Advertisement
MIRROR FOCUS

ನವೆಂಬರ್‌ ಅಡಿಕೆ ಅಕ್ರಮ ಸಾಗಾಟ ಸತತ ಪ್ರಯತ್ನದ ತಿಂಗಳು…! | ಅಡಿಕೆ ಸಾಗಾಟಕ್ಕೆ ತಡೆಯಾಗುತ್ತಲೇ ಇದೆ | 42 ಟನ್‌ ಅಡಿಕೆ ಸಾಗಾಟದ ಮತ್ತೊಂದು ಪ್ರಕರಣ ಪತ್ತೆ |

Share

ಅಡಿಕೆ ಧಾರಣೆ ಸದ್ಯ ಸ್ಥಿರವಾಗಿದೆ. ಈ ನಡುವೆಯೇ ಅಡಿಕೆ ಅಕ್ರಮ ಸಾಗಾಟ, ಅಡಿಕೆ(Arecanut) ಆಮದು ಚಟುವಟಿಕೆ ನಡೆಯುತ್ತಲೇ ಇದೆ. ಇಲಾಖೆಗಳು ತಡೆಯೊಡ್ಡುತ್ತಲೇ ಇವೆ. ಅಕ್ಟೋಬರ್‌ ಹಾಗೂ ನವೆಂಬರ್‌ ತಿಂಗಳು ಅಡಿಕೆ ಸಾಗಾಟದ ಪ್ರಮುಖ ತಿಂಗಳು. ಇದೀಗ ಎರಡು ತಿಂಗಳಿನಿಂದ ಬರ್ಮಾ ಅಡಿಕೆ, ವಿದೇಶದಿಂದ ವಿವಿಧ ಹೆಸರಿನಲ್ಲಿ ಅಡಿಕೆ ಆಮದು ಪ್ರಯತ್ನ ನಡೆಯುತ್ತಿದೆ. ಈ ಎಲ್ಲದರ ನಡುವೆಯೇ 42 ಟನ್‌ ಅಡಿಕೆ ಅಸ್ಸಾಂನಲ್ಲಿ ತಡೆಯಾಗಿದೆ.

ಸಾಮಾನ್ಯವಾಗಿ ಅಕ್ಟೋಬರ್‌ ಹಾಗೂ ನವೆಂಬರ್‌ ತಿಂಗಳು ಅಕ್ರಮ ಅಡಿಕೆ ಸಾಗಾಟದ, ಆಮದು ಮಾಡುವ ತಿಂಗಳು. ಹಳೆ ಅಡಿಕೆ ಮುಗಿಯುವ ಹಾಗೂ ಗುಣಮಟ್ಟದ ಅಡಿಕೆ ಮಾರುಕಟ್ಟೆಗೆ ಬರುವ ಸಮಯ. ಅದೇ ಸಮಯಕ್ಕೆ ಹೊಸದಾದ ಅಡಿಕೆ ಮಾರುಕಟ್ಟೆಗೆ ಬರುವ ಸಮಯ. ಚಾಲಿ ಅಡಿಕೆ ಹಾಗೂ ಕೆಂಪಡಿಕೆಯೂ ಮಾರುಕಟ್ಟೆ ಪ್ರವೇಶ ಮಾಡುವ ಸಮಯ. ಇದೇ ಸಮಯಕ್ಕೆ ಸರಿಯಾಗಿ ಕಡಿಮೆ ಗುಣಮಟ್ಟದ ಅಡಿಕೆಯನ್ನು ಕಡಿಮೆ ದರದಲ್ಲಿ ಆಮದು ಮಾಡಿ, ಕಳ್ಳದಾರಿಯ ಮೂಲಕ ಸಾಗಾಟ ಮಾಡಿ ಇಲ್ಲಿನ ಅಡಿಕೆಯ ಜೊತೆಗೆ ಬೆರೆಸಿ ಉತ್ತಮ ಧಾರಣೆಗೆ ಮಾರಾಟ ಮಾಡುವ ಪ್ರಕ್ರಿಯೆ ಈಚೆಗೆ ಎರಡು ವರ್ಷಗಳಿಂದ ಸಕ್ರಿಯವಾಗಿದೆ. ಧಾರಣೆ ಏರಿಕೆಯ ಬಳಿಕ ಇಂತಹ ಸವಾಲುಗಳು ಅಡಿಕೆ ಬೆಳೆಗಾರರಿಗೆ ಇದೆ. ಅಡಿಕೆ ಮಾರುಕಟ್ಟೆಯನ್ನು ಹಾಳು ಮಾಡುವ ಹಾಗೂ ಯಾರೋ ಕೆಲವು ಮದ್ಯವರ್ತಿಗಳು ಅಡಿಕೆ ಮಾರುಕಟ್ಟೆಯ ಮೂಲಕ ಲಾಭ ಪಡೆಯುವ ಹುನ್ನಾರ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿಯೇ ಕಳೆದ ಎರಡು ತಿಂಗಳಲ್ಲಿ ಅನೇಕ ಕಳ್ಳಸಾಗಾಟದ ಅಡಿಕೆಯ ಪ್ರಕರಣ ಬಯಲಿಗೆ ಬಂದಿದೆ. ಇದೀಗ  ಆರು ಟ್ರಕ್‌ಗಳಲ್ಲಿ ತುಂಬಿದ್ದ ಸುಮಾರು 42 ಟನ್ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದ್ದು,  ಅಸ್ಸಾಂ ರೈಫಲ್ಸ್ ಪ್ರಮುಖ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದೆ.

ನವೆಂಬರ್‌ ಮಧ್ಯದವರೆಗೆ ಅಂದರೆ ದೀಪಾವಳಿವರೆಗೂ ಈ ಆಟ ನಡೆಯುವ ಸಾಧ್ಯತೆ ಇದೆ. ಅದಾದ ನಂತರ ಅಡಿಕೆ ಅಕ್ರಮ ಆಮದು ಮೇಲೆ ಕಡಿವಾಣವೂ ಹೆಚ್ಚಾಗಲಿದೆ. ಇಲ್ಲಿನ ಅಡಿಕೆಯೂ ಮಾರುಕಟ್ಟೆಗೆ ಸರಿಯಾಗಿ ಪ್ರವೇಶ ಮಾಡಲಿದೆ. ಹೀಗಾಗಿ ಅಡಿಕೆ ಧಾರಣೆ, ಅಡಿಕೆ ಮಾರುಕಟ್ಟೆ ಉಳಿಸುವಲ್ಲಿ ಇಲ್ಲಿನ ಅಡಿಕೆ ಬೆಳೆಗಾರರು ಈಗ ಮಹತ್ವದ ಪಾತ್ರವನ್ನು ವಹಿಸಿಕೊಳ್ಳಬೇಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

12 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago