Advertisement
MIRROR FOCUS

Arecanut Market | ಅಡಿಕೆ ಮಾರುಕಟ್ಟೆ ಸ್ಥಿರತೆಗೆ ಪ್ರಯತ್ನ | ಕ್ಯಾಂಪ್ಕೋ ಅಧ್ಯಕ್ಷರ ಭರವಸೆ |

Share

ಅಡಿಕೆ ಮಾರುಕಟ್ಟೆ ಸ್ಥಿರತೆಗೆ ಕ್ಯಾಂಪ್ಕೋ ಸತತ ಪ್ರಯತ್ನ ಮಾಡುತ್ತಿದೆ. ಈ ಬಾರಿಯೂ ಅಡಿಕೆ ಮಾರುಕಟ್ಟೆ ತೀರಾ ಕುಸಿಯದಂತೆ ಅಡಿಕೆ ಬೆಳೆಗಾರರ ಪರವಾಗಿ ಕ್ಯಾಂಪ್ಕೋ ನಿಲ್ಲಲಿದೆ, ಯಾವುದೇ ಆತಂಕ ಬೇಡ, ಊಹಾಪೋಹಗಳಿಗೆ ಕಿವಿಗೊಡಬೇಕಾಗಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದರು.

ಅವರು ಮಂಗಳೂರಿನಲ್ಲಿ ವಿಜಯವಾಣಿ ಪತ್ರಿಕೆ ನಡೆಸಿದ ಅಡಿಕೆ ಮಾರುಕಟ್ಟೆ-ಭವಿಷ್ಯ ಎಂಬ ವಿಷಯದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಡಿಕೆ ಧಾರಣೆ ಕೆಲವು ಕಾರಣಗಳಿಂದ ಇಳಿಕೆಯಾಗುತ್ತಿದೆ. ಅಡಿಕೆ ಮಾರುಕಟ್ಟೆಯಲ್ಲಿ ಸರಬರಾಜು ಹಾಗೂ ಪೂರೈಕೆಯಲ್ಲಿ ಕಳೆದ ಕೆಲವು ಸಮಯಗಳಿಂದ ವ್ಯತ್ಯಾಸ ಇತ್ತು. ಇದೀಗ ಈ ಕಾರಣಗಳಿಂದ ಹಾಗೂ ಅಡಿಕೆ ಕಳ್ಳದಾರಿಯ ಮೂಲಕ ಬರುತ್ತಿರುವುದು  ಹಾಗೂ ಅಡಿಕೆ ಬಳಕೆಯ ಪ್ರದೇಶದಲ್ಲಿ ಕೂಡಾ ಕೆಲವು ಪರಿಣಾಮಗಳ ಕಾರಣಗಳಿಂದ ಧಾರಣೆ ಏರಿಕೆ ಕಾಣುತ್ತಿಲ್ಲ. ಆದರೆ ಇದೀಗ ಧಾರಣೆ ಸ್ಥಿರತೆಯ ಹಂತಕ್ಕೆ ಬಂದಿದೆ. ಇನ್ನಷ್ಟು ಕುಸಿತ ಸಾಧ್ಯವಿಲ್ಲ ಎಂದು ಕಿಶೋರ್‌ ಕುಮಾರ್‌  ಕೊಡ್ಗಿ ಅಭಿಪ್ರಾಯಪಟ್ಟಿದ್ದಾರೆ.

ಅಡಿಕೆ ಧಾರಣೆಯು ವಿಪರೀತ ಏರಿಕೆ ಆಗಿ ಅದೊಂದು ಫ್ಯಾನ್ಸಿ ಧಾರಣೆ ಆಗಿರುವ ಕಾರಣದಿಂದ ಅಡಿಕೆ ಬೆಳೆ ವಿಸ್ತರಣೆಯಾಗಿದೆ. ಆದರೆ ಈಗ ಬೆಳೆ ವಿಸ್ತರಣೆಯ ಅಡಿಕೆ ಮಾರುಕಟ್ಟೆ ಬಂದಿಲ್ಲ, ಈ ಕಾರಣದಿಂದ ಧಾರಣೆ ಇಳಿಕೆಯೂ ಆಗಿಲ್ಲ. ಸದ್ಯ ತಾತ್ಕಾಲಿಕವಾಗಿ ಮಾರುಕಟ್ಟೆಯಲ್ಲಿ ಸಹಜವಾದ ಏರಿಳಿತ ಕಂಡುಬಂದಿದೆ. ಆದರೆ ಧಾರಣೆ ಮುಂದೆ ಸ್ಥಿರತೆ ಕಾಣಲಿದೆ ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

38 minutes ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

6 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

8 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

8 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

10 hours ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

15 hours ago