ರಾಜ್ಯದಲ್ಲಿ ಅಡಿಕೆ ಧಾರಣೆ ಏರಿಕೆ ಕಂಡಿದೆ. ಕಳೆದ ಕೆಲವು ದಿನಗಳಿಂದ ಏರಿಳಿಕೆಯಲ್ಲಿದ್ದ ಅಡಿಕೆ ಮಾರುಕಟ್ಟೆ ಇದೀಗ ಏರಿಕೆಯ ಹಾದಿಯಲ್ಲಿ ಸಾಗಿದೆ.ಮಂಗಳೂರು ಚಾಲಿ ಅಡಿಕೆ ಸೇರಿದಂತೆ ಕೆಂಪಡಿಕೆ ಧಾರಣೆಯಲ್ಲೂ ಏರಿಕೆ ಕಂಡಿದೆ.
ಕಳೆದ ಕೆಲವು ದಿನಗಳಿಂದ ಕುಸಿತದ ಹಾದಿಯಲ್ಲಿದ್ದ ಮಂಗಳೂರು ಚಾಲಿ ಅಡಿಕೆ ಈಗ 352-355 ರೂಪಾಯಿಗೆ ಜಿಗಿತವಾಗಿದೆ. ಇದೇ ವೇಳೆ ಹಳೆ ಚಾಲಿ ಅಡಿಕೆ ಧಾರಣೆ 420-428 ರೂಪಾಯಿಗೆ ಏರಿಕೆ ಕಂಡಿದೆ. ಅಂದರೆ ವಾರದಲ್ಲಿ ಸುಮಾರು 10 ರೂಪಾಯಿ ಧಾರಣೆಯಲ್ಲಿ ಏರಿಕೆಯಾಗಿದೆ. ಕ್ಯಾಂಪ್ಕೋ ಕೂಡ ಧಾರಣೆ ಏರಿಕೆ ಮಾಡಿದೆ.
ಇನ್ನು ಕೆಂಪಡಿಕೆ ಧಾರಣೆ ಕೂಡಾ ಏರಿಕೆಯಾಗಿದೆ. ಯಲ್ಲಾಪುರದಲ್ಲಿ ರಾಶಿ ಅಡಿಕೆ 54 ಸಾವಿರ ರೂಪಾಯಿ ದಾಟಿದೆ. ತುಮಕೂರಿನಲ್ಲಿ ಅಡಿಕೆ ಧಾರಣೆ 47,200 ರೂಪಾಯಿ ಆಗಿದೆ. ಉಳಿದಂತೆ ಎಲ್ಲೆಡೆಯೂ ಸದ್ಯ ಏರಿಕೆಯ ಹಾದಿಯಲ್ಲಿದೆ. ಸದ್ಯ ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಚುನಾವಣೆಗೂ ಮುನ್ನ ಈ ಬಾರಿ ಅಡಿಕೆ ದಾಸ್ತಾನು ನಡೆಯುವ ಸಾಧ್ಯತೆ ಇದೆ. ಹೀಗಾಗಿ ಅಡಿಕೆ ಬೇಡಿಕೆ ಹೆಚ್ಚಾಗುತ್ತಿದೆ. ಈ ನಡುವೆ ಕಳೆದ ಬಾರಿಯು ಹವಾಮಾನ ವೈಪರೀತ್ಯದ ಕಾರಣದಿಂದ ಅಡಿಕೆ ಇಳುವರಿ ಕೂಡಾ ಕಡಿಮೆಯಾಗಿರುವುದಿಂದ ಅಡಿಕೆ ಮಾರುಕಟ್ಟೆಗೆ ಬರುವ ಪ್ರಮಾಣವೂ ಕಡಿಮೆಯಾಗಿದೆ.
Arecanut Rate has increased in the state. The Arecanut market, which was in down treand for the past few days, has now gone on the path of increase. Mangalore, Puttur also saw an increase in the Market.
ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…
ಅನೇಕ ವರ್ಷಗಳ ಬೇಡಿಕೆ-ಹೋರಟದ ಬಳಿಕ ಬೃಹತ್ ಸೇತುವೆಯೊಂದು ನಿರ್ಮಾಣವಾಗಿದೆ. ಅಂಬಾರಗೂಡ್ಲು-ಕಳಸವಳ್ಳಿ ಸೇತುವೆಯ ಹೋರಾಟದ…
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ…
ಈ ವರ್ಷ ವಿಶೇಷವಾಗಿ ಗಮನ ಸೆಳೆದ ಕ್ಷೇತ್ರ ಕೊಟ್ಟಿಯೂರ್ ಅಥವಾ ತೃಚ್ಚೇರುಮನ ಕ್ಷೇತ್ರ…
ತುಂಗಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನಲ್ಲಿ ಗಣನೀಯ ಏರಿಕೆಯಾಗಿದ್ದು, ಪ್ರಸಕ್ತ ಜಲಾಶಯದಲ್ಲಿ 77.144…
ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ವಿವಿಧ ಕಲಾವಿದರ ಚಿತ್ರಕಲಾ ಪ್ರದರ್ಶನವನ್ನು ಹಮ್ಮಿಕೊಳ್ಳಾಗಿತ್ತು. ವಿವಿಧ ಚಿತ್ರಕಲಾವಿದರ…