ಕಿಶೋರ್ ಕುಮಾರ್ ಕೊಡ್ಗಿ
ಅಡಿಕೆ ಮಾರುಕಟ್ಟೆ ಸ್ಥಿರತೆಗೆ ಕ್ಯಾಂಪ್ಕೋ ಸತತ ಪ್ರಯತ್ನ ಮಾಡುತ್ತಿದೆ. ಈ ಬಾರಿಯೂ ಅಡಿಕೆ ಮಾರುಕಟ್ಟೆ ತೀರಾ ಕುಸಿಯದಂತೆ ಅಡಿಕೆ ಬೆಳೆಗಾರರ ಪರವಾಗಿ ಕ್ಯಾಂಪ್ಕೋ ನಿಲ್ಲಲಿದೆ, ಯಾವುದೇ ಆತಂಕ ಬೇಡ, ಊಹಾಪೋಹಗಳಿಗೆ ಕಿವಿಗೊಡಬೇಕಾಗಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು.
ಅವರು ಮಂಗಳೂರಿನಲ್ಲಿ ವಿಜಯವಾಣಿ ಪತ್ರಿಕೆ ನಡೆಸಿದ ಅಡಿಕೆ ಮಾರುಕಟ್ಟೆ-ಭವಿಷ್ಯ ಎಂಬ ವಿಷಯದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಡಿಕೆ ಧಾರಣೆ ಕೆಲವು ಕಾರಣಗಳಿಂದ ಇಳಿಕೆಯಾಗುತ್ತಿದೆ. ಅಡಿಕೆ ಮಾರುಕಟ್ಟೆಯಲ್ಲಿ ಸರಬರಾಜು ಹಾಗೂ ಪೂರೈಕೆಯಲ್ಲಿ ಕಳೆದ ಕೆಲವು ಸಮಯಗಳಿಂದ ವ್ಯತ್ಯಾಸ ಇತ್ತು. ಇದೀಗ ಈ ಕಾರಣಗಳಿಂದ ಹಾಗೂ ಅಡಿಕೆ ಕಳ್ಳದಾರಿಯ ಮೂಲಕ ಬರುತ್ತಿರುವುದು ಹಾಗೂ ಅಡಿಕೆ ಬಳಕೆಯ ಪ್ರದೇಶದಲ್ಲಿ ಕೂಡಾ ಕೆಲವು ಪರಿಣಾಮಗಳ ಕಾರಣಗಳಿಂದ ಧಾರಣೆ ಏರಿಕೆ ಕಾಣುತ್ತಿಲ್ಲ. ಆದರೆ ಇದೀಗ ಧಾರಣೆ ಸ್ಥಿರತೆಯ ಹಂತಕ್ಕೆ ಬಂದಿದೆ. ಇನ್ನಷ್ಟು ಕುಸಿತ ಸಾಧ್ಯವಿಲ್ಲ ಎಂದು ಕಿಶೋರ್ ಕುಮಾರ್ ಕೊಡ್ಗಿ ಅಭಿಪ್ರಾಯಪಟ್ಟಿದ್ದಾರೆ.
ಅಡಿಕೆ ಧಾರಣೆಯು ವಿಪರೀತ ಏರಿಕೆ ಆಗಿ ಅದೊಂದು ಫ್ಯಾನ್ಸಿ ಧಾರಣೆ ಆಗಿರುವ ಕಾರಣದಿಂದ ಅಡಿಕೆ ಬೆಳೆ ವಿಸ್ತರಣೆಯಾಗಿದೆ. ಆದರೆ ಈಗ ಬೆಳೆ ವಿಸ್ತರಣೆಯ ಅಡಿಕೆ ಮಾರುಕಟ್ಟೆ ಬಂದಿಲ್ಲ, ಈ ಕಾರಣದಿಂದ ಧಾರಣೆ ಇಳಿಕೆಯೂ ಆಗಿಲ್ಲ. ಸದ್ಯ ತಾತ್ಕಾಲಿಕವಾಗಿ ಮಾರುಕಟ್ಟೆಯಲ್ಲಿ ಸಹಜವಾದ ಏರಿಳಿತ ಕಂಡುಬಂದಿದೆ. ಆದರೆ ಧಾರಣೆ ಮುಂದೆ ಸ್ಥಿರತೆ ಕಾಣಲಿದೆ ಎಂದು ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು.
ಸುಮಾರು 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಹಾಗೂ 12 ಟ್ರಕ್ಗಳನ್ನು ಮಹಾರಾಷ್ಟ್ರದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಧಾರ್ಮಿಕ ಶ್ರದ್ಧೆ ಮತ್ತು ನಂಬಿಕೆಯನ್ನ ಗೌರವಿಸಿ ಪಾಲಿಸಬೇಕಾದುದ್ದೂ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಉಪಮುಖ್ಯಮಂತ್ರಿ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಳನಾಡಿನಲ್ಲಿ…
ಕೇಂದ್ರ ವಾಣಿಜ್ಯ ಕೈಗಾರಿಕೆಗಳ ಸಚಿವಾಲಯ ಸಹಯೋಗದೊಂದಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕೇಂದ್ರ…
ಧರ್ಮನಿಷ್ಠರಾಗಿ ಹೇಗೆ ಬದುಕಬೇಕು, ಹೇಗೆ ಬದುಕಬಹುದು ಎಂದು ಜಗತ್ತಿಗೆ ಸಾರಿದ ಮಹಾಕಾವ್ಯ ರಾಮಾಯಣ.…