Advertisement
MIRROR FOCUS

Arecanut Market | ಅಡಿಕೆ ಧಾರಣೆ ದಿಢೀರ್‌ ಏರಿಕೆ | ಏನಿದು ಧಾರಣೆ ಏರಿಕೆಯ ಗುಟ್ಟು…?

Share

ರಾಜ್ಯದಲ್ಲಿ ಅಡಿಕೆ ಧಾರಣೆ ಏರಿಕೆ ಕಂಡಿದೆ. ಕಳೆದ ಕೆಲವು ದಿನಗಳಿಂದ ಏರಿಳಿಕೆಯಲ್ಲಿದ್ದ ಅಡಿಕೆ ಮಾರುಕಟ್ಟೆ ಇದೀಗ ಏರಿಕೆಯ ಹಾದಿಯಲ್ಲಿ ಸಾಗಿದೆ.ಮಂಗಳೂರು ಚಾಲಿ ಅಡಿಕೆ ಸೇರಿದಂತೆ ಕೆಂಪಡಿಕೆ ಧಾರಣೆಯಲ್ಲೂ ಏರಿಕೆ ಕಂಡಿದೆ.

ಕಳೆದ ಕೆಲವು ದಿನಗಳಿಂದ ಕುಸಿತದ ಹಾದಿಯಲ್ಲಿದ್ದ ಮಂಗಳೂರು ಚಾಲಿ ಅಡಿಕೆ ಈಗ 352-355 ರೂಪಾಯಿಗೆ ಜಿಗಿತವಾಗಿದೆ. ಇದೇ ವೇಳೆ ಹಳೆ ಚಾಲಿ ಅಡಿಕೆ ಧಾರಣೆ 420-428 ರೂಪಾಯಿಗೆ ಏರಿಕೆ ಕಂಡಿದೆ. ಅಂದರೆ ವಾರದಲ್ಲಿ ಸುಮಾರು 10 ರೂಪಾಯಿ ಧಾರಣೆಯಲ್ಲಿ ಏರಿಕೆಯಾಗಿದೆ. ಕ್ಯಾಂಪ