Advertisement
ವಿಶೇಷ ವರದಿಗಳು

ಅಡಿಕೆ ಮಾರುಕಟ್ಟೆ | ಅಡಿಕೆ ಆಮದು ನಿಷೇಧ ಮಾಡಿದ ನೇಪಾಳ | ಅಡಿಕೆ ಕಳ್ಳ ಸಾಗಾಣಿಕೆಗೆ ಇನ್ನೊಂದು ತಡೆ | ಅಡಿಕೆ ಮಾರುಕಟ್ಟೆ ಮತ್ತೆ ಚೇತರಿಕೆ ಸಾಧ್ಯತೆ ? |

Share

ಅಡಿಕೆಯನ್ನು ನೇಪಾಳ ಸರಕಾರ ಆಮದು ನಿಷೇಧಗಳ ಪಟ್ಟಿಯಲ್ಲಿ ಸೇರಿಸಿದೆ. ಅಡಿಕೆ ಆಮದಿಗಾಗಿ ಯಾವುದೇ ವಿದೇಶಿ ವಿನಿಮಯ ಸೌಲಭ್ಯಗಳನ್ನು ಒದಗಿಸುವುದಿಲ್ಲ ಎಂದೂ ನೇಪಾಳ ಸರಕಾರ ಹೇಳಿದೆ. ಇದರಿಂದ ಭಾರತದೊಳಕ್ಕೆ ನೇಪಾಳ ಮೂಲಕವಾಗಿ ಆಗಮಿಸುತ್ತಿದ್ದ ಅಡಿಕೆಗೆ ತಡೆಯಾಗಬಹುದಾಗಿದೆ. ಹೀಗಾಗಿ ಮತ್ತೆ ಅಡಿಕೆ ಮಾರುಕಟ್ಟೆಯಲ್ಲಿ ಸಂಚಲನ ಉಂಟಾಗಿದೆ.

ಕಳೆದ ಮಾರ್ಚಲ್ಲಿ,  ನೇಪಾಳ  ಸರಕಾರವು  ಕೃಷಿ ಉತ್ಪನ್ನಗಳ ಆಮದಿನ ಮೇಲಿನ ನಿರ್ಬಂಧವನ್ನು ಷರತ್ತುಬದ್ಧವಾಗಿ ಸಡಿಲಿಸಿತು. ಇದರಿಂದಾಗಿ ವ್ಯಾಪಾರಿಗಳು ತಲಾ 15,000 ಟನ್‌ಗಳಷ್ಟು ಅಡಿಕೆ ಮತ್ತು ಕಾಳುಮೆಣಸು ಮತ್ತು 5,000 ಟನ್‌ಗಳಷ್ಟು ಖರ್ಜೂರವನ್ನು  ಕೈಗಾರಿಕಾ ಉದ್ದೇಶಗಳಿಗಾಗಿ ಬಳಸಲು ಆಮದು ಮಾಡಿಕೊಳ್ಳಬಹುದಾಗಿತ್ತು. ಹೀಗೆ ನೇಪಾಳಕ್ಕೆ ಬಂದ ಅಡಿಕೆಯ ಬಹುಪಾಲು ಕಳ್ಳಸಾಗಾಣಿಯ ಮೂಲಕ ಭಾರತಕ್ಕೆ ಸಾಗಾಟ ಮಾಡಿರುವುದನ್ನು ನೇಪಾಳ ಪತ್ತೆ ಮಾಡಿದೆ.

ಕೊರೋನಾ ಕಾರಣದಿಂದ  2019-20 ರ ಮಾರ್ಚ್ 24 ರಂದು ಲಾಕ್‌ಡೌನ್ ಹೇರಿದ ನಂತರ ವಿದೇಶಿ ಕರೆನ್ಸಿ ಕುಸಿತವನ್ನು ತಡೆಗಟ್ಟಲು, ಐಷಾರಾಮಿ ವಾಹನಗಳ ಜೊತೆಗೆ ದುಬಾರಿ ಖಾದ್ಯಗಳ ಆಮದನ್ನು ಸರಕಾರ ಸಂಪೂರ್ಣವಾಗಿ ನಿಷೇಧಿಸಿತು. ನಂತರ,  ಒತ್ತಡಕ್ಕೆ ಮಣಿದ ಸರಕಾರವು ಈ ನಿಟ್ಟಿನಲ್ಲಿ ಕೆಲವು ಸಡಿಲಿಕೆ ಮಾಡಿತ್ತು. ಅದರಲ್ಲಿ ಅಡಿಕೆ, ಕಾಳುಮೆಣಸು ಸೇರಿದಂತೆ ವಿವಿಧ ಕೃಷಿ ವಸ್ತುಗಳು ಇದ್ದವು. ಇತ್ತೀಚಿನವರೆಗೂ ಹೀಗೆ ಆಮದಾದ  ಸರಕುಗಳನ್ನು ಮೂರನೇ ದೇಶಗಳಿಂದ ಆಮದು ಮಾಡಿಕೊಂಡು ಗಮನಾರ್ಹ ಪ್ರಮಾಣದಲ್ಲಿ ಈ ಆಮದುಗಳನ್ನು ಭಾರತಕ್ಕೆ ಕಳ್ಳಸಾಗಣೆ ಮಾಡಿರುವುದು ಕಂಡುಬಂದಿತ್ತು.

ಈಗ ಕಾಳುಮೆಣಸು, ಖರ್ಜೂರ, ಮತ್ತು ಅಡಿಕೆ ಸೇರಿದಂತೆ ಇನ್ನಿತರ ವಸ್ತುಗಳ ಆಮದನ್ನು ನೇಪಾಳ ಸರಕಾರ ಸಂಪೂರ್ಣವಾಗಿ ನಿಷೇಧಿಸಿದ್ದು ಆಮದು ನಿಷೇಧಿತ ಪಟ್ಟಿಯಲ್ಲಿರುವ ವಸ್ತುಗಳಿಗೆ  ವಿದೇಶಿ ವಿನಿಮಯ ಸೌಲಭ್ಯಗಳನ್ನು ಒದಗಿಸದಂತೆ ವಾಣಿಜ್ಯ ಇಲಾಖೆಯು ಪತ್ರವನ್ನೂ ಹೊರಡಿಸಿದೆ. ಹೀಗಾಗಿ ಸದ್ಯ ನೇಪಾಳ ಮೂಲಕ ಭಾರತಕ್ಕೆ ಅಡಿಕೆ ಬರುವ ಸಾಧ್ಯತೆಗಳು ಇನ್ನಷ್ಟು ಕಡಿಮೆಯಾಗಿದೆ.

ಈ ನಡುವೆಯೇ ಅಸ್ಸಾಂ ಗಡಿಯಲ್ಲಿ  ಮತ್ತೆ ಅಡಿಕೆ ಕಳ್ಳಸಾಗಾಟವನ್ನು ಅಸ್ಸಾಂ ಗಡಿಭದ್ರತಾ ಪಡೆಯುವ ವಶಕ್ಕೆ ಪಡೆದುಕೊಂಡಿದೆ. ಮಿಜೋರಾಂನಲ್ಲಿ ನಿಯೋಜಿಸಲಾಗಿರುವ ಅಸ್ಸಾಂ ಗಡಿಭದ್ರತಾ ಸಿಬ್ಬಂದಿ ಚಂಪೈ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ  13.99 ಲಕ್ಷ ಮೌಲ್ಯದ ಅಡಿಕೆ  ವಶಪಡಿಸಿಕೊಂಡಿದ್ದಾರೆ. ಇನ್ನೊಂದು ಪ್ರಕರಣದಲ್ಲಿ 55 ಚೀಲಗಳಷ್ಟು ಅಡಿಕೆಯನ್ನು ಚಂಪಾಯಿಯ ಪ್ರದೇಶದಿಂದ ವಶಪಡಿಸಿಕೊಂಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

12 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

20 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

1 day ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago