ಸುದ್ದಿಗಳು

Arecanut_Market | ಎಲ್ಲೆಡೆಯೂ ಅಡಿಕೆ ಮಾರುಕಟ್ಟೆ ಮೇಲೆ ಕಣ್ಣು | ಪಾಕಿಸ್ತಾನದಲ್ಲೂ ಅಡಿಕೆ ಮೇಲೆ ನಿಗಾ | 7 ಕೋಟಿ ಮೌಲ್ಯದ ಅಡಿಕೆ ವಶ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಧಾರಣೆ ಏರಿಕೆಯಾಗುತ್ತಿದ್ದಂತೆಯೇ ಭಾರತ ಮಾತ್ರವಲ್ಲ ವಿವಿಧ ದೇಶಗಳಲ್ಲೂ ಅಡಿಕೆ ಮೇಲೆ ನಿಗಾ ಇಡಲಾಗಿದೆ. ಈಚೆಗೆ ಪಾಕಿಸ್ತಾನದಲ್ಲೂ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ 7 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು  ಕಸ್ಟಮ್ಸ್ ಸಂಸ್ಥೆ ವಶಪಡಿಸಿಕೊಂಡಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮ ವರದಿ ಮಾಡಿದೆ.

Advertisement
Advertisement

ಅಡಿಕೆ ಧಾರಣೆ ಏರಿಕೆಯಾಗಿರುವುದು  ಹಾಗೂ ಆ ಬಳಿಕ ಅಡಿಕೆ ಕಳ್ಳಸಾಗಾಣಿಕೆ ಬಗ್ಗೆ ಎಲ್ಲೆಡೆಯೂ ನಿಗಾ ವಹಿಸಲಾಗಿತ್ತು. ಈಚೆಗೆ ಪಾಕಿಸ್ತಾನದಲ್ಲೂ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿರುವ ಬಗ್ಗೆಯೂ ವರದಿಯಾಗಿದೆ. ಅಪ್ಘಾನ್‌ ಮೂಲಕವೂ ಅಡಿಕೆ ಸಾಗಾಟವಾಗುತ್ತಿರುವ ಬಗ್ಗೆಯೂ ಆಗಸ್ಟ್‌ ತಿಂಗಳಲ್ಲಿ ವರದಿಯಾಗಿತ್ತು. ಅದಾದ ನಂತರ ಬೇರೆ ಮಾರ್ಗಗಳ ಮೂಲಕ ಅಡಿಕೆ ಕಳ್ಳದಾರಿಯ ಮೂಲಕ ಪಾಕಿಸ್ತಾನಕ್ಕೆ ಆಮದು ಆಗುವ ಬಗ್ಗೆ ಮಾಹಿತಿ ಇತ್ತು.  ಹೀಗಾಗಿ ಪಾಕಿಸ್ತಾನದ ಕಸ್ಟಮ್ಸ್ ಇಲಾಖೆಯು ಈ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿತ್ತು. ಈ ಸಂದರ್ಭ  ಸುಮಾರು ಏಳು ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಪಡಿಸಿಕೊಂಡಿದೆ ಎಂದು  ವರದಿಯಾಗಿದೆ. ಸೆ 18  ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 48 ಸಾವಿರ ಕೆಜಿ ಅಡಿಕೆ ವಶಪಡಿಸಿಕೊಂಡಿದ್ದರು. ಒಟ್ಟು 30 ದಿನಗಳಲ್ಲಿ 13 ಕೋಟಿ ರೂಪಾಯಿಗೂ ಮಿಕ್ಕಿದ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಹೀಗೆ ವಶಪಡಿಸಿಕೊಂಡ ಅಡಿಕೆಯ ವಿದೇಶಿ ಅಡಿಕೆ ಎಂದಷ್ಟೇ ದಾಖಲಾಗಿದ್ದು ಎಲ್ಲಿಯ ಅಡಿಕೆ ಎಂಬವುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳು ವರದಿಯಲ್ಲಿ  ತಿಳಿಸಿವೆ. ಪಾಕಿಸ್ತಾನದಲ್ಲಿ  ಅಡಿಕೆ ಬಳಕೆಯ ವಿವಿಧ ಕಂಪನಿಗಳು ಕಾರ್ಯನಿರ್ವಹಿಸುತ್ತವೆ. ಗುಟ್ಕಾ ಮೊದಲಾದ ವಸ್ತುಗಳ ತಯಾರಿಕೆ ಅಲ್ಲಿ ನಡೆಯುತ್ತದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

15 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

18 hours ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

19 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

1 day ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

2 days ago