Advertisement
MIRROR FOCUS

ನವೆಂಬರ್‌ ಅಡಿಕೆ ಅಕ್ರಮ ಸಾಗಾಟ ಸತತ ಪ್ರಯತ್ನದ ತಿಂಗಳು…! | ಅಡಿಕೆ ಸಾಗಾಟಕ್ಕೆ ತಡೆಯಾಗುತ್ತಲೇ ಇದೆ | 42 ಟನ್‌ ಅಡಿಕೆ ಸಾಗಾಟದ ಮತ್ತೊಂದು ಪ್ರಕರಣ ಪತ್ತೆ |

Share

ಅಡಿಕೆ ಧಾರಣೆ ಸದ್ಯ ಸ್ಥಿರವಾಗಿದೆ. ಈ ನಡುವೆಯೇ ಅಡಿಕೆ ಅಕ್ರಮ ಸಾಗಾಟ, ಅಡಿಕೆ(Arecanut) ಆಮದು ಚಟುವಟಿಕೆ ನಡೆಯುತ್ತಲೇ ಇದೆ. ಇಲಾಖೆಗಳು ತಡೆಯೊಡ್ಡುತ್ತಲೇ ಇವೆ. ಅಕ್ಟೋಬರ್‌ ಹಾಗೂ ನವೆಂಬರ್‌ ತಿಂಗಳು ಅಡಿಕೆ ಸಾಗಾಟದ ಪ್ರಮುಖ ತಿಂಗಳು. ಇದೀಗ ಎರಡು ತಿಂಗಳಿನಿಂದ ಬರ್ಮಾ ಅಡಿಕೆ, ವಿದೇಶದಿಂದ ವಿವಿಧ ಹೆಸರಿನಲ್ಲಿ ಅಡಿಕೆ ಆಮದು ಪ್ರಯತ್ನ ನಡೆಯುತ್ತಿದೆ. ಈ ಎಲ್ಲದರ ನಡುವೆಯೇ 42 ಟನ್‌ ಅಡಿಕೆ ಅಸ್ಸಾಂನಲ್ಲಿ ತಡೆಯಾಗಿದೆ.

Advertisement
Advertisement
Advertisement
Advertisement

ಸಾಮಾನ್ಯವಾಗಿ ಅಕ್ಟೋಬರ್‌ ಹಾಗೂ ನವೆಂಬರ್‌ ತಿಂಗಳು ಅಕ್ರಮ ಅಡಿಕೆ ಸಾಗಾಟದ, ಆಮದು ಮಾಡುವ ತಿಂಗಳು. ಹಳೆ ಅಡಿಕೆ ಮುಗಿಯುವ ಹಾಗೂ ಗುಣಮಟ್ಟದ ಅಡಿಕೆ ಮಾರುಕಟ್ಟೆಗೆ ಬರುವ ಸಮಯ. ಅದೇ ಸಮಯಕ್ಕೆ ಹೊಸದಾದ ಅಡಿಕೆ ಮಾರುಕಟ್ಟೆಗೆ ಬರುವ ಸಮಯ. ಚಾಲಿ ಅಡಿಕೆ ಹಾಗೂ ಕೆಂಪಡಿಕೆಯೂ ಮಾರುಕಟ್ಟೆ ಪ್ರವೇಶ ಮಾಡುವ ಸಮಯ. ಇದೇ ಸಮಯಕ್ಕೆ ಸರಿಯಾಗಿ ಕಡಿಮೆ ಗುಣಮಟ್ಟದ ಅಡಿಕೆಯನ್ನು ಕಡಿಮೆ ದರದಲ್ಲಿ ಆಮದು ಮಾಡಿ, ಕಳ್ಳದಾರಿಯ ಮೂಲಕ ಸಾಗಾಟ ಮಾಡಿ ಇಲ್ಲಿನ ಅಡಿಕೆಯ ಜೊತೆಗೆ ಬೆರೆಸಿ ಉತ್ತಮ ಧಾರಣೆಗೆ ಮಾರಾಟ ಮಾಡುವ ಪ್ರಕ್ರಿಯೆ ಈಚೆಗೆ ಎರಡು ವರ್ಷಗಳಿಂದ ಸಕ್ರಿಯವಾಗಿದೆ. ಧಾರಣೆ ಏರಿಕೆಯ ಬಳಿಕ ಇಂತಹ ಸವಾಲುಗಳು ಅಡಿಕೆ ಬೆಳೆಗಾರರಿಗೆ ಇದೆ. ಅಡಿಕೆ ಮಾರುಕಟ್ಟೆಯನ್ನು ಹಾಳು ಮಾಡುವ ಹಾಗೂ ಯಾರೋ ಕೆಲವು ಮದ್ಯವರ್ತಿಗಳು ಅಡಿಕೆ ಮಾರುಕಟ್ಟೆಯ ಮೂಲಕ ಲಾಭ ಪಡೆಯುವ ಹುನ್ನಾರ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿಯೇ ಕಳೆದ ಎರಡು ತಿಂಗಳಲ್ಲಿ ಅನೇಕ ಕಳ್ಳಸಾಗಾಟದ ಅಡಿಕೆಯ ಪ್ರಕರಣ ಬಯಲಿಗೆ ಬಂದಿದೆ. ಇದೀಗ  ಆರು ಟ್ರಕ್‌ಗಳಲ್ಲಿ ತುಂಬಿದ್ದ ಸುಮಾರು 42 ಟನ್ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದ್ದು,  ಅಸ್ಸಾಂ ರೈಫಲ್ಸ್ ಪ್ರಮುಖ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದೆ.

Advertisement

ನವೆಂಬರ್‌ ಮಧ್ಯದವರೆಗೆ ಅಂದರೆ ದೀಪಾವಳಿವರೆಗೂ ಈ ಆಟ ನಡೆಯುವ ಸಾಧ್ಯತೆ ಇದೆ. ಅದಾದ ನಂತರ ಅಡಿಕೆ ಅಕ್ರಮ ಆಮದು ಮೇಲೆ ಕಡಿವಾಣವೂ ಹೆಚ್ಚಾಗಲಿದೆ. ಇಲ್ಲಿನ ಅಡಿಕೆಯೂ ಮಾರುಕಟ್ಟೆಗೆ ಸರಿಯಾಗಿ ಪ್ರವೇಶ ಮಾಡಲಿದೆ. ಹೀಗಾಗಿ ಅಡಿಕೆ ಧಾರಣೆ, ಅಡಿಕೆ ಮಾರುಕಟ್ಟೆ ಉಳಿಸುವಲ್ಲಿ ಇಲ್ಲಿನ ಅಡಿಕೆ ಬೆಳೆಗಾರರು ಈಗ ಮಹತ್ವದ ಪಾತ್ರವನ್ನು ವಹಿಸಿಕೊಳ್ಳಬೇಕಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

3 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

3 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

3 hours ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

12 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

12 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

13 hours ago