Advertisement
MIRROR FOCUS

Arecanut Market | ಅಡಿಕೆ ಮಾರುಕಟ್ಟೆ ಸ್ಥಿರತೆಗೆ ಪ್ರಯತ್ನ | ಕ್ಯಾಂಪ್ಕೋ ಅಧ್ಯಕ್ಷರ ಭರವಸೆ |

Share

ಅಡಿಕೆ ಮಾರುಕಟ್ಟೆ ಸ್ಥಿರತೆಗೆ ಕ್ಯಾಂಪ್ಕೋ ಸತತ ಪ್ರಯತ್ನ ಮಾಡುತ್ತಿದೆ. ಈ ಬಾರಿಯೂ ಅಡಿಕೆ ಮಾರುಕಟ್ಟೆ ತೀರಾ ಕುಸಿಯದಂತೆ ಅಡಿಕೆ ಬೆಳೆಗಾರರ ಪರವಾಗಿ ಕ್ಯಾಂಪ್ಕೋ ನಿಲ್ಲಲಿದೆ, ಯಾವುದೇ ಆತಂಕ ಬೇಡ, ಊಹಾಪೋಹಗಳಿಗೆ ಕಿವಿಗೊಡಬೇಕಾಗಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದರು.

ಅವರು ಮಂಗಳೂರಿನಲ್ಲಿ ವಿಜಯವಾಣಿ ಪತ್ರಿಕೆ ನಡೆಸಿದ ಅಡಿಕೆ ಮಾರುಕಟ್ಟೆ-ಭವಿಷ್ಯ ಎಂಬ ವಿಷಯದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಡಿಕೆ ಧಾರಣೆ ಕೆಲವು ಕಾರಣಗಳಿಂದ ಇಳಿಕೆಯಾಗುತ್ತಿದೆ. ಅಡಿಕೆ ಮಾರುಕಟ್ಟೆಯಲ್ಲಿ ಸರಬರಾಜು ಹಾಗೂ ಪೂರೈಕೆಯಲ್ಲಿ ಕಳೆದ ಕೆಲವು ಸಮಯಗಳಿಂದ ವ್ಯತ್ಯಾಸ ಇತ್ತು. ಇದೀಗ ಈ ಕಾರಣಗಳಿಂದ ಹಾಗೂ ಅಡಿಕೆ ಕಳ್ಳದಾರಿಯ ಮೂಲಕ ಬರುತ್ತಿರುವುದು  ಹಾಗೂ ಅಡಿಕೆ ಬಳಕೆಯ ಪ್ರದೇಶದಲ್ಲಿ ಕೂಡಾ ಕೆಲವು ಪರಿಣಾಮಗಳ ಕಾರಣಗಳಿಂದ ಧಾರಣೆ ಏರಿಕೆ ಕಾಣುತ್ತಿಲ್ಲ. ಆದರೆ ಇದೀಗ ಧಾರಣೆ ಸ್ಥಿರತೆಯ ಹಂತಕ್ಕೆ ಬಂದಿದೆ. ಇನ್ನಷ್ಟು ಕುಸಿತ ಸಾಧ್ಯವಿಲ್ಲ ಎಂದು ಕಿಶೋರ್‌ ಕುಮಾರ್‌  ಕೊಡ್ಗಿ ಅಭಿಪ್ರಾಯಪಟ್ಟಿದ್ದಾರೆ.

Advertisement

ಅಡಿಕೆ ಧಾರಣೆಯು ವಿಪರೀತ ಏರಿಕೆ ಆಗಿ ಅದೊಂದು ಫ್ಯಾನ್ಸಿ ಧಾರಣೆ ಆಗಿರುವ ಕಾರಣದಿಂದ ಅಡಿಕೆ ಬೆಳೆ ವಿಸ್ತರಣೆಯಾಗಿದೆ. ಆದರೆ ಈಗ ಬೆಳೆ ವಿಸ್ತರಣೆಯ ಅಡಿಕೆ ಮಾರುಕಟ್ಟೆ ಬಂದಿಲ್ಲ, ಈ ಕಾರಣದಿಂದ ಧಾರಣೆ ಇಳಿಕೆಯೂ ಆಗಿಲ್ಲ. ಸದ್ಯ ತಾತ್ಕಾಲಿಕವಾಗಿ ಮಾರುಕಟ್ಟೆಯಲ್ಲಿ ಸಹಜವಾದ ಏರಿಳಿತ ಕಂಡುಬಂದಿದೆ. ಆದರೆ ಧಾರಣೆ ಮುಂದೆ ಸ್ಥಿರತೆ ಕಾಣಲಿದೆ ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

9 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

9 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

1 day ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

1 day ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago