ಕಿಶೋರ್ ಕುಮಾರ್ ಕೊಡ್ಗಿ
ಅಡಿಕೆ ಮಾರುಕಟ್ಟೆ ಸ್ಥಿರತೆಗೆ ಕ್ಯಾಂಪ್ಕೋ ಸತತ ಪ್ರಯತ್ನ ಮಾಡುತ್ತಿದೆ. ಈ ಬಾರಿಯೂ ಅಡಿಕೆ ಮಾರುಕಟ್ಟೆ ತೀರಾ ಕುಸಿಯದಂತೆ ಅಡಿಕೆ ಬೆಳೆಗಾರರ ಪರವಾಗಿ ಕ್ಯಾಂಪ್ಕೋ ನಿಲ್ಲಲಿದೆ, ಯಾವುದೇ ಆತಂಕ ಬೇಡ, ಊಹಾಪೋಹಗಳಿಗೆ ಕಿವಿಗೊಡಬೇಕಾಗಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು.
ಅವರು ಮಂಗಳೂರಿನಲ್ಲಿ ವಿಜಯವಾಣಿ ಪತ್ರಿಕೆ ನಡೆಸಿದ ಅಡಿಕೆ ಮಾರುಕಟ್ಟೆ-ಭವಿಷ್ಯ ಎಂಬ ವಿಷಯದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಡಿಕೆ ಧಾರಣೆ ಕೆಲವು ಕಾರಣಗಳಿಂದ ಇಳಿಕೆಯಾಗುತ್ತಿದೆ. ಅಡಿಕೆ ಮಾರುಕಟ್ಟೆಯಲ್ಲಿ ಸರಬರಾಜು ಹಾಗೂ ಪೂರೈಕೆಯಲ್ಲಿ ಕಳೆದ ಕೆಲವು ಸಮಯಗಳಿಂದ ವ್ಯತ್ಯಾಸ ಇತ್ತು. ಇದೀಗ ಈ ಕಾರಣಗಳಿಂದ ಹಾಗೂ ಅಡಿಕೆ ಕಳ್ಳದಾರಿಯ ಮೂಲಕ ಬರುತ್ತಿರುವುದು ಹಾಗೂ ಅಡಿಕೆ ಬಳಕೆಯ ಪ್ರದೇಶದಲ್ಲಿ ಕೂಡಾ ಕೆಲವು ಪರಿಣಾಮಗಳ ಕಾರಣಗಳಿಂದ ಧಾರಣೆ ಏರಿಕೆ ಕಾಣುತ್ತಿಲ್ಲ. ಆದರೆ ಇದೀಗ ಧಾರಣೆ ಸ್ಥಿರತೆಯ ಹಂತಕ್ಕೆ ಬಂದಿದೆ. ಇನ್ನಷ್ಟು ಕುಸಿತ ಸಾಧ್ಯವಿಲ್ಲ ಎಂದು ಕಿಶೋರ್ ಕುಮಾರ್ ಕೊಡ್ಗಿ ಅಭಿಪ್ರಾಯಪಟ್ಟಿದ್ದಾರೆ.
ಅಡಿಕೆ ಧಾರಣೆಯು ವಿಪರೀತ ಏರಿಕೆ ಆಗಿ ಅದೊಂದು ಫ್ಯಾನ್ಸಿ ಧಾರಣೆ ಆಗಿರುವ ಕಾರಣದಿಂದ ಅಡಿಕೆ ಬೆಳೆ ವಿಸ್ತರಣೆಯಾಗಿದೆ. ಆದರೆ ಈಗ ಬೆಳೆ ವಿಸ್ತರಣೆಯ ಅಡಿಕೆ ಮಾರುಕಟ್ಟೆ ಬಂದಿಲ್ಲ, ಈ ಕಾರಣದಿಂದ ಧಾರಣೆ ಇಳಿಕೆಯೂ ಆಗಿಲ್ಲ. ಸದ್ಯ ತಾತ್ಕಾಲಿಕವಾಗಿ ಮಾರುಕಟ್ಟೆಯಲ್ಲಿ ಸಹಜವಾದ ಏರಿಳಿತ ಕಂಡುಬಂದಿದೆ. ಆದರೆ ಧಾರಣೆ ಮುಂದೆ ಸ್ಥಿರತೆ ಕಾಣಲಿದೆ ಎಂದು ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…