MIRROR FOCUS

ನವೆಂಬರ್‌ ಅಡಿಕೆ ಅಕ್ರಮ ಸಾಗಾಟ ಸತತ ಪ್ರಯತ್ನದ ತಿಂಗಳು…! | ಅಡಿಕೆ ಸಾಗಾಟಕ್ಕೆ ತಡೆಯಾಗುತ್ತಲೇ ಇದೆ | 42 ಟನ್‌ ಅಡಿಕೆ ಸಾಗಾಟದ ಮತ್ತೊಂದು ಪ್ರಕರಣ ಪತ್ತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಧಾರಣೆ ಸದ್ಯ ಸ್ಥಿರವಾಗಿದೆ. ಈ ನಡುವೆಯೇ ಅಡಿಕೆ ಅಕ್ರಮ ಸಾಗಾಟ, ಅಡಿಕೆ(Arecanut) ಆಮದು ಚಟುವಟಿಕೆ ನಡೆಯುತ್ತಲೇ ಇದೆ. ಇಲಾಖೆಗಳು ತಡೆಯೊಡ್ಡುತ್ತಲೇ ಇವೆ. ಅಕ್ಟೋಬರ್‌ ಹಾಗೂ ನವೆಂಬರ್‌ ತಿಂಗಳು ಅಡಿಕೆ ಸಾಗಾಟದ ಪ್ರಮುಖ ತಿಂಗಳು. ಇದೀಗ ಎರಡು ತಿಂಗಳಿನಿಂದ ಬರ್ಮಾ ಅಡಿಕೆ, ವಿದೇಶದಿಂದ ವಿವಿಧ ಹೆಸರಿನಲ್ಲಿ ಅಡಿಕೆ ಆಮದು ಪ್ರಯತ್ನ ನಡೆಯುತ್ತಿದೆ. ಈ ಎಲ್ಲದರ ನಡುವೆಯೇ 42 ಟನ್‌ ಅಡಿಕೆ ಅಸ್ಸಾಂನಲ್ಲಿ ತಡೆಯಾಗಿದೆ.

Advertisement
Advertisement

ಸಾಮಾನ್ಯವಾಗಿ ಅಕ್ಟೋಬರ್‌ ಹಾಗೂ ನವೆಂಬರ್‌ ತಿಂಗಳು ಅಕ್ರಮ ಅಡಿಕೆ ಸಾಗಾಟದ, ಆಮದು ಮಾಡುವ ತಿಂಗಳು. ಹಳೆ ಅಡಿಕೆ ಮುಗಿಯುವ ಹಾಗೂ ಗುಣಮಟ್ಟದ ಅಡಿಕೆ ಮಾರುಕಟ್ಟೆಗೆ ಬರುವ ಸಮಯ. ಅದೇ ಸಮಯಕ್ಕೆ ಹೊಸದಾದ ಅಡಿಕೆ ಮಾರುಕಟ್ಟೆಗೆ ಬರುವ ಸಮಯ. ಚಾಲಿ ಅಡಿಕೆ ಹಾಗೂ ಕೆಂಪಡಿಕೆಯೂ ಮಾರುಕಟ್ಟೆ ಪ್ರವೇಶ ಮಾಡುವ ಸಮಯ. ಇದೇ ಸಮಯಕ್ಕೆ ಸರಿಯಾಗಿ ಕಡಿಮೆ ಗುಣಮಟ್ಟದ ಅಡಿಕೆಯನ್ನು ಕಡಿಮೆ ದರದಲ್ಲಿ ಆಮದು ಮಾಡಿ, ಕಳ್ಳದಾರಿಯ ಮೂಲಕ ಸಾಗಾಟ ಮಾಡಿ ಇಲ್ಲಿನ ಅಡಿಕೆಯ ಜೊತೆಗೆ ಬೆರೆಸಿ ಉತ್ತಮ ಧಾರಣೆಗೆ ಮಾರಾಟ ಮಾಡುವ ಪ್ರಕ್ರಿಯೆ ಈಚೆಗೆ ಎರಡು ವರ್ಷಗಳಿಂದ ಸಕ್ರಿಯವಾಗಿದೆ. ಧಾರಣೆ ಏರಿಕೆಯ ಬಳಿಕ ಇಂತಹ ಸವಾಲುಗಳು ಅಡಿಕೆ ಬೆಳೆಗಾರರಿಗೆ ಇದೆ. ಅಡಿಕೆ ಮಾರುಕಟ್ಟೆಯನ್ನು ಹಾಳು ಮಾಡುವ ಹಾಗೂ ಯಾರೋ ಕೆಲವು ಮದ್ಯವರ್ತಿಗಳು ಅಡಿಕೆ ಮಾರುಕಟ್ಟೆಯ ಮೂಲಕ ಲಾಭ ಪಡೆಯುವ ಹುನ್ನಾರ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿಯೇ ಕಳೆದ ಎರಡು ತಿಂಗಳಲ್ಲಿ ಅನೇಕ ಕಳ್ಳಸಾಗಾಟದ ಅಡಿಕೆಯ ಪ್ರಕರಣ ಬಯಲಿಗೆ ಬಂದಿದೆ. ಇದೀಗ  ಆರು ಟ್ರಕ್‌ಗಳಲ್ಲಿ ತುಂಬಿದ್ದ ಸುಮಾರು 42 ಟನ್ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದ್ದು,  ಅಸ್ಸಾಂ ರೈಫಲ್ಸ್ ಪ್ರಮುಖ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದೆ.

ನವೆಂಬರ್‌ ಮಧ್ಯದವರೆಗೆ ಅಂದರೆ ದೀಪಾವಳಿವರೆಗೂ ಈ ಆಟ ನಡೆಯುವ ಸಾಧ್ಯತೆ ಇದೆ. ಅದಾದ ನಂತರ ಅಡಿಕೆ ಅಕ್ರಮ ಆಮದು ಮೇಲೆ ಕಡಿವಾಣವೂ ಹೆಚ್ಚಾಗಲಿದೆ. ಇಲ್ಲಿನ ಅಡಿಕೆಯೂ ಮಾರುಕಟ್ಟೆಗೆ ಸರಿಯಾಗಿ ಪ್ರವೇಶ ಮಾಡಲಿದೆ. ಹೀಗಾಗಿ ಅಡಿಕೆ ಧಾರಣೆ, ಅಡಿಕೆ ಮಾರುಕಟ್ಟೆ ಉಳಿಸುವಲ್ಲಿ ಇಲ್ಲಿನ ಅಡಿಕೆ ಬೆಳೆಗಾರರು ಈಗ ಮಹತ್ವದ ಪಾತ್ರವನ್ನು ವಹಿಸಿಕೊಳ್ಳಬೇಕಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂತೆಯಲ್ಲಿ ಸಾಗುತ್ತಿರುವ ನಾವು

ಇಂದಿನ ಜಗತ್ತಿನಲ್ಲಿ ನಿರ್ದಿಷ್ಟ ಜೀವನ ದೃಷ್ಠಿಯನ್ನು ಹೊಂದಿರಲು ಸಾಧ್ಯವಿಲ್ಲ. ಅದು ಆಗಾಗ ಬದಲಾಗುವ…

6 minutes ago

ಮೀನುಗಾರಿಕೆ ವಲಯದ ಪ್ರಗತಿ ಕುರಿತು ಪರಿಶೀಲನಾ ಸಭೆ | ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…

3 hours ago

ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತ ಮುಂಚೂಣಿಯಲ್ಲಿದೆ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ |

ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…

3 hours ago

ಮೇ 18 ರ ನಂತರ ರಾಹು ಕಾಟದಿಂದ ಈ 5 ರಾಶಿಯವರಿಗೆ ಕಷ್ಟಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?

ಅಡಿಕೆ ನಿಷೇಧದ ತೂಗುಗತ್ತಿಯ ಮೇಲೆಯೇ ಉದ್ಯಮವನ್ನು ಮುನ್ನಡೆಸಬೇಕಾಗುತ್ತದೆ.ಇನ್ನಾದರೂ ಕಠಿಣ ಪರಿಶ್ರಮದೊಂದಿಗೆ ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ…

12 hours ago

ಮುಂದಿನ ಒಂದು ವರ್ಷ ಕೆಲವು ರಾಶಿಗಳಿಗೆ ಗುರು ಪ್ರವೇಶದಿಂದ ಆಗುವ ತೊಂದರೆಗಳು ಏನು..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago