Advertisement
MIRROR FOCUS

ನವೆಂಬರ್‌ ಅಡಿಕೆ ಅಕ್ರಮ ಸಾಗಾಟ ಸತತ ಪ್ರಯತ್ನದ ತಿಂಗಳು…! | ಅಡಿಕೆ ಸಾಗಾಟಕ್ಕೆ ತಡೆಯಾಗುತ್ತಲೇ ಇದೆ | 42 ಟನ್‌ ಅಡಿಕೆ ಸಾಗಾಟದ ಮತ್ತೊಂದು ಪ್ರಕರಣ ಪತ್ತೆ |

Share

ಅಡಿಕೆ ಧಾರಣೆ ಸದ್ಯ ಸ್ಥಿರವಾಗಿದೆ. ಈ ನಡುವೆಯೇ ಅಡಿಕೆ ಅಕ್ರಮ ಸಾಗಾಟ, ಅಡಿಕೆ(Arecanut) ಆಮದು ಚಟುವಟಿಕೆ ನಡೆಯುತ್ತಲೇ ಇದೆ. ಇಲಾಖೆಗಳು ತಡೆಯೊಡ್ಡುತ್ತಲೇ ಇವೆ. ಅಕ್ಟೋಬರ್‌ ಹಾಗೂ ನವೆಂಬರ್‌ ತಿಂಗಳು ಅಡಿಕೆ ಸಾಗಾಟದ ಪ್ರಮುಖ ತಿಂಗಳು. ಇದೀಗ ಎರಡು ತಿಂಗಳಿನಿಂದ ಬರ್ಮಾ ಅಡಿಕೆ, ವಿದೇಶದಿಂದ ವಿವಿಧ ಹೆಸರಿನಲ್ಲಿ ಅಡಿಕೆ ಆಮದು ಪ್ರಯತ್ನ ನಡೆಯುತ್ತಿದೆ. ಈ ಎಲ್ಲದರ ನಡುವೆಯೇ 42 ಟನ್‌ ಅಡಿಕೆ ಅಸ್ಸಾಂನಲ್ಲಿ ತಡೆಯಾಗಿದೆ.

ಸಾಮಾನ್ಯವಾಗಿ ಅಕ್ಟೋಬರ್‌ ಹಾಗೂ ನವೆಂಬರ್‌ ತಿಂಗಳು ಅಕ್ರಮ ಅಡಿಕೆ ಸಾಗಾಟದ, ಆಮದು ಮಾಡುವ ತಿಂಗಳು. ಹಳೆ ಅಡಿಕೆ ಮುಗಿಯುವ ಹಾಗೂ ಗುಣಮಟ್ಟದ ಅಡಿಕೆ ಮಾರುಕಟ್ಟೆಗೆ ಬರುವ ಸಮಯ. ಅದೇ ಸಮಯಕ್ಕೆ ಹೊಸದಾದ ಅಡಿಕೆ ಮಾರುಕಟ್ಟೆಗೆ ಬರುವ ಸಮಯ. ಚಾಲಿ ಅಡಿಕೆ ಹಾಗೂ ಕೆಂಪಡಿಕೆಯೂ ಮಾರುಕಟ್ಟೆ ಪ್ರವೇಶ ಮಾಡುವ ಸಮಯ. ಇದೇ ಸಮಯಕ್ಕೆ ಸರಿಯಾಗಿ ಕಡಿಮೆ ಗುಣಮಟ್ಟದ ಅಡಿಕೆಯನ್ನು ಕಡಿಮೆ ದರದಲ್ಲಿ ಆಮದು ಮಾಡಿ, ಕಳ್ಳದಾರಿಯ ಮೂಲಕ ಸಾಗಾಟ ಮಾಡಿ ಇಲ್ಲಿನ ಅಡಿಕೆಯ ಜೊತೆಗೆ ಬೆರೆಸಿ ಉತ್ತಮ ಧಾರಣೆಗೆ ಮಾರಾಟ ಮಾಡುವ ಪ್ರಕ್ರಿಯೆ ಈಚೆಗೆ ಎರಡು ವರ್ಷಗಳಿಂದ ಸಕ್ರಿಯವಾಗಿದೆ. ಧಾರಣೆ ಏರಿಕೆಯ ಬಳಿಕ ಇಂತಹ ಸವಾಲುಗಳು ಅಡಿಕೆ ಬೆಳೆಗಾರರಿಗೆ ಇದೆ. ಅಡಿಕೆ ಮಾರುಕಟ್ಟೆಯನ್ನು ಹಾಳು ಮಾಡುವ ಹಾಗೂ ಯಾರೋ ಕೆಲವು ಮದ್ಯವರ್ತಿಗಳು ಅಡಿಕೆ ಮಾರುಕಟ್ಟೆಯ ಮೂಲಕ ಲಾಭ ಪಡೆಯುವ ಹುನ್ನಾರ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿಯೇ ಕಳೆದ ಎರಡು ತಿಂಗಳಲ್ಲಿ ಅನೇಕ ಕಳ್ಳಸಾಗಾಟದ ಅಡಿಕೆಯ ಪ್ರಕರಣ ಬಯಲಿಗೆ ಬಂದಿದೆ. ಇದೀಗ  ಆರು ಟ್ರಕ್‌ಗಳಲ್ಲಿ ತುಂಬಿದ್ದ ಸುಮಾರು 42 ಟನ್ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದ್ದು,  ಅಸ್ಸಾಂ ರೈಫಲ್ಸ್ ಪ್ರಮುಖ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದೆ.

ನವೆಂಬರ್‌ ಮಧ್ಯದವರೆಗೆ ಅಂದರೆ ದೀಪಾವಳಿವರೆಗೂ ಈ ಆಟ ನಡೆಯುವ ಸಾಧ್ಯತೆ ಇದೆ. ಅದಾದ ನಂತರ ಅಡಿಕೆ ಅಕ್ರಮ ಆಮದು ಮೇಲೆ ಕಡಿವಾಣವೂ ಹೆಚ್ಚಾಗಲಿದೆ. ಇಲ್ಲಿನ ಅಡಿಕೆಯೂ ಮಾರುಕಟ್ಟೆಗೆ ಸರಿಯಾಗಿ ಪ್ರವೇಶ ಮಾಡಲಿದೆ. ಹೀಗಾಗಿ ಅಡಿಕೆ ಧಾರಣೆ, ಅಡಿಕೆ ಮಾರುಕಟ್ಟೆ ಉಳಿಸುವಲ್ಲಿ ಇಲ್ಲಿನ ಅಡಿಕೆ ಬೆಳೆಗಾರರು ಈಗ ಮಹತ್ವದ ಪಾತ್ರವನ್ನು ವಹಿಸಿಕೊಳ್ಳಬೇಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

8 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

10 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 days ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago