Advertisement
ವಿಶೇಷ ವರದಿಗಳು

ಅಡಿಕೆ ಮಾರುಕಟ್ಟೆ | ಅಡಿಕೆ ಆಮದು ನಿಷೇಧ ಮಾಡಿದ ನೇಪಾಳ | ಅಡಿಕೆ ಕಳ್ಳ ಸಾಗಾಣಿಕೆಗೆ ಇನ್ನೊಂದು ತಡೆ | ಅಡಿಕೆ ಮಾರುಕಟ್ಟೆ ಮತ್ತೆ ಚೇತರಿಕೆ ಸಾಧ್ಯತೆ ? |

Share

ಅಡಿಕೆಯನ್ನು ನೇಪಾಳ ಸರಕಾರ ಆಮದು ನಿಷೇಧಗಳ ಪಟ್ಟಿಯಲ್ಲಿ ಸೇರಿಸಿದೆ. ಅಡಿಕೆ ಆಮದಿಗಾಗಿ ಯಾವುದೇ ವಿದೇಶಿ ವಿನಿಮಯ ಸೌಲಭ್ಯಗಳನ್ನು ಒದಗಿಸುವುದಿಲ್ಲ ಎಂದೂ ನೇಪಾಳ ಸರಕಾರ ಹೇಳಿದೆ. ಇದರಿಂದ ಭಾರತದೊಳಕ್ಕೆ ನೇಪಾಳ ಮೂಲಕವಾಗಿ ಆಗಮಿಸುತ್ತಿದ್ದ ಅಡಿಕೆಗೆ ತಡೆಯಾಗಬಹುದಾಗಿದೆ. ಹೀಗಾಗಿ ಮತ್ತೆ ಅಡಿಕೆ ಮಾರುಕಟ್ಟೆಯಲ್ಲಿ ಸಂಚಲನ ಉಂಟಾಗಿದೆ.

Advertisement

ಕಳೆದ ಮಾರ್ಚಲ್ಲಿ,  ನೇಪಾಳ  ಸರಕಾರವು  ಕೃಷಿ ಉತ್ಪನ್ನಗಳ ಆಮದಿನ ಮೇಲಿನ ನಿರ್ಬಂಧವನ್ನು ಷರತ್ತುಬದ್ಧವಾಗಿ ಸಡಿಲಿಸಿತು. ಇದರಿಂದಾಗಿ ವ್ಯಾಪಾರಿಗಳು ತಲಾ 15,000 ಟನ್‌ಗಳಷ್ಟು ಅಡಿಕೆ ಮತ್ತು ಕಾಳುಮೆಣಸು ಮತ್ತು 5,000 ಟನ್‌ಗಳಷ್ಟು ಖರ್ಜೂರವನ್ನು  ಕೈಗಾರಿಕಾ ಉದ್ದೇಶಗಳಿಗಾಗಿ ಬಳಸಲು ಆಮದು ಮಾಡಿಕೊಳ್ಳಬಹುದಾಗಿತ್ತು. ಹೀಗೆ ನೇಪಾಳಕ್ಕೆ ಬಂದ ಅಡಿಕೆಯ ಬಹುಪಾಲು ಕಳ್ಳಸಾಗಾಣಿಯ ಮೂಲಕ ಭಾರತಕ್ಕೆ ಸಾಗಾಟ ಮಾಡಿರುವುದನ್ನು ನೇಪಾಳ ಪತ್ತೆ ಮಾಡಿದೆ.

ಕೊರೋನಾ ಕಾರಣದಿಂದ  2019-20 ರ ಮಾರ್ಚ್ 24 ರಂದು ಲಾಕ್‌ಡೌನ್ ಹೇರಿದ ನಂತರ ವಿದೇಶಿ ಕರೆನ್ಸಿ ಕುಸಿತವನ್ನು ತಡೆಗಟ್ಟಲು, ಐಷಾರಾಮಿ ವಾಹನಗಳ ಜೊತೆಗೆ ದುಬಾರಿ ಖಾದ್ಯಗಳ ಆಮದನ್ನು ಸರಕಾರ ಸಂಪೂರ್ಣವಾಗಿ ನಿಷೇಧಿಸಿತು. ನಂತರ,  ಒತ್ತಡಕ್ಕೆ ಮಣಿದ ಸರಕಾರವು ಈ ನಿಟ್ಟಿನಲ್ಲಿ ಕೆಲವು ಸಡಿಲಿಕೆ ಮಾಡಿತ್ತು. ಅದರಲ್ಲಿ ಅಡಿಕೆ, ಕಾಳುಮೆಣಸು ಸೇರಿದಂತೆ ವಿವಿಧ ಕೃಷಿ ವಸ್ತುಗಳು ಇದ್ದವು. ಇತ್ತೀಚಿನವರೆಗೂ ಹೀಗೆ ಆಮದಾದ  ಸರಕುಗಳನ್ನು ಮೂರನೇ ದೇಶಗಳಿಂದ ಆಮದು ಮಾಡಿಕೊಂಡು ಗಮನಾರ್ಹ ಪ್ರಮಾಣದಲ್ಲಿ ಈ ಆಮದುಗಳನ್ನು ಭಾರತಕ್ಕೆ ಕಳ್ಳಸಾಗಣೆ ಮಾಡಿರುವುದು ಕಂಡುಬಂದಿತ್ತು.

ಈಗ ಕಾಳುಮೆಣಸು, ಖರ್ಜೂರ, ಮತ್ತು ಅಡಿಕೆ ಸೇರಿದಂತೆ ಇನ್ನಿತರ ವಸ್ತುಗಳ ಆಮದನ್ನು ನೇಪಾಳ ಸರಕಾರ ಸಂಪೂರ್ಣವಾಗಿ ನಿಷೇಧಿಸಿದ್ದು ಆಮದು ನಿಷೇಧಿತ ಪಟ್ಟಿಯಲ್ಲಿರುವ ವಸ್ತುಗಳಿಗೆ  ವಿದೇಶಿ ವಿನಿಮಯ ಸೌಲಭ್ಯಗಳನ್ನು ಒದಗಿಸದಂತೆ ವಾಣಿಜ್ಯ ಇಲಾಖೆಯು ಪತ್ರವನ್ನೂ ಹೊರಡಿಸಿದೆ. ಹೀಗಾಗಿ ಸದ್ಯ ನೇಪಾಳ ಮೂಲಕ ಭಾರತಕ್ಕೆ ಅಡಿಕೆ ಬರುವ ಸಾಧ್ಯತೆಗಳು ಇನ್ನಷ್ಟು ಕಡಿಮೆಯಾಗಿದೆ.

ಈ ನಡುವೆಯೇ ಅಸ್ಸಾಂ ಗಡಿಯಲ್ಲಿ  ಮತ್ತೆ ಅಡಿಕೆ ಕಳ್ಳಸಾಗಾಟವನ್ನು ಅಸ್ಸಾಂ ಗಡಿಭದ್ರತಾ ಪಡೆಯುವ ವಶಕ್ಕೆ ಪಡೆದುಕೊಂಡಿದೆ. ಮಿಜೋರಾಂನಲ್ಲಿ ನಿಯೋಜಿಸಲಾಗಿರುವ ಅಸ್ಸಾಂ ಗಡಿಭದ್ರತಾ ಸಿಬ್ಬಂದಿ ಚಂಪೈ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ  13.99 ಲಕ್ಷ ಮೌಲ್ಯದ ಅಡಿಕೆ  ವಶಪಡಿಸಿಕೊಂಡಿದ್ದಾರೆ. ಇನ್ನೊಂದು ಪ್ರಕರಣದಲ್ಲಿ 55 ಚೀಲಗಳಷ್ಟು ಅಡಿಕೆಯನ್ನು ಚಂಪಾಯಿಯ ಪ್ರದೇಶದಿಂದ ವಶಪಡಿಸಿಕೊಂಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

6 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

6 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

22 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

22 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

23 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

23 hours ago