Advertisement
ವಿಶೇಷ ವರದಿಗಳು

ಅಡಿಕೆ ಮಾರುಕಟ್ಟೆ | ಅಡಿಕೆ ಆಮದು ನಿಷೇಧ ಮಾಡಿದ ನೇಪಾಳ | ಅಡಿಕೆ ಕಳ್ಳ ಸಾಗಾಣಿಕೆಗೆ ಇನ್ನೊಂದು ತಡೆ | ಅಡಿಕೆ ಮಾರುಕಟ್ಟೆ ಮತ್ತೆ ಚೇತರಿಕೆ ಸಾಧ್ಯತೆ ? |

Share

ಅಡಿಕೆಯನ್ನು ನೇಪಾಳ ಸರಕಾರ ಆಮದು ನಿಷೇಧಗಳ ಪಟ್ಟಿಯಲ್ಲಿ ಸೇರಿಸಿದೆ. ಅಡಿಕೆ ಆಮದಿಗಾಗಿ ಯಾವುದೇ ವಿದೇಶಿ ವಿನಿಮಯ ಸೌಲಭ್ಯಗಳನ್ನು ಒದಗಿಸುವುದಿಲ್ಲ ಎಂದೂ ನೇಪಾಳ ಸರಕಾರ ಹೇಳಿದೆ. ಇದರಿಂದ ಭಾರತದೊಳಕ್ಕೆ ನೇಪಾಳ ಮೂಲಕವಾಗಿ ಆಗಮಿಸುತ್ತಿದ್ದ ಅಡಿಕೆಗೆ ತಡೆಯಾಗಬಹುದಾಗಿದೆ. ಹೀಗಾಗಿ ಮತ್ತೆ ಅಡಿಕೆ ಮಾರುಕಟ್ಟೆಯಲ್ಲಿ ಸಂಚಲನ ಉಂಟಾಗಿದೆ.

Advertisement
Advertisement

ಕಳೆದ ಮಾರ್ಚಲ್ಲಿ,  ನೇಪಾಳ  ಸರಕಾರವು  ಕೃಷಿ ಉತ್ಪನ್ನಗಳ ಆಮದಿನ ಮೇಲಿನ ನಿರ್ಬಂಧವನ್ನು ಷರತ್ತುಬದ್ಧವಾಗಿ ಸಡಿಲಿಸಿತು. ಇದರಿಂದಾಗಿ ವ್ಯಾಪಾರಿಗಳು ತಲಾ 15,000 ಟನ್‌ಗಳಷ್ಟು ಅಡಿಕೆ ಮತ್ತು ಕಾಳುಮೆಣಸು ಮತ್ತು 5,000 ಟನ್‌ಗಳಷ್ಟು ಖರ್ಜೂರವನ್ನು  ಕೈಗಾರಿಕಾ ಉದ್ದೇಶಗಳಿಗಾಗಿ ಬಳಸಲು ಆಮದು ಮಾಡಿಕೊಳ್ಳಬಹುದಾಗಿತ್ತು. ಹೀಗೆ ನೇಪಾಳಕ್ಕೆ ಬಂದ ಅಡಿಕೆಯ ಬಹುಪಾಲು ಕಳ್ಳಸಾಗಾಣಿಯ ಮೂಲಕ ಭಾರತಕ್ಕೆ ಸಾಗಾಟ ಮಾಡಿರುವುದನ್ನು ನೇಪಾಳ ಪತ್ತೆ ಮಾಡಿದೆ.

Advertisement

ಕೊರೋನಾ ಕಾರಣದಿಂದ  2019-20 ರ ಮಾರ್ಚ್ 24 ರಂದು ಲಾಕ್‌ಡೌನ್ ಹೇರಿದ ನಂತರ ವಿದೇಶಿ ಕರೆನ್ಸಿ ಕುಸಿತವನ್ನು ತಡೆಗಟ್ಟಲು, ಐಷಾರಾಮಿ ವಾಹನಗಳ ಜೊತೆಗೆ ದುಬಾರಿ ಖಾದ್ಯಗಳ ಆಮದನ್ನು ಸರಕಾರ ಸಂಪೂರ್ಣವಾಗಿ ನಿಷೇಧಿಸಿತು. ನಂತರ,  ಒತ್ತಡಕ್ಕೆ ಮಣಿದ ಸರಕಾರವು ಈ ನಿಟ್ಟಿನಲ್ಲಿ ಕೆಲವು ಸಡಿಲಿಕೆ ಮಾಡಿತ್ತು. ಅದರಲ್ಲಿ ಅಡಿಕೆ, ಕಾಳುಮೆಣಸು ಸೇರಿದಂತೆ ವಿವಿಧ ಕೃಷಿ ವಸ್ತುಗಳು ಇದ್ದವು. ಇತ್ತೀಚಿನವರೆಗೂ ಹೀಗೆ ಆಮದಾದ  ಸರಕುಗಳನ್ನು ಮೂರನೇ ದೇಶಗಳಿಂದ ಆಮದು ಮಾಡಿಕೊಂಡು ಗಮನಾರ್ಹ ಪ್ರಮಾಣದಲ್ಲಿ ಈ ಆಮದುಗಳನ್ನು ಭಾರತಕ್ಕೆ ಕಳ್ಳಸಾಗಣೆ ಮಾಡಿರುವುದು ಕಂಡುಬಂದಿತ್ತು.

ಈಗ ಕಾಳುಮೆಣಸು, ಖರ್ಜೂರ, ಮತ್ತು ಅಡಿಕೆ ಸೇರಿದಂತೆ ಇನ್ನಿತರ ವಸ್ತುಗಳ ಆಮದನ್ನು ನೇಪಾಳ ಸರಕಾರ ಸಂಪೂರ್ಣವಾಗಿ ನಿಷೇಧಿಸಿದ್ದು ಆಮದು ನಿಷೇಧಿತ ಪಟ್ಟಿಯಲ್ಲಿರುವ ವಸ್ತುಗಳಿಗೆ  ವಿದೇಶಿ ವಿನಿಮಯ ಸೌಲಭ್ಯಗಳನ್ನು ಒದಗಿಸದಂತೆ ವಾಣಿಜ್ಯ ಇಲಾಖೆಯು ಪತ್ರವನ್ನೂ ಹೊರಡಿಸಿದೆ. ಹೀಗಾಗಿ ಸದ್ಯ ನೇಪಾಳ ಮೂಲಕ ಭಾರತಕ್ಕೆ ಅಡಿಕೆ ಬರುವ ಸಾಧ್ಯತೆಗಳು ಇನ್ನಷ್ಟು ಕಡಿಮೆಯಾಗಿದೆ.

Advertisement

ಈ ನಡುವೆಯೇ ಅಸ್ಸಾಂ ಗಡಿಯಲ್ಲಿ  ಮತ್ತೆ ಅಡಿಕೆ ಕಳ್ಳಸಾಗಾಟವನ್ನು ಅಸ್ಸಾಂ ಗಡಿಭದ್ರತಾ ಪಡೆಯುವ ವಶಕ್ಕೆ ಪಡೆದುಕೊಂಡಿದೆ. ಮಿಜೋರಾಂನಲ್ಲಿ ನಿಯೋಜಿಸಲಾಗಿರುವ ಅಸ್ಸಾಂ ಗಡಿಭದ್ರತಾ ಸಿಬ್ಬಂದಿ ಚಂಪೈ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ  13.99 ಲಕ್ಷ ಮೌಲ್ಯದ ಅಡಿಕೆ  ವಶಪಡಿಸಿಕೊಂಡಿದ್ದಾರೆ. ಇನ್ನೊಂದು ಪ್ರಕರಣದಲ್ಲಿ 55 ಚೀಲಗಳಷ್ಟು ಅಡಿಕೆಯನ್ನು ಚಂಪಾಯಿಯ ಪ್ರದೇಶದಿಂದ ವಶಪಡಿಸಿಕೊಂಡಿದೆ.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯೋಚಿಸಿ… ಚಿಂತನೆ ನಡೆಸಿ… ಮತದಾನ ಮಾಡಬೇಕು… | ಏಕೆ ಗೊತ್ತಾ….?

ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…

2 hours ago

ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ : ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…

3 hours ago

ನಿಮಗಿದು ಗೊತ್ತೇ? : ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ… : ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ!

ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…

5 hours ago

ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ : ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ

ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…

5 hours ago

ರೈತರ ಪಾಲಿಗೆ ನೆರವಾದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ : 17ನೇ ಕಂತಿನ ಹಣ ರೈತರ ಖಾತೆಗೆ ಯಾವಗ ಬರುತ್ತೆ..?

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌(PM Kisan) ಯೋಜನೆ ಆರಂಭವಾದಗಿಂದಲೂ ರೈತರ(Farmer) ಖಾತೆಗೆ ನೇರವಾಗಿ…

6 hours ago