Advertisement
MIRROR FOCUS

Arecanut Market | ಅಡಿಕೆ ಮಾರುಕಟ್ಟೆ ಸ್ಥಿರತೆಗೆ ಪ್ರಯತ್ನ | ಕ್ಯಾಂಪ್ಕೋ ಅಧ್ಯಕ್ಷರ ಭರವಸೆ |

Share

ಅಡಿಕೆ ಮಾರುಕಟ್ಟೆ ಸ್ಥಿರತೆಗೆ ಕ್ಯಾಂಪ್ಕೋ ಸತತ ಪ್ರಯತ್ನ ಮಾಡುತ್ತಿದೆ. ಈ ಬಾರಿಯೂ ಅಡಿಕೆ ಮಾರುಕಟ್ಟೆ ತೀರಾ ಕುಸಿಯದಂತೆ ಅಡಿಕೆ ಬೆಳೆಗಾರರ ಪರವಾಗಿ ಕ್ಯಾಂಪ್ಕೋ ನಿಲ್ಲಲಿದೆ, ಯಾವುದೇ ಆತಂಕ ಬೇಡ, ಊಹಾಪೋಹಗಳಿಗೆ ಕಿವಿಗೊಡಬೇಕಾಗಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದರು.

Advertisement

ಅವರು ಮಂಗಳೂರಿನಲ್ಲಿ ವಿಜಯವಾಣಿ ಪತ್ರಿಕೆ ನಡೆಸಿದ ಅಡಿಕೆ ಮಾರುಕಟ್ಟೆ-ಭವಿಷ್ಯ ಎಂಬ ವಿಷಯದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಡಿಕೆ ಧಾರಣೆ ಕೆಲವು ಕಾರಣಗಳಿಂದ ಇಳಿಕೆಯಾಗುತ್ತಿದೆ. ಅಡಿಕೆ ಮಾರುಕಟ್ಟೆಯಲ್ಲಿ ಸರಬರಾಜು ಹಾಗೂ ಪೂರೈಕೆಯಲ್ಲಿ ಕಳೆದ ಕೆಲವು ಸಮಯಗಳಿಂದ ವ್ಯತ್ಯಾಸ ಇತ್ತು. ಇದೀಗ ಈ ಕಾರಣಗಳಿಂದ ಹಾಗೂ ಅಡಿಕೆ ಕಳ್ಳದಾರಿಯ ಮೂಲಕ ಬರುತ್ತಿರುವುದು  ಹಾಗೂ ಅಡಿಕೆ ಬಳಕೆಯ ಪ್ರದೇಶದಲ್ಲಿ ಕೂಡಾ ಕೆಲವು ಪರಿಣಾಮಗಳ ಕಾರಣಗಳಿಂದ ಧಾರಣೆ ಏರಿಕೆ ಕಾಣುತ್ತಿಲ್ಲ. ಆದರೆ ಇದೀಗ ಧಾರಣೆ ಸ್ಥಿರತೆಯ ಹಂತಕ್ಕೆ ಬಂದಿದೆ. ಇನ್ನಷ್ಟು ಕುಸಿತ ಸಾಧ್ಯವಿಲ್ಲ ಎಂದು ಕಿಶೋರ್‌ ಕುಮಾರ್‌  ಕೊಡ್ಗಿ ಅಭಿಪ್ರಾಯಪಟ್ಟಿದ್ದಾರೆ.

ಅಡಿಕೆ ಧಾರಣೆಯು ವಿಪರೀತ ಏರಿಕೆ ಆಗಿ ಅದೊಂದು ಫ್ಯಾನ್ಸಿ ಧಾರಣೆ ಆಗಿರುವ ಕಾರಣದಿಂದ ಅಡಿಕೆ ಬೆಳೆ ವಿಸ್ತರಣೆಯಾಗಿದೆ. ಆದರೆ ಈಗ ಬೆಳೆ ವಿಸ್ತರಣೆಯ ಅಡಿಕೆ ಮಾರುಕಟ್ಟೆ ಬಂದಿಲ್ಲ, ಈ ಕಾರಣದಿಂದ ಧಾರಣೆ ಇಳಿಕೆಯೂ ಆಗಿಲ್ಲ. ಸದ್ಯ ತಾತ್ಕಾಲಿಕವಾಗಿ ಮಾರುಕಟ್ಟೆಯಲ್ಲಿ ಸಹಜವಾದ ಏರಿಳಿತ ಕಂಡುಬಂದಿದೆ. ಆದರೆ ಧಾರಣೆ ಮುಂದೆ ಸ್ಥಿರತೆ ಕಾಣಲಿದೆ ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

9 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

9 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

9 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

9 hours ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

1 day ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago