Advertisement
MIRROR FOCUS

ನವೆಂಬರ್‌ ಅಡಿಕೆ ಅಕ್ರಮ ಸಾಗಾಟ ಸತತ ಪ್ರಯತ್ನದ ತಿಂಗಳು…! | ಅಡಿಕೆ ಸಾಗಾಟಕ್ಕೆ ತಡೆಯಾಗುತ್ತಲೇ ಇದೆ | 42 ಟನ್‌ ಅಡಿಕೆ ಸಾಗಾಟದ ಮತ್ತೊಂದು ಪ್ರಕರಣ ಪತ್ತೆ |

Share

ಅಡಿಕೆ ಧಾರಣೆ ಸದ್ಯ ಸ್ಥಿರವಾಗಿದೆ. ಈ ನಡುವೆಯೇ ಅಡಿಕೆ ಅಕ್ರಮ ಸಾಗಾಟ, ಅಡಿಕೆ(Arecanut) ಆಮದು ಚಟುವಟಿಕೆ ನಡೆಯುತ್ತಲೇ ಇದೆ. ಇಲಾಖೆಗಳು ತಡೆಯೊಡ್ಡುತ್ತಲೇ ಇವೆ. ಅಕ್ಟೋಬರ್‌ ಹಾಗೂ ನವೆಂಬರ್‌ ತಿಂಗಳು ಅಡಿಕೆ ಸಾಗಾಟದ ಪ್ರಮುಖ ತಿಂಗಳು. ಇದೀಗ ಎರಡು ತಿಂಗಳಿನಿಂದ ಬರ್ಮಾ ಅಡಿಕೆ, ವಿದೇಶದಿಂದ ವಿವಿಧ ಹೆಸರಿನಲ್ಲಿ ಅಡಿಕೆ ಆಮದು ಪ್ರಯತ್ನ ನಡೆಯುತ್ತಿದೆ. ಈ ಎಲ್ಲದರ ನಡುವೆಯೇ 42 ಟನ್‌ ಅಡಿಕೆ ಅಸ್ಸಾಂನಲ್ಲಿ ತಡೆಯಾಗಿದೆ.

ಸಾಮಾನ್ಯವಾಗಿ ಅಕ್ಟೋಬರ್‌ ಹಾಗೂ ನವೆಂಬರ್‌ ತಿಂಗಳು ಅಕ್ರಮ ಅಡಿಕೆ ಸಾಗಾಟದ, ಆಮದು ಮಾಡುವ ತಿಂಗಳು. ಹಳೆ ಅಡಿಕೆ ಮುಗಿಯುವ ಹಾಗೂ ಗುಣಮಟ್ಟದ ಅಡಿಕೆ ಮಾರುಕಟ್ಟೆಗೆ ಬರುವ ಸಮಯ. ಅದೇ ಸಮಯಕ್ಕೆ ಹೊಸದಾದ ಅಡಿಕೆ ಮಾರುಕಟ್ಟೆಗೆ ಬರುವ ಸಮಯ. ಚಾಲಿ ಅಡಿಕೆ ಹಾಗೂ ಕೆಂಪಡಿಕೆಯೂ ಮಾರುಕಟ್ಟೆ ಪ್ರವೇಶ ಮಾಡುವ ಸಮಯ. ಇದೇ ಸಮಯಕ್ಕೆ ಸರಿಯಾಗಿ ಕಡಿಮೆ ಗುಣಮಟ್ಟದ ಅಡಿಕೆಯನ್ನು ಕಡಿಮೆ ದರದಲ್ಲಿ ಆಮದು ಮಾಡಿ, ಕಳ್ಳದಾರಿಯ ಮೂಲಕ ಸಾಗಾಟ ಮಾಡಿ ಇಲ್ಲಿನ ಅಡಿಕೆಯ ಜೊತೆಗೆ ಬೆರೆಸಿ ಉತ್ತಮ ಧಾರಣೆಗೆ ಮಾರಾಟ ಮಾಡುವ ಪ್ರಕ್ರಿಯೆ ಈಚೆಗೆ ಎರಡು ವರ್ಷಗಳಿಂದ ಸಕ್ರಿಯವಾಗಿದೆ. ಧಾರಣೆ ಏರಿಕೆಯ ಬಳಿಕ ಇಂತಹ ಸವಾಲುಗಳು ಅಡಿಕೆ ಬೆಳೆಗಾರರಿಗೆ ಇದೆ. ಅಡಿಕೆ ಮಾರುಕಟ್ಟೆಯನ್ನು ಹಾಳು ಮಾಡುವ ಹಾಗೂ ಯಾರೋ ಕೆಲವು ಮದ್ಯವರ್ತಿಗಳು ಅಡಿಕೆ ಮಾರುಕಟ್ಟೆಯ ಮೂಲಕ ಲಾಭ ಪಡೆಯುವ ಹುನ್ನಾರ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿಯೇ ಕಳೆದ ಎರಡು ತಿಂಗಳಲ್ಲಿ ಅನೇಕ ಕಳ್ಳಸಾಗಾಟದ ಅಡಿಕೆಯ ಪ್ರಕರಣ ಬಯಲಿಗೆ ಬಂದಿದೆ. ಇದೀಗ  ಆರು ಟ್ರಕ್‌ಗಳಲ್ಲಿ ತುಂಬಿದ್ದ ಸುಮಾರು 42 ಟನ್ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದ್ದು,  ಅಸ್ಸಾಂ ರೈಫಲ್ಸ್ ಪ್ರಮುಖ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದೆ.

ನವೆಂಬರ್‌ ಮಧ್ಯದವರೆಗೆ ಅಂದರೆ ದೀಪಾವಳಿವರೆಗೂ ಈ ಆಟ ನಡೆಯುವ ಸಾಧ್ಯತೆ ಇದೆ. ಅದಾದ ನಂತರ ಅಡಿಕೆ ಅಕ್ರಮ ಆಮದು ಮೇಲೆ ಕಡಿವಾಣವೂ ಹೆಚ್ಚಾಗಲಿದೆ. ಇಲ್ಲಿನ ಅಡಿಕೆಯೂ ಮಾರುಕಟ್ಟೆಗೆ ಸರಿಯಾಗಿ ಪ್ರವೇಶ ಮಾಡಲಿದೆ. ಹೀಗಾಗಿ ಅಡಿಕೆ ಧಾರಣೆ, ಅಡಿಕೆ ಮಾರುಕಟ್ಟೆ ಉಳಿಸುವಲ್ಲಿ ಇಲ್ಲಿನ ಅಡಿಕೆ ಬೆಳೆಗಾರರು ಈಗ ಮಹತ್ವದ ಪಾತ್ರವನ್ನು ವಹಿಸಿಕೊಳ್ಳಬೇಕಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

7 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

13 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

21 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago