ಅಡಿಕೆಯನ್ನು ನೇಪಾಳ ಸರಕಾರ ಆಮದು ನಿಷೇಧಗಳ ಪಟ್ಟಿಯಲ್ಲಿ ಸೇರಿಸಿದೆ. ಅಡಿಕೆ ಆಮದಿಗಾಗಿ ಯಾವುದೇ ವಿದೇಶಿ ವಿನಿಮಯ ಸೌಲಭ್ಯಗಳನ್ನು ಒದಗಿಸುವುದಿಲ್ಲ ಎಂದೂ ನೇಪಾಳ ಸರಕಾರ ಹೇಳಿದೆ. ಇದರಿಂದ ಭಾರತದೊಳಕ್ಕೆ ನೇಪಾಳ ಮೂಲಕವಾಗಿ ಆಗಮಿಸುತ್ತಿದ್ದ ಅಡಿಕೆಗೆ ತಡೆಯಾಗಬಹುದಾಗಿದೆ. ಹೀಗಾಗಿ ಮತ್ತೆ ಅಡಿಕೆ ಮಾರುಕಟ್ಟೆಯಲ್ಲಿ ಸಂಚಲನ ಉಂಟಾಗಿದೆ.
ಕಳೆದ ಮಾರ್ಚಲ್ಲಿ, ನೇಪಾಳ ಸರಕಾರವು ಕೃಷಿ ಉತ್ಪನ್ನಗಳ ಆಮದಿನ ಮೇಲಿನ ನಿರ್ಬಂಧವನ್ನು ಷರತ್ತುಬದ್ಧವಾಗಿ ಸಡಿಲಿಸಿತು. ಇದರಿಂದಾಗಿ ವ್ಯಾಪಾರಿಗಳು ತಲಾ 15,000 ಟನ್ಗಳಷ್ಟು ಅಡಿಕೆ ಮತ್ತು ಕಾಳುಮೆಣಸು ಮತ್ತು 5,000 ಟನ್ಗಳಷ್ಟು ಖರ್ಜೂರವನ್ನು ಕೈಗಾರಿಕಾ ಉದ್ದೇಶಗಳಿಗಾಗಿ ಬಳಸಲು ಆಮದು ಮಾಡಿಕೊಳ್ಳಬಹುದಾಗಿತ್ತು. ಹೀಗೆ ನೇಪಾಳಕ್ಕೆ ಬಂದ ಅಡಿಕೆಯ ಬಹುಪಾಲು ಕಳ್ಳಸಾಗಾಣಿಯ ಮೂಲಕ ಭಾರತಕ್ಕೆ ಸಾಗಾಟ ಮಾಡಿರುವುದನ್ನು ನೇಪಾಳ ಪತ್ತೆ ಮಾಡಿದೆ.
ಕೊರೋನಾ ಕಾರಣದಿಂದ 2019-20 ರ ಮಾರ್ಚ್ 24 ರಂದು ಲಾಕ್ಡೌನ್ ಹೇರಿದ ನಂತರ ವಿದೇಶಿ ಕರೆನ್ಸಿ ಕುಸಿತವನ್ನು ತಡೆಗಟ್ಟಲು, ಐಷಾರಾಮಿ ವಾಹನಗಳ ಜೊತೆಗೆ ದುಬಾರಿ ಖಾದ್ಯಗಳ ಆಮದನ್ನು ಸರಕಾರ ಸಂಪೂರ್ಣವಾಗಿ ನಿಷೇಧಿಸಿತು. ನಂತರ, ಒತ್ತಡಕ್ಕೆ ಮಣಿದ ಸರಕಾರವು ಈ ನಿಟ್ಟಿನಲ್ಲಿ ಕೆಲವು ಸಡಿಲಿಕೆ ಮಾಡಿತ್ತು. ಅದರಲ್ಲಿ ಅಡಿಕೆ, ಕಾಳುಮೆಣಸು ಸೇರಿದಂತೆ ವಿವಿಧ ಕೃಷಿ ವಸ್ತುಗಳು ಇದ್ದವು. ಇತ್ತೀಚಿನವರೆಗೂ ಹೀಗೆ ಆಮದಾದ ಸರಕುಗಳನ್ನು ಮೂರನೇ ದೇಶಗಳಿಂದ ಆಮದು ಮಾಡಿಕೊಂಡು ಗಮನಾರ್ಹ ಪ್ರಮಾಣದಲ್ಲಿ ಈ ಆಮದುಗಳನ್ನು ಭಾರತಕ್ಕೆ ಕಳ್ಳಸಾಗಣೆ ಮಾಡಿರುವುದು ಕಂಡುಬಂದಿತ್ತು.
ಈಗ ಕಾಳುಮೆಣಸು, ಖರ್ಜೂರ, ಮತ್ತು ಅಡಿಕೆ ಸೇರಿದಂತೆ ಇನ್ನಿತರ ವಸ್ತುಗಳ ಆಮದನ್ನು ನೇಪಾಳ ಸರಕಾರ ಸಂಪೂರ್ಣವಾಗಿ ನಿಷೇಧಿಸಿದ್ದು ಆಮದು ನಿಷೇಧಿತ ಪಟ್ಟಿಯಲ್ಲಿರುವ ವಸ್ತುಗಳಿಗೆ ವಿದೇಶಿ ವಿನಿಮಯ ಸೌಲಭ್ಯಗಳನ್ನು ಒದಗಿಸದಂತೆ ವಾಣಿಜ್ಯ ಇಲಾಖೆಯು ಪತ್ರವನ್ನೂ ಹೊರಡಿಸಿದೆ. ಹೀಗಾಗಿ ಸದ್ಯ ನೇಪಾಳ ಮೂಲಕ ಭಾರತಕ್ಕೆ ಅಡಿಕೆ ಬರುವ ಸಾಧ್ಯತೆಗಳು ಇನ್ನಷ್ಟು ಕಡಿಮೆಯಾಗಿದೆ.
ಈ ನಡುವೆಯೇ ಅಸ್ಸಾಂ ಗಡಿಯಲ್ಲಿ ಮತ್ತೆ ಅಡಿಕೆ ಕಳ್ಳಸಾಗಾಟವನ್ನು ಅಸ್ಸಾಂ ಗಡಿಭದ್ರತಾ ಪಡೆಯುವ ವಶಕ್ಕೆ ಪಡೆದುಕೊಂಡಿದೆ. ಮಿಜೋರಾಂನಲ್ಲಿ ನಿಯೋಜಿಸಲಾಗಿರುವ ಅಸ್ಸಾಂ ಗಡಿಭದ್ರತಾ ಸಿಬ್ಬಂದಿ ಚಂಪೈ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 13.99 ಲಕ್ಷ ಮೌಲ್ಯದ ಅಡಿಕೆ ವಶಪಡಿಸಿಕೊಂಡಿದ್ದಾರೆ. ಇನ್ನೊಂದು ಪ್ರಕರಣದಲ್ಲಿ 55 ಚೀಲಗಳಷ್ಟು ಅಡಿಕೆಯನ್ನು ಚಂಪಾಯಿಯ ಪ್ರದೇಶದಿಂದ ವಶಪಡಿಸಿಕೊಂಡಿದೆ.
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…