Advertisement
MIRROR FOCUS

ನವೆಂಬರ್‌ ಅಡಿಕೆ ಅಕ್ರಮ ಸಾಗಾಟ ಸತತ ಪ್ರಯತ್ನದ ತಿಂಗಳು…! | ಅಡಿಕೆ ಸಾಗಾಟಕ್ಕೆ ತಡೆಯಾಗುತ್ತಲೇ ಇದೆ | 42 ಟನ್‌ ಅಡಿಕೆ ಸಾಗಾಟದ ಮತ್ತೊಂದು ಪ್ರಕರಣ ಪತ್ತೆ |

Share

ಅಡಿಕೆ ಧಾರಣೆ ಸದ್ಯ ಸ್ಥಿರವಾಗಿದೆ. ಈ ನಡುವೆಯೇ ಅಡಿಕೆ ಅಕ್ರಮ ಸಾಗಾಟ, ಅಡಿಕೆ(Arecanut) ಆಮದು ಚಟುವಟಿಕೆ ನಡೆಯುತ್ತಲೇ ಇದೆ. ಇಲಾಖೆಗಳು ತಡೆಯೊಡ್ಡುತ್ತಲೇ ಇವೆ. ಅಕ್ಟೋಬರ್‌ ಹಾಗೂ ನವೆಂಬರ್‌ ತಿಂಗಳು ಅಡಿಕೆ ಸಾಗಾಟದ ಪ್ರಮುಖ ತಿಂಗಳು. ಇದೀಗ ಎರಡು ತಿಂಗಳಿನಿಂದ ಬರ್ಮಾ ಅಡಿಕೆ, ವಿದೇಶದಿಂದ ವಿವಿಧ ಹೆಸರಿನಲ್ಲಿ ಅಡಿಕೆ ಆಮದು ಪ್ರಯತ್ನ ನಡೆಯುತ್ತಿದೆ. ಈ ಎಲ್ಲದರ ನಡುವೆಯೇ 42 ಟನ್‌ ಅಡಿಕೆ ಅಸ್ಸಾಂನಲ್ಲಿ ತಡೆಯಾಗಿದೆ.

ಸಾಮಾನ್ಯವಾಗಿ ಅಕ್ಟೋಬರ್‌ ಹಾಗೂ ನವೆಂಬರ್‌ ತಿಂಗಳು ಅಕ್ರಮ ಅಡಿಕೆ ಸಾಗಾಟದ, ಆಮದು ಮಾಡುವ ತಿಂಗಳು. ಹಳೆ ಅಡಿಕೆ ಮುಗಿಯುವ ಹಾಗೂ ಗುಣಮಟ್ಟದ ಅಡಿಕೆ ಮಾರುಕಟ್ಟೆಗೆ ಬರುವ ಸಮಯ. ಅದೇ ಸಮಯಕ್ಕೆ ಹೊಸದಾದ ಅಡಿಕೆ ಮಾರುಕಟ್ಟೆಗೆ ಬರುವ ಸಮಯ. ಚಾಲಿ ಅಡಿಕೆ ಹಾಗೂ ಕೆಂಪಡಿಕೆಯೂ ಮಾರುಕಟ್ಟೆ ಪ್ರವೇಶ ಮಾಡುವ ಸಮಯ. ಇದೇ ಸಮಯಕ್ಕೆ ಸರಿಯಾಗಿ ಕಡಿಮೆ ಗುಣಮಟ್ಟದ ಅಡಿಕೆಯನ್ನು ಕಡಿಮೆ ದರದಲ್ಲಿ ಆಮದು ಮಾಡಿ, ಕಳ್ಳದಾರಿಯ ಮೂಲಕ ಸಾಗಾಟ ಮಾಡಿ ಇಲ್ಲಿನ ಅಡಿಕೆಯ ಜೊತೆಗೆ ಬೆರೆಸಿ ಉತ್ತಮ ಧಾರಣೆಗೆ ಮಾರಾಟ ಮಾಡುವ ಪ್ರಕ್ರಿಯೆ ಈಚೆಗೆ ಎರಡು ವರ್ಷಗಳಿಂದ ಸಕ್ರಿಯವಾಗಿದೆ. ಧಾರಣೆ ಏರಿಕೆಯ ಬಳಿಕ ಇಂತಹ ಸವಾಲುಗಳು ಅಡಿಕೆ ಬೆಳೆಗಾರರಿಗೆ ಇದೆ. ಅಡಿಕೆ ಮಾರುಕಟ್ಟೆಯನ್ನು ಹಾಳು ಮಾಡುವ ಹಾಗೂ ಯಾರೋ ಕೆಲವು ಮದ್ಯವರ್ತಿಗಳು ಅಡಿಕೆ ಮಾರುಕಟ್ಟೆಯ ಮೂಲಕ ಲಾಭ ಪಡೆಯುವ ಹುನ್ನಾರ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿಯೇ ಕಳೆದ ಎರಡು ತಿಂಗಳಲ್ಲಿ ಅನೇಕ ಕಳ್ಳಸಾಗಾಟದ ಅಡಿಕೆಯ ಪ್ರಕರಣ ಬಯಲಿಗೆ ಬಂದಿದೆ. ಇದೀಗ  ಆರು ಟ್ರಕ್‌ಗಳಲ್ಲಿ ತುಂಬಿದ್ದ ಸುಮಾರು 42 ಟನ್ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದ್ದು,  ಅಸ್ಸಾಂ ರೈಫಲ್ಸ್ ಪ್ರಮುಖ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದೆ.

ನವೆಂಬರ್‌ ಮಧ್ಯದವರೆಗೆ ಅಂದರೆ ದೀಪಾವಳಿವರೆಗೂ ಈ ಆಟ ನಡೆಯುವ ಸಾಧ್ಯತೆ ಇದೆ. ಅದಾದ ನಂತರ ಅಡಿಕೆ ಅಕ್ರಮ ಆಮದು ಮೇಲೆ ಕಡಿವಾಣವೂ ಹೆಚ್ಚಾಗಲಿದೆ. ಇಲ್ಲಿನ ಅಡಿಕೆಯೂ ಮಾರುಕಟ್ಟೆಗೆ ಸರಿಯಾಗಿ ಪ್ರವೇಶ ಮಾಡಲಿದೆ. ಹೀಗಾಗಿ ಅಡಿಕೆ ಧಾರಣೆ, ಅಡಿಕೆ ಮಾರುಕಟ್ಟೆ ಉಳಿಸುವಲ್ಲಿ ಇಲ್ಲಿನ ಅಡಿಕೆ ಬೆಳೆಗಾರರು ಈಗ ಮಹತ್ವದ ಪಾತ್ರವನ್ನು ವಹಿಸಿಕೊಳ್ಳಬೇಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

13 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

13 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

14 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

14 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

1 day ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

3 days ago