Arecanut_Market | ಎಲ್ಲೆಡೆಯೂ ಅಡಿಕೆ ಮಾರುಕಟ್ಟೆ ಮೇಲೆ ಕಣ್ಣು | ಪಾಕಿಸ್ತಾನದಲ್ಲೂ ಅಡಿಕೆ ಮೇಲೆ ನಿಗಾ | 7 ಕೋಟಿ ಮೌಲ್ಯದ ಅಡಿಕೆ ವಶ |

September 25, 2021
10:20 PM

ಅಡಿಕೆ ಧಾರಣೆ ಏರಿಕೆಯಾಗುತ್ತಿದ್ದಂತೆಯೇ ಭಾರತ ಮಾತ್ರವಲ್ಲ ವಿವಿಧ ದೇಶಗಳಲ್ಲೂ ಅಡಿಕೆ ಮೇಲೆ ನಿಗಾ ಇಡಲಾಗಿದೆ. ಈಚೆಗೆ ಪಾಕಿಸ್ತಾನದಲ್ಲೂ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ 7 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು  ಕಸ್ಟಮ್ಸ್ ಸಂಸ್ಥೆ ವಶಪಡಿಸಿಕೊಂಡಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮ ವರದಿ ಮಾಡಿದೆ.

Advertisement
Advertisement
Advertisement

ಅಡಿಕೆ ಧಾರಣೆ ಏರಿಕೆಯಾಗಿರುವುದು  ಹಾಗೂ ಆ ಬಳಿಕ ಅಡಿಕೆ ಕಳ್ಳಸಾಗಾಣಿಕೆ ಬಗ್ಗೆ ಎಲ್ಲೆಡೆಯೂ ನಿಗಾ ವಹಿಸಲಾಗಿತ್ತು. ಈಚೆಗೆ ಪಾಕಿಸ್ತಾನದಲ್ಲೂ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿರುವ ಬಗ್ಗೆಯೂ ವರದಿಯಾಗಿದೆ. ಅಪ್ಘಾನ್‌ ಮೂಲಕವೂ ಅಡಿಕೆ ಸಾಗಾಟವಾಗುತ್ತಿರುವ ಬಗ್ಗೆಯೂ ಆಗಸ್ಟ್‌ ತಿಂಗಳಲ್ಲಿ ವರದಿಯಾಗಿತ್ತು. ಅದಾದ ನಂತರ ಬೇರೆ ಮಾರ್ಗಗಳ ಮೂಲಕ ಅಡಿಕೆ ಕಳ್ಳದಾರಿಯ ಮೂಲಕ ಪಾಕಿಸ್ತಾನಕ್ಕೆ ಆಮದು ಆಗುವ ಬಗ್ಗೆ ಮಾಹಿತಿ ಇತ್ತು.  ಹೀಗಾಗಿ ಪಾಕಿಸ್ತಾನದ ಕಸ್ಟಮ್ಸ್ ಇಲಾಖೆಯು ಈ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿತ್ತು. ಈ ಸಂದರ್ಭ  ಸುಮಾರು ಏಳು ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಪಡಿಸಿಕೊಂಡಿದೆ ಎಂದು  ವರದಿಯಾಗಿದೆ. ಸೆ 18  ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 48 ಸಾವಿರ ಕೆಜಿ ಅಡಿಕೆ ವಶಪಡಿಸಿಕೊಂಡಿದ್ದರು. ಒಟ್ಟು 30 ದಿನಗಳಲ್ಲಿ 13 ಕೋಟಿ ರೂಪಾಯಿಗೂ ಮಿಕ್ಕಿದ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಹೀಗೆ ವಶಪಡಿಸಿಕೊಂಡ ಅಡಿಕೆಯ ವಿದೇಶಿ ಅಡಿಕೆ ಎಂದಷ್ಟೇ ದಾಖಲಾಗಿದ್ದು ಎಲ್ಲಿಯ ಅಡಿಕೆ ಎಂಬವುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳು ವರದಿಯಲ್ಲಿ  ತಿಳಿಸಿವೆ. ಪಾಕಿಸ್ತಾನದಲ್ಲಿ  ಅಡಿಕೆ ಬಳಕೆಯ ವಿವಿಧ ಕಂಪನಿಗಳು ಕಾರ್ಯನಿರ್ವಹಿಸುತ್ತವೆ. ಗುಟ್ಕಾ ಮೊದಲಾದ ವಸ್ತುಗಳ ತಯಾರಿಕೆ ಅಲ್ಲಿ ನಡೆಯುತ್ತದೆ.

Advertisement

 

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆ
April 18, 2024
10:09 PM
by: ದ ರೂರಲ್ ಮಿರರ್.ಕಾಂ
ಆದರ್ಶ ಜೀವನ ಮತ್ತು ಪರಿಸರ ಸ್ನೇಹಿ ನೀತಿ ತಿಳಿಸುವ ಮಂಗಟ್ಟೆ ಹಕ್ಕಿಗಳು…
April 18, 2024
4:46 PM
by: The Rural Mirror ಸುದ್ದಿಜಾಲ
ಮರುಭೂಮಿ ನಾಡು ದುಬೈನಲ್ಲಿ 75 ವರ್ಷಗಳಲ್ಲೇ ದಾಖಲೆ ಮಳೆ…! | ಪ್ರವಾಹಕ್ಕೆ UAE ತತ್ತರ |
April 18, 2024
3:49 PM
by: The Rural Mirror ಸುದ್ದಿಜಾಲ
ಎಚ್ಚರ….. ತಾಯಂದಿರೇ ನಿಮ್ಮ ಮಕ್ಕಳಿಗೆ ಸೆರೆಲಾಕ್ ತಿನ್ನಿಸುತ್ತೀರಾ..? | ಬಯಲಾಯ್ತು ಶಾಕಿಂಗ್ ನ್ಯೂಸ್…! | ವರದಿ ಬಹಿರಂಗದ ಬಳಿಕ ನೆಸ್ಲೆ ಪ್ರತಿಕ್ರಿಯೆ ಏನು..?
April 18, 2024
3:21 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror