕೆ ಮಾರುಕಟ್ಟೆಯನ್ನು ಅಸ್ಥಿರ ಮಾಡುವ ಪ್ರಯತ್ನವೂ ನಡೆಯುತ್ತಿದೆ ಎಂಬ ಅನುಮಾನ ಮೂಡುತ್ತಿದೆ. ಬರ್ಮಾ ಅಡಿಕೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗೆ ಬಂದಿದೆ ಎನ್ನುವ ಮಾಹಿತಿ ಇದೆ. ಇದಕ್ಕಾಗಿ ಅಡಿಕೆ ಬೆಳೆಗಾರರು ಜಾಗೃತರಾಗಬೇಕಿದೆ.

ಅಡಿಕೆ ಧಾರಣೆ ಕಳೆದ ಕೆಲವು ದಿನಗಳಿಂದ ಇಳಿಕೆಯಾಗುತ್ತಿದೆ. ಎರಡು ದಿನಗಳ ಹಿಂದೆ ಚಾಲಿ ಹಳೆ ಅಡಿಕೆ ಧಾರಣೆ ಏರಿಕೆ ಎಂದು ಖಾಸಗಿ ವಲಯದಲ್ಲಿ ಹೇಳಿದ್ದರೂ, ಮತ್ತೆ ಇಳಿಕೆಯಲ್ಲಿದೆ. ಹೊಸ ಚಾಲಿ ಅಡಿಕೆಯಲ್ಲೂ ಏರಿಕೆ ಕಾಣಲಿಲ್ಲ. ಚೋಲ್‌ ಅಡಿಕೆ ಮಾರುಕಟ್ಟೆಯೂ ತೇಜಿ ಇಲ್ಲ. ಈ ನಡುವೆ ಧಾರಣೆ ಮತ್ತಷ್ಟು ಇಳಿಕೆ ಮಾಡುವ ತಂತ್ರ ನಡೆಯುತ್ತಿದೆ ಎಂದು ಮಾರುಕಟ್ಟೆ ವಲಯ ಅಭಿಪ್ರಾಯಪಡುತ್ತಿದೆ. ಇದಕ್ಕಾಗಿ ಅಡಿಕೆ ಬೆಳೆಗಾರರು ಎಚ್ಚರಿಕೆ ವಹಿಸಬೇಕಿದೆ.

ಕೃಷಿಕರ ಸಂಸ್ಥೆಯಾಗಿರುವ ಕ್ಯಾಂಪ್ಕೋ ಅಡಿಕೆ ಧಾರಣೆಯನ್ನು ಸ್ವಲ್ಪ ಮಟ್ಟಿಗೆ ಕುಸಿಯದಂತೆ ತಡೆದಿದೆ. ಕುಸಿತ ಕಾಣಲು ಬಿಡಲಿಲ್ಲ. ಹೀಗಾಗಿ ಈಗ ಏಕಾಏಕಿ ಹೆಚ್ಚಿನ ಪ್ರಮಾಣದ ಅಡಿಕೆಯನ್ನು ಕ್ಯಾಂಪ್ಕೋ ಮೂಲಕ ಮಾರಾಟ ಮಾಡುವ ತಂತ್ರ ನಡೆಯುತ್ತಿದೆ. ಈ ಮೂಲಕ ಅಡಿಕೆ ಮಾರುಕಟ್ಟೆಯನ್ನು ಇಳಿಕೆ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಡುತ್ತಿದ್ದಾರೆ. ಕಳೆದ ಎರಡು ಮೂರು ದಿನಗಳಿಂದ ಕ್ಯಾಂಪ್ಕೋ ಮೂಲಕ ವಿವಿಧ ಕಡೆ ಕೆಲವು ಖಾಸಗಿ ವಲಯದ ವ್ಯಾಪಾರಿಗಳು ಅಡಿಕೆಯನ್ನು ಮಾರಾಟ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ ಎನ್ನುವುದು ಮಾರುಕಟ್ಟೆ ವಲಯದಿಂದ ಬಂದಿರುವ ಮಾಹಿತಿ.

ಒಮ್ಮೆಲೇ ಅಧಿಕ ಪ್ರಮಾಣದ ಅಡಿಕೆಯನ್ನು ಕ್ಯಾಂಪ್ಕೋ ಮೂಲಕ ಮಾರಾಟ ಮಾಡಿ ಮಾರುಕಟ್ಟೆಯನ್ನು ಮತ್ತಷ್ಟು ಇಳಿಕೆ ಮಾಡುವ ತಂತ್ರ ಇದು. ಆ ಬಳಿಕ ಮತ್ತೆ ಧಾರಣೆ ಏರಿಕೆ ಮಾಡಿ ಮದ್ಯವರ್ತಿಗಳು ಲಾಭಗಳಿಸುವ ವ್ಯವಸ್ಥಿತವಾದ ಜಾಲವೊಂದು ಇದರ ಹಿಂದೆ ಇದೆ ಎಂದು ಮಾಹಿತಿ.

