Advertisement
MIRROR FOCUS

ನವೆಂಬರ್‌ ಅಡಿಕೆ ಅಕ್ರಮ ಸಾಗಾಟ ಸತತ ಪ್ರಯತ್ನದ ತಿಂಗಳು…! | ಅಡಿಕೆ ಸಾಗಾಟಕ್ಕೆ ತಡೆಯಾಗುತ್ತಲೇ ಇದೆ | 42 ಟನ್‌ ಅಡಿಕೆ ಸಾಗಾಟದ ಮತ್ತೊಂದು ಪ್ರಕರಣ ಪತ್ತೆ |

Share

ಅಡಿಕೆ ಧಾರಣೆ ಸದ್ಯ ಸ್ಥಿರವಾಗಿದೆ. ಈ ನಡುವೆಯೇ ಅಡಿಕೆ ಅಕ್ರಮ ಸಾಗಾಟ, ಅಡಿಕೆ(Arecanut) ಆಮದು ಚಟುವಟಿಕೆ ನಡೆಯುತ್ತಲೇ ಇದೆ. ಇಲಾಖೆಗಳು ತಡೆಯೊಡ್ಡುತ್ತಲೇ ಇವೆ. ಅಕ್ಟೋಬರ್‌ ಹಾಗೂ ನವೆಂಬರ್‌ ತಿಂಗಳು ಅಡಿಕೆ ಸಾಗಾಟದ ಪ್ರಮುಖ ತಿಂಗಳು. ಇದೀಗ ಎರಡು ತಿಂಗಳಿನಿಂದ ಬರ್ಮಾ ಅಡಿಕೆ, ವಿದೇಶದಿಂದ ವಿವಿಧ ಹೆಸರಿನಲ್ಲಿ ಅಡಿಕೆ ಆಮದು ಪ್ರಯತ್ನ ನಡೆಯುತ್ತಿದೆ. ಈ ಎಲ್ಲದರ ನಡುವೆಯೇ 42 ಟನ್‌ ಅಡಿಕೆ ಅಸ್ಸಾಂನಲ್ಲಿ ತಡೆಯಾಗಿದೆ.

ಸಾಮಾನ್ಯವಾಗಿ ಅಕ್ಟೋಬರ್‌ ಹಾಗೂ ನವೆಂಬರ್‌ ತಿಂಗಳು ಅಕ್ರಮ ಅಡಿಕೆ ಸಾಗಾಟದ, ಆಮದು ಮಾಡುವ ತಿಂಗಳು. ಹಳೆ ಅಡಿಕೆ ಮುಗಿಯುವ ಹಾಗೂ ಗುಣಮಟ್ಟದ ಅಡಿಕೆ ಮಾರುಕಟ್ಟೆಗೆ ಬರುವ ಸಮಯ. ಅದೇ ಸಮಯಕ್ಕೆ ಹೊಸದಾದ ಅಡಿಕೆ ಮಾರುಕಟ್ಟೆಗೆ ಬರುವ ಸಮಯ. ಚಾಲಿ ಅಡಿಕೆ ಹಾಗೂ ಕೆಂಪಡಿಕೆಯೂ ಮಾರುಕಟ್ಟೆ ಪ್ರವೇಶ ಮಾಡುವ ಸಮಯ. ಇದೇ ಸಮಯಕ್ಕೆ ಸರಿಯಾಗಿ ಕಡಿಮೆ ಗುಣಮಟ್ಟದ ಅಡಿಕೆಯನ್ನು ಕಡಿಮೆ ದರದಲ್ಲಿ ಆಮದು ಮಾಡಿ, ಕಳ್ಳದಾರಿಯ ಮೂಲಕ ಸಾಗಾಟ ಮಾಡಿ ಇಲ್ಲಿನ ಅಡಿಕೆಯ ಜೊತೆಗೆ ಬೆರೆಸಿ ಉತ್ತಮ ಧಾರಣೆಗೆ ಮಾರಾಟ ಮಾಡುವ ಪ್ರಕ್ರಿಯೆ ಈಚೆಗೆ ಎರಡು ವರ್ಷಗಳಿಂದ ಸಕ್ರಿಯವಾಗಿದೆ. ಧಾರಣೆ ಏರಿಕೆಯ ಬಳಿಕ ಇಂತಹ ಸವಾಲುಗಳು ಅಡಿಕೆ ಬೆಳೆಗಾರರಿಗೆ ಇದೆ. ಅಡಿಕೆ ಮಾರುಕಟ್ಟೆಯನ್ನು ಹಾಳು ಮಾಡುವ ಹಾಗೂ ಯಾರೋ ಕೆಲವು ಮದ್ಯವರ್ತಿಗಳು ಅಡಿಕೆ ಮಾರುಕಟ್ಟೆಯ ಮೂಲಕ ಲಾಭ ಪಡೆಯುವ ಹುನ್ನಾರ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿಯೇ ಕಳೆದ ಎರಡು ತಿಂಗಳಲ್ಲಿ ಅನೇಕ ಕಳ್ಳಸಾಗಾಟದ ಅಡಿಕೆಯ ಪ್ರಕರಣ ಬಯಲಿಗೆ ಬಂದಿದೆ. ಇದೀಗ  ಆರು ಟ್ರಕ್‌ಗಳಲ್ಲಿ ತುಂಬಿದ್ದ ಸುಮಾರು 42 ಟನ್ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದ್ದು,  ಅಸ್ಸಾಂ ರೈಫಲ್ಸ್ ಪ್ರಮುಖ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದೆ.

ನವೆಂಬರ್‌ ಮಧ್ಯದವರೆಗೆ ಅಂದರೆ ದೀಪಾವಳಿವರೆಗೂ ಈ ಆಟ ನಡೆಯುವ ಸಾಧ್ಯತೆ ಇದೆ. ಅದಾದ ನಂತರ ಅಡಿಕೆ ಅಕ್ರಮ ಆಮದು ಮೇಲೆ ಕಡಿವಾಣವೂ ಹೆಚ್ಚಾಗಲಿದೆ. ಇಲ್ಲಿನ ಅಡಿಕೆಯೂ ಮಾರುಕಟ್ಟೆಗೆ ಸರಿಯಾಗಿ ಪ್ರವೇಶ ಮಾಡಲಿದೆ. ಹೀಗಾಗಿ ಅಡಿಕೆ ಧಾರಣೆ, ಅಡಿಕೆ ಮಾರುಕಟ್ಟೆ ಉಳಿಸುವಲ್ಲಿ ಇಲ್ಲಿನ ಅಡಿಕೆ ಬೆಳೆಗಾರರು ಈಗ ಮಹತ್ವದ ಪಾತ್ರವನ್ನು ವಹಿಸಿಕೊಳ್ಳಬೇಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

7 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

16 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

17 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

21 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

22 hours ago