Arecanut Market | ಅಡಿಕೆ ಮಾರುಕಟ್ಟೆ ಸ್ಥಿರತೆಗೆ ಪ್ರಯತ್ನ | ಕ್ಯಾಂಪ್ಕೋ ಅಧ್ಯಕ್ಷರ ಭರವಸೆ |

October 18, 2023
10:32 PM
ಅಡಿಕೆ ಮಾರುಕಟ್ಟೆಯ ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ, ಅಡಿಕೆ ಧಾರಣೆ ಸ್ಥಿರತೆ ಕಾಣಲಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಅಡಿಕೆ ಬೆಳೆಗಾರರಿಗೆ ಭರವಸೆ ನೀಡಿದ್ದಾರೆ.

ಅಡಿಕೆ ಮಾರುಕಟ್ಟೆ ಸ್ಥಿರತೆಗೆ ಕ್ಯಾಂಪ್ಕೋ ಸತತ ಪ್ರಯತ್ನ ಮಾಡುತ್ತಿದೆ. ಈ ಬಾರಿಯೂ ಅಡಿಕೆ ಮಾರುಕಟ್ಟೆ ತೀರಾ ಕುಸಿಯದಂತೆ ಅಡಿಕೆ ಬೆಳೆಗಾರರ ಪರವಾಗಿ ಕ್ಯಾಂಪ್ಕೋ ನಿಲ್ಲಲಿದೆ, ಯಾವುದೇ ಆತಂಕ ಬೇಡ, ಊಹಾಪೋಹಗಳಿಗೆ ಕಿವಿಗೊಡಬೇಕಾಗಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದರು.

Advertisement

ಅವರು ಮಂಗಳೂರಿನಲ್ಲಿ ವಿಜಯವಾಣಿ ಪತ್ರಿಕೆ ನಡೆಸಿದ ಅಡಿಕೆ ಮಾರುಕಟ್ಟೆ-ಭವಿಷ್ಯ ಎಂಬ ವಿಷಯದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಡಿಕೆ ಧಾರಣೆ ಕೆಲವು ಕಾರಣಗಳಿಂದ ಇಳಿಕೆಯಾಗುತ್ತಿದೆ. ಅಡಿಕೆ ಮಾರುಕಟ್ಟೆಯಲ್ಲಿ ಸರಬರಾಜು ಹಾಗೂ ಪೂರೈಕೆಯಲ್ಲಿ ಕಳೆದ ಕೆಲವು ಸಮಯಗಳಿಂದ ವ್ಯತ್ಯಾಸ ಇತ್ತು. ಇದೀಗ ಈ ಕಾರಣಗಳಿಂದ ಹಾಗೂ ಅಡಿಕೆ ಕಳ್ಳದಾರಿಯ ಮೂಲಕ ಬರುತ್ತಿರುವುದು  ಹಾಗೂ ಅಡಿಕೆ ಬಳಕೆಯ ಪ್ರದೇಶದಲ್ಲಿ ಕೂಡಾ ಕೆಲವು ಪರಿಣಾಮಗಳ ಕಾರಣಗಳಿಂದ ಧಾರಣೆ ಏರಿಕೆ ಕಾಣುತ್ತಿಲ್ಲ. ಆದರೆ ಇದೀಗ ಧಾರಣೆ ಸ್ಥಿರತೆಯ ಹಂತಕ್ಕೆ ಬಂದಿದೆ. ಇನ್ನಷ್ಟು ಕುಸಿತ ಸಾಧ್ಯವಿಲ್ಲ ಎಂದು ಕಿಶೋರ್‌ ಕುಮಾರ್‌  ಕೊಡ್ಗಿ ಅಭಿಪ್ರಾಯಪಟ್ಟಿದ್ದಾರೆ.

ಅಡಿಕೆ ಧಾರಣೆಯು ವಿಪರೀತ ಏರಿಕೆ ಆಗಿ ಅದೊಂದು ಫ್ಯಾನ್ಸಿ ಧಾರಣೆ ಆಗಿರುವ ಕಾರಣದಿಂದ ಅಡಿಕೆ ಬೆಳೆ ವಿಸ್ತರಣೆಯಾಗಿದೆ. ಆದರೆ ಈಗ ಬೆಳೆ ವಿಸ್ತರಣೆಯ ಅಡಿಕೆ ಮಾರುಕಟ್ಟೆ ಬಂದಿಲ್ಲ, ಈ ಕಾರಣದಿಂದ ಧಾರಣೆ ಇಳಿಕೆಯೂ ಆಗಿಲ್ಲ. ಸದ್ಯ ತಾತ್ಕಾಲಿಕವಾಗಿ ಮಾರುಕಟ್ಟೆಯಲ್ಲಿ ಸಹಜವಾದ ಏರಿಳಿತ ಕಂಡುಬಂದಿದೆ. ಆದರೆ ಧಾರಣೆ ಮುಂದೆ ಸ್ಥಿರತೆ ಕಾಣಲಿದೆ ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ
June 17, 2025
10:15 PM
by: The Rural Mirror ಸುದ್ದಿಜಾಲ
ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ
June 17, 2025
10:12 PM
by: The Rural Mirror ಸುದ್ದಿಜಾಲ
ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ
June 17, 2025
10:02 PM
by: The Rural Mirror ಸುದ್ದಿಜಾಲ
ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ
June 17, 2025
9:55 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group