ಇದರ ಜೊತೆಗೇ ಅಡಿಕೆ ಮಾರುಕಟ್ಟೆಯಲ್ಲಿ ಈಗ ಬರ್ಮಾ ಅಡಿಕೆ ಸದ್ದು ಮಾಡುತ್ತಿದೆ. ಗ್ರಾಮೀಣ ಭಾಗದವರೆಗೂ ಈ ಅಡಿಕೆ ಈಗ ಬರುತ್ತಿದೆ. ಬರ್ಮಾ ಅಡಿಕೆಯನ್ನು ಇಲ್ಲಿನ ಅಡಿಕೆ ಜೊತೆ ಮಿಶ್ರಣ ಮಾಡಿ ಕ್ಯಾಂಪ್ಕೋ ಸಹಿತ ಕೆಲವು ಕಡೆ ಮಾರಾಟ ಮಾಡುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಹಿಂದೆಯೂ ಇಂತಹದ್ದೇ ತಂತ್ರ ನಡೆದಿತ್ತು, ಆಗಲೂ ಅಡಿಕೆ ಧಾರಣೆ ಕುಸಿತ ಕಂಡಿತ್ತು.

ಹೀಗಾಗಿ ಈಗ ಅಡಿಕೆ ಬೆಳೆಗಾರರು ತೀರಾ ಎಚ್ಚರಿಕೆ ವಹಿಸಬೇಕಾಗಿದೆ. ಬೆಳೆಗಾರರು ನೇರವಾಗಿ ಸಹಕಾರಿ ಸಂಸ್ಥೆಗಳಿಗೆ ಅಥವಾ ಅಧಿಕೃತ ವ್ಯಾಪಾರಿಗಳಿಗೆ ಕೃಷಿಕರಿಗೆ ಅಗತ್ಯಕ್ಕೆ  ತಕ್ಕಂತೆ ಅಡಿಕೆ ಮಾರಾಟ ಮಾಡುವ ಮೂಲಕ ಅಡಿಕೆ ಮಾರುಕಟ್ಟೆಯನ್ನು ಸ್ಥಿರತೆ ಮಾಡುವಲ್ಲಿ ಪ್ರಯತ್ನ ನಡೆಸಬೇಕಿದೆ. ಕ್ಯಾಂಪ್ಕೋ ಕೂಡಾ  ಅಡಿಕೆ ಧಾರಣೆ ಸ್ಥಿರತೆಗೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ. ಬರ್ಮಾ ಅಡಿಕೆ ಮಿಶ್ರಣಗೊಂಡು ಕ್ಯಾಂಪ್ಕೋ ಕೇಂದ್ರಗಳಿಗೂ ಬರುವ ಸಾಧ್ಯತೆ ಇರುವುದರಿಂದ ಬೆಳೆಗಾರರ ಹೊರತಾದ ಅಡಿಕೆ ಖರೀದಿಯ ವೇಳೆಯೂ ಎಚ್ಚರಿಕೆ ಅಗತ್ಯ ಇದೆ. ಈ ಹಿಂದೆ ಮಳೆಯ ಕಾರಣದಿಂದ ಅಡಿಕೆ ಗುಣಮಟ್ಟ ಕುಸಿತವಾಗಿ ಸಂಸ್ಥೆಗೆ ನಷ್ಟ ಉಂಟಾಗಿತ್ತು. ಈಗ ಮತ್ತೆ ಬರ್ಮಾದಂತಹ ಕಳಪೆ ಗುಣಮಟ್ಟದ ಅಡಿಕೆ ಸಂಸ್ಥೆಯ ಗೋದಾಮು ಸೇರದಂತೆ ಎಚ್ಚರ ವಹಿಸಬೇಕಿದೆ.

ಅಡಿಕೆ ಮಾರುಕಟ್ಟೆ ಕಳೆದ ಕೆಲವು ದಿನಗಳಿಂದಲೂ ಉತ್ಸಾಹದಲ್ಲಿ ಇಲ್ಲ. ಅಡಿಕೆ ಧಾರಣೆ  ವಿಪರೀತ ಏರಿಕೆಯ ಕಾರಣದಿಂದ  ಅಡಿಕೆ ಬಳಸುವ ಪ್ರದೇಶಗಳಲ್ಲಿ ಅಡಿಕೆ ಮಾರಾಟವೂ ಸಲೀಸಾಗಿ ನಡೆಯುತ್ತಿರಲಿಲ್ಲ. ಇದಕ್ಕಾಗಿ ಬೇಡಿಕೆಯ ಕೊರತೆ ಉಂಟಾಗಿ ಅಡಿಕೆ ಧಾರಣೆಯೂ ಇಳಿಕೆಯಾಗುತ್ತಿದೆ. ಇದರ ಜೊತೆಗೇ ಕಳಪೆ ಗುಣಮಟ್ಟದ ಬರ್ಮಾ ಅಡಿಕೆ ಹಾವಳಿ ಈಚೆಗೆ ಹೆಚ್ಚಾಗಿದೆ. ಇದೆಲ್ಲಾ ಕಾರಣದಿಂದ ಅಡಿಕೆ ಧಾರಣೆ ಸದ್ಯ ಇಳಿಕೆಯಾಗಿದೆ. ಪ್ರತೀ ಬಾರಿ ಚೌತಿಯ ನಂತರ ಅಡಿಕೆ ಧಾರಣೆ ಏರಿಕೆಯಾಗುತ್ತದೆ. ಈ ಬಾರಿ ಮಾತ್ರಾ ಇಳಿಕೆಯಾಗಿದೆ. ಈಗ ಅಡಿಕೆ ಬೆಳೆಗಾರರೂ ಎಚ್ಚರವಾಗಿದ್ದರೆ ಧಾರಣೆಯಲ್ಲಿ ಕೊಂಚ ಸುಧಾರಣೆ ಸಾಧ್ಯವಿದೆ. ಮುಂದಿನ 15 ದಿನಗಳ ಒಳಗೆ ಧಾರಣೆ ಸ್ಥಿರತೆ ಸಾಧ್ಯ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

57 minutes ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

10 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

10 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

10 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

15 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago