Advertisement
ಸುದ್ದಿಗಳು

ಅಡಿಕೆಗೆ ಬೇಡಿಕೆ ಹಿನ್ನಡೆ ತಾತ್ಕಾಲಿಕ | ಸದ್ಯದಲ್ಲೇ ಮಾರುಕಟ್ಟೆ ಚೇತರಿಕೆ ನಿರೀಕ್ಷೆ | ರೈತರಿಗೆ ಕ್ಯಾಂಪ್ಕೋ ಭರವಸೆ |

Share
News Summary
ಅಡಿಕೆ ಆಮದು ಆತಂಕ ಅನಗತ್ಯ | ಮಾರುಕಟ್ಟೆ ಸದ್ಯದಲ್ಲೇ ಚೇತರಿಕೆ ಕಾಣಲಿದೆ | ಅಪಪ್ರಚಾರಗಳಿಗೆ ಕಿವಿಗೊಡಬೇಡಿ | ಅಗತ್ಯಕ್ಕೆ ತಕ್ಕಂತೆ ಅಡಿಕೆ ಮಾರಾಟ ಮಾಡಿ – ಕ್ಯಾಂಪ್ಕೋ ಸಲಹೆ|

ಅಡಿಕೆ ಆಮದು ಆತಂಕ  ತಾತ್ಕಾಲಿಕವಾಗಿದ್ದು ಯಾವುದೇ ರೈತರು ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ  ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.

ಅಡಿಕೆಗೆ ಬೇಡಿಕೆಯಲ್ಲಿನ ಹಿನ್ನಡೆ ತಾತ್ಕಾಲಿಕವಾಗಿದ್ದು , ರೈತರು ಆತಂಕಪಡಬೇಕಾಗಿಲ್ಲ. ಪ್ರತೀವರ್ಷ ವಿದೇಶದಿಂದ ಅಡಿಕೆ ಆಮದು ಆಗುತ್ತಿದ್ದು, ಈ ಬಾರಿಯೂ ಅಷ್ಟೇ ಪ್ರಮಾಣದ ಅಡಿಕೆ ಇದುವರೆಗೆ  ಆಮದು ಆಗಿರುತ್ತದೆ. ಇದರಿಂದ ರೈತರು ಆತಂಕ ಪಡಬೇಕಾಗಿಲ್ಲ. ಆದರೆ ಅಡಿಕೆ ಆಮದು ತಡೆಗೆ ಕ್ಯಾಂಪ್ಕೋ ಸರ್ವರೀತಿಯಲ್ಲೂ ಪ್ರಯತ್ನಿಸುತ್ತಿದ್ದು ಕೇಂದ್ರ ಸರ್ಕಾರದ ಸಚಿವರು ಮತ್ತು ಇಲಾಖಾ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಉತ್ತರಭಾರತದಲ್ಲಿ ಅತೀ ಹೆಚ್ಚು ಉಷ್ಣತೆ ಇರುವುದರಿಂದ ಕರಾವಳಿ ಭಾಗದ ಅಡಿಕೆಯ ಬೇಡಿಕೆಗೆ ತಾತ್ಕಾಲಿಕ ಹಿನ್ನಡೆಯಾಗಿದೆ ಅಷ್ಟೇ. ಮುಂದಿನ ಕೆಲದಿನಗಳಲ್ಲಿ ಸಮಸ್ಯೆ ಪರಿಹಾರದ ನಿರೀಕ್ಷೆಯಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷರು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಕಿಶೋರ್‌ ಕುಮಾರ್‌ ಕೊಡ್ಗಿ

ಮಾರುಕಟ್ಟೆ ಸಮೀಕ್ಷೆ ಪ್ರಕಾರ, ಉತ್ತರ ಭಾರತದ ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ದಾಸ್ತಾನಿನಲ್ಲಿ ಕೊರತೆ ಇದೆ. ಮುಂದಿನ ದಿನಗಳಲ್ಲಿ ಮುಂಗಾರು ಪ್ರಾರಂಭವಾಗಿ ಉತ್ತರ ಭಾರತಲ್ಲಿ ಉಷ್ಣತೆ ಕಡಿಮೆಯಾಗಲಿದ್ದು, ಅಡಿಕೆಗೆ ಉತ್ತಮ ಬೇಡಿಕೆ ಬರುವ ಎಲ್ಲಾ ಅವಕಾಶಗಳಿರುವುದರಿಂದ ಬೇಡಿಕೆಯಲ್ಲಿ ಚೇತರಿಕೆ ಕಾಣಲಿದೆ. ಹಾಗಾಗಿ ರೈತರು ಆತಂಕಪಡುವ ಅವಶ್ಯಕತೆ ಇಲ್ಲ ಮತ್ತು ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೆ, ಅಗತ್ಯ ಖರ್ಚಿಗೆ ಬೇಕಾಗುವಷ್ಟೇ ಅಡಿಕೆ ಮಾರಾಟ ಮಾಡುವಂತೆ ಕ್ಯಾಂಪ್ಕೋ ಅಧ್ಯಕ್ಷರು ಬೆಳೆಗಾರರಿಗೆ ಸಲಹೆ ನೀಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

7 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

11 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago