Advertisement
MIRROR FOCUS

ಇಡೀ ದೇಶದಲ್ಲೀಗ ಅಡಿಕೆಯದ್ದೇ ಹವಾ | ಇಲ್ಲಿ ಅಡಿಕೆ ಧಾರಣೆ ದಾಖಲೆಯತ್ತ | ಅಲ್ಲಿ ಅಡಿಕೆ ಮೇಲೆ ತೆರಿಗೆ ಧಾಳಿ- ಆಮದು ತಡೆ |

Share

ಅಡಿಕೆ ಧಾರಣೆ ದಾಖಲೆಯತ್ತ ಸಾಗಿದೆ. 500 ರೂಪಾಯಿ ಧಾರಣೆ ಒಂದು ಕೆಜಿ ಅಡಿಕೆಗೆ. ಇನ್ನೂ ಏರಬಹುದಾ ? ವಿಶ್ಲೇಷಣೆಗಳು ಆರಂಭವಾಗಿದೆ. ಇಡೀ ದೇಶದಲ್ಲಿ ಈಗ ಅಡಿಕೆ ಹವಾ ಸೃಷ್ಟಿಯಾಗಿದೆ. ದೇಶದ ಎಲ್ಲಾ ಕೃಷಿಕರೂ ಅಡಿಕೆಯೇ ಲಾಭದಾಯಕ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆಯೇ ಅಡಿಕೆ ಮೇಲೆ ತೆರಿಗೆ ಧಾಳಿ ಹೆಚ್ಚಾಗಿದೆ. ದಾಖಲೆಗಳಿಲ್ಲದೆ 7 ಕೋಟಿ ರೂ ಮೌಲ್ಯದ ಅಡಿಕೆ ಸಾಗಾಟ ಮಾಡುತ್ತಿದ್ದ ಏಳು ವಾಹನಗಳನ್ನು ತೆರಿಗೆ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಇದೇ ವೇಳೆ 1,70,44,800 ರೂಪಾಯಿ ಮೌಲ್ಯ ಅಡಿಕೆ ಆಮದನ್ನು ಕೂಡಾ ಅಧಿಕಾರಿಗಳು ತಡೆದಿದ್ದಾರೆ.

ಅಡಿಕೆ ಧಾರಣೆ ಗುರುವಾರ 500 ರೂಪಾಯಿ ತಲಪಿದೆ. ಅಡಿಕೆ ಮಾರುಕಟ್ಟೆಯ ಇತಿಹಾಸದಲ್ಲಿಯೇ ದಾಖಲೆಯ ಧಾರಣೆ ಇದಾಗಿದೆ. ಹಳೆ ಅಡಿಕೆ ಹಾಗೂ ಹೊಸ ಅಡಿಕೆ ಎರಡೂ ಧಾರಣೆ 500 ರೂಪಾಯಿಗಿಂತ ಹೆಚ್ಚಾಗಿರುವುದು  ದಾಖಲೆಯಾಗಿದೆ. ಈಗಿನ ಹೊಸ ಅಡಿಕೆ ಧಾರಣೆಯೂ ಸದ್ಯ ಉತ್ತಮವಾಗಿದೆ. ಹೀಗಾಗಿ ಅಡಿಕೆ ಬೆಳೆಗಾರರಿಗೆ ಸಹಜವಾಗಿಯೇ ಸಂತಸವಾಗಿದೆ. ಈಗ ಇನ್ನೂ ಧಾರಣೆ ಏರಿಕೆಯಾಗುವುದೇ ಎಂಬ ಪ್ರಶ್ನೆಗಳೂ ಸಹಜವಾಗಿಯೇ ಇದೆ. ಬೆಳೆ ಕಡಿಮೆಯಾಗಿರುವುದು , ಮಾರುಕಟ್ಟೆಗೆ ಅಡಿಕೆ ಬಾರದೇ ಇರುವುದು , ಕಳೆದ ವರ್ಷದ ಅಡಿಕೆ ಕೊರತೆ ಇನ್ನೂ ಭರ್ತಿಯಾಗದೇ ಇರುವುದು, ಅಡಿಕೆ ದಾಸ್ತಾನು ಮಾಡುವವರೂ ಕಳೆದ ಒಂದು ವರ್ಷದಿಂದ ಅಡಿಕೆ ದಾಸ್ತಾನು ಮಾಡದೇ ಇರುವುದು  , ಉತ್ತರ ಭಾರತದಲ್ಲಿ ಅಡಿಕೆ ಬಳಕೆಯ ಮಂದಿಯಲ್ಲಿ ಅಡಿಕೆ ಬಳಕೆ ಕಡಿಮೆಯಾಗದೇ ಇರುವುದೆ ಸೇರಿದಂತೆ ವಿವಿಧ ಅಂಶಗಳು ಅಡಿಕೆ ಮಾರುಕಟ್ಟೆ ಏರಿಕೆಗೆ ಕಾರಣವಾಗಿದೆ. ಈ ನಡುವೆಯೇ ಅಡಿಕೆ ಆಮದು ತಡೆಯೂ ಪ್ರಮುಖ ಕಾರಣವಾಗುತ್ತಿದೆ. ಹೀಗಾಗಿ ಅಡಿಕೆ ಧಾರಣೆ ನಿರೀಕ್ಷಿಸಿದಂತೆ  500 ರೂಪಾಯಿ ತಲುಪಿದೆ. ಉತ್ತಮ ಧಾರಣೆ ಲಭ್ಯವಾಗಿದೆ.

ಅಡಿಕೆ ಧಾರಣೆ ಏರಿಕೆ ಹಾಗೂ ವಿಪರೀತ ಧಾರಣೆಯ ಕಾರಣದಿಂದ ಇಡೀ ದೇಶದಲ್ಲಿ ಅಡಿಕೆ ಹವಾ ಎದ್ದಿದೆ. ಅನೇಕ  ಕೃಷಿಕರೂ ಅಡಿಕೆ ಬಗ್ಗೆ ಚರ್ಚೆ ನಡೆಸುವುದು  ಹಾಗೂ ಬೆಳೆಯ ಬಗ್ಗೆ ಮಾಹಿತಿ ಕಲೆ ಹಾಕುವುದು  ಆರಂಭವಾಗಿದೆ. ಅಡಿಕೆ ಬೆಳೆ ಲಾಭದಾಯಕ ಎಂಬ ಭಾವನೆಯೂ ಎಲ್ಲಾ ಕೃಷಿರಲ್ಲೂ ಮೂಡುತ್ತಿದೆ. ಅಡಿಕೆ ಬಳಕೆ ಏನು ಹಾಗೂ ಎಲ್ಲಿ  ಎಂಬ ಪ್ರಶ್ನೆಗಿಂತಲೂ ಅಡಿಕೆ ಬೆಳೆ ಲಾಭದಾಯಕ ಎನ್ನುವುದು ಮಾತ್ರವೇ ಸದ್ಯ ಚರ್ಚೆಯಾಗುವ ಸಂಗತಿ.

ಈ ನಡುವೆಯೇ ಸೆಂಟ್ರಲ್ ಜಿಎಸ್‌ಟಿ ಮತ್ತು ಸೆಂಟ್ರಲ್ ಅಬಕಾರಿ ಕಮಿಷನರೇಟ್, ಬೆಳಗಾವಿ ಅವರ ತಂಡ ಸರಿಯಾದ ಜಿಎಸ್‌ಟಿ ದಾಖಲೆಗಳಿಲ್ಲದೆ 7 ಕೋಟಿ ರೂ ಮೌಲ್ಯದ ಅಡಿಕೆ ಸಾಗಾಟ ಮಾಡುತ್ತಿದ್ದ ಏಳು ವಾಹನಗಳನ್ನು ಅಧಿಕಾರಿಗಳು ತಡೆದು ವಶಕ್ಕೆ ಪಡೆದಿದ್ದಾರೆ.

ಇದೇ ವೇಳೆ ಅಸ್ಸಾಂ ಮೂಲಕ ದೇಶದೊಳಕ್ಕೆ ಆಗಮಿಸುತ್ತಿದ್ದ ಸುಮಾರು 1.7  ಕೋಟಿ ರೂಪಾಯಿ ಮೌಲ್ಯದ  780  ಚೀಲ ಅಡಿಕೆಯನ್ನು ಅಸ್ಸಾಂ ಭದ್ರತಾ ಪಡೆ ವಶಕ್ಕೆ ತೆಗೆದುಕೊಂಡಿದ್ದಾರೆ. ನಿರಂತರವಾಗಿ ನಡೆಯುತ್ತಿರುವ ಈ ಅಕ್ರಮ ಚಟುವಟಿಕೆಯನ್ನು  ಗಡಿ ಭದ್ರತಾ ಪಡೆ ತಡೆಯುತ್ತಲೇ ಇದೆ. ಈಚೆಗೆ ವಿವಿಧ ದಾರಿಗಳ ಮೂಲಕ ಸತತ ಪ್ರಯತ್ನ ನಡೆಯುತ್ತಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

8 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

8 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago