Advertisement
ಸುದ್ದಿಗಳು

ಅಡಿಕೆಗೆ ಬೇಡಿಕೆ ಹಿನ್ನಡೆ ತಾತ್ಕಾಲಿಕ | ಸದ್ಯದಲ್ಲೇ ಮಾರುಕಟ್ಟೆ ಚೇತರಿಕೆ ನಿರೀಕ್ಷೆ | ರೈತರಿಗೆ ಕ್ಯಾಂಪ್ಕೋ ಭರವಸೆ |

Share
News Summary
ಅಡಿಕೆ ಆಮದು ಆತಂಕ ಅನಗತ್ಯ | ಮಾರುಕಟ್ಟೆ ಸದ್ಯದಲ್ಲೇ ಚೇತರಿಕೆ ಕಾಣಲಿದೆ | ಅಪಪ್ರಚಾರಗಳಿಗೆ ಕಿವಿಗೊಡಬೇಡಿ | ಅಗತ್ಯಕ್ಕೆ ತಕ್ಕಂತೆ ಅಡಿಕೆ ಮಾರಾಟ ಮಾಡಿ – ಕ್ಯಾಂಪ್ಕೋ ಸಲಹೆ|

ಅಡಿಕೆ ಆಮದು ಆತಂಕ  ತಾತ್ಕಾಲಿಕವಾಗಿದ್ದು ಯಾವುದೇ ರೈತರು ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ  ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.

ಅಡಿಕೆಗೆ ಬೇಡಿಕೆಯಲ್ಲಿನ ಹಿನ್ನಡೆ ತಾತ್ಕಾಲಿಕವಾಗಿದ್ದು , ರೈತರು ಆತಂಕಪಡಬೇಕಾಗಿಲ್ಲ. ಪ್ರತೀವರ್ಷ ವಿದೇಶದಿಂದ ಅಡಿಕೆ ಆಮದು ಆಗುತ್ತಿದ್ದು, ಈ ಬಾರಿಯೂ ಅಷ್ಟೇ ಪ್ರಮಾಣದ ಅಡಿಕೆ ಇದುವರೆಗೆ  ಆಮದು ಆಗಿರುತ್ತದೆ. ಇದರಿಂದ ರೈತರು ಆತಂಕ ಪಡಬೇಕಾಗಿಲ್ಲ. ಆದರೆ ಅಡಿಕೆ ಆಮದು ತಡೆಗೆ ಕ್ಯಾಂಪ್ಕೋ ಸರ್ವರೀತಿಯಲ್ಲೂ ಪ್ರಯತ್ನಿಸುತ್ತಿದ್ದು ಕೇಂದ್ರ ಸರ್ಕಾರದ ಸಚಿವರು ಮತ್ತು ಇಲಾಖಾ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಉತ್ತರಭಾರತದಲ್ಲಿ ಅತೀ ಹೆಚ್ಚು ಉಷ್ಣತೆ ಇರುವುದರಿಂದ ಕರಾವಳಿ ಭಾಗದ ಅಡಿಕೆಯ ಬೇಡಿಕೆಗೆ ತಾತ್ಕಾಲಿಕ ಹಿನ್ನಡೆಯಾಗಿದೆ ಅಷ್ಟೇ. ಮುಂದಿನ ಕೆಲದಿನಗಳಲ್ಲಿ ಸಮಸ್ಯೆ ಪರಿಹಾರದ ನಿರೀಕ್ಷೆಯಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷರು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಕಿಶೋರ್‌ ಕುಮಾರ್‌ ಕೊಡ್ಗಿ

ಮಾರುಕಟ್ಟೆ ಸಮೀಕ್ಷೆ ಪ್ರಕಾರ, ಉತ್ತರ ಭಾರತದ ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ದಾಸ್ತಾನಿನಲ್ಲಿ ಕೊರತೆ ಇದೆ. ಮುಂದಿನ ದಿನಗಳಲ್ಲಿ ಮುಂಗಾರು ಪ್ರಾರಂಭವಾಗಿ ಉತ್ತರ ಭಾರತಲ್ಲಿ ಉಷ್ಣತೆ ಕಡಿಮೆಯಾಗಲಿದ್ದು, ಅಡಿಕೆಗೆ ಉತ್ತಮ ಬೇಡಿಕೆ ಬರುವ ಎಲ್ಲಾ ಅವಕಾಶಗಳಿರುವುದರಿಂದ ಬೇಡಿಕೆಯಲ್ಲಿ ಚೇತರಿಕೆ ಕಾಣಲಿದೆ. ಹಾಗಾಗಿ ರೈತರು ಆತಂಕಪಡುವ ಅವಶ್ಯಕತೆ ಇಲ್ಲ ಮತ್ತು ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೆ, ಅಗತ್ಯ ಖರ್ಚಿಗೆ ಬೇಕಾಗುವಷ್ಟೇ ಅಡಿಕೆ ಮಾರಾಟ ಮಾಡುವಂತೆ ಕ್ಯಾಂಪ್ಕೋ ಅಧ್ಯಕ್ಷರು ಬೆಳೆಗಾರರಿಗೆ ಸಲಹೆ ನೀಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

12 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

1 day ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

1 day ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

2 days ago

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

3 days ago