Advertisement
MIRROR FOCUS

Arecanut Market | ಅಡಿಕೆ ಮಾರುಕಟ್ಟೆ ಸ್ಥಿರತೆಗೆ ಪ್ರಯತ್ನ | ಕ್ಯಾಂಪ್ಕೋ ಅಧ್ಯಕ್ಷರ ಭರವಸೆ |

Share

ಅಡಿಕೆ ಮಾರುಕಟ್ಟೆ ಸ್ಥಿರತೆಗೆ ಕ್ಯಾಂಪ್ಕೋ ಸತತ ಪ್ರಯತ್ನ ಮಾಡುತ್ತಿದೆ. ಈ ಬಾರಿಯೂ ಅಡಿಕೆ ಮಾರುಕಟ್ಟೆ ತೀರಾ ಕುಸಿಯದಂತೆ ಅಡಿಕೆ ಬೆಳೆಗಾರರ ಪರವಾಗಿ ಕ್ಯಾಂಪ್ಕೋ ನಿಲ್ಲಲಿದೆ, ಯಾವುದೇ ಆತಂಕ ಬೇಡ, ಊಹಾಪೋಹಗಳಿಗೆ ಕಿವಿಗೊಡಬೇಕಾಗಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದರು.

ಅವರು ಮಂಗಳೂರಿನಲ್ಲಿ ವಿಜಯವಾಣಿ ಪತ್ರಿಕೆ ನಡೆಸಿದ ಅಡಿಕೆ ಮಾರುಕಟ್ಟೆ-ಭವಿಷ್ಯ ಎಂಬ ವಿಷಯದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಡಿಕೆ ಧಾರಣೆ ಕೆಲವು ಕಾರಣಗಳಿಂದ ಇಳಿಕೆಯಾಗುತ್ತಿದೆ. ಅಡಿಕೆ ಮಾರುಕಟ್ಟೆಯಲ್ಲಿ ಸರಬರಾಜು ಹಾಗೂ ಪೂರೈಕೆಯಲ್ಲಿ ಕಳೆದ ಕೆಲವು ಸಮಯಗಳಿಂದ ವ್ಯತ್ಯಾಸ ಇತ್ತು. ಇದೀಗ ಈ ಕಾರಣಗಳಿಂದ ಹಾಗೂ ಅಡಿಕೆ ಕಳ್ಳದಾರಿಯ ಮೂಲಕ ಬರುತ್ತಿರುವುದು  ಹಾಗೂ ಅಡಿಕೆ ಬಳಕೆಯ ಪ್ರದೇಶದಲ್ಲಿ ಕೂಡಾ ಕೆಲವು ಪರಿಣಾಮಗಳ ಕಾರಣಗಳಿಂದ ಧಾರಣೆ ಏರಿಕೆ ಕಾಣುತ್ತಿಲ್ಲ. ಆದರೆ ಇದೀಗ ಧಾರಣೆ ಸ್ಥಿರತೆಯ ಹಂತಕ್ಕೆ ಬಂದಿದೆ. ಇನ್ನಷ್ಟು ಕುಸಿತ ಸಾಧ್ಯವಿಲ್ಲ ಎಂದು ಕಿಶೋರ್‌ ಕುಮಾರ್‌  ಕೊಡ್ಗಿ ಅಭಿಪ್ರಾಯಪಟ್ಟಿದ್ದಾರೆ.

ಅಡಿಕೆ ಧಾರಣೆಯು ವಿಪರೀತ ಏರಿಕೆ ಆಗಿ ಅದೊಂದು ಫ್ಯಾನ್ಸಿ ಧಾರಣೆ ಆಗಿರುವ ಕಾರಣದಿಂದ ಅಡಿಕೆ ಬೆಳೆ ವಿಸ್ತರಣೆಯಾಗಿದೆ. ಆದರೆ ಈಗ ಬೆಳೆ ವಿಸ್ತರಣೆಯ ಅಡಿಕೆ ಮಾರುಕಟ್ಟೆ ಬಂದಿಲ್ಲ, ಈ ಕಾರಣದಿಂದ ಧಾರಣೆ ಇಳಿಕೆಯೂ ಆಗಿಲ್ಲ. ಸದ್ಯ ತಾತ್ಕಾಲಿಕವಾಗಿ ಮಾರುಕಟ್ಟೆಯಲ್ಲಿ ಸಹಜವಾದ ಏರಿಳಿತ ಕಂಡುಬಂದಿದೆ. ಆದರೆ ಧಾರಣೆ ಮುಂದೆ ಸ್ಥಿರತೆ ಕಾಣಲಿದೆ ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

3 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

5 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

6 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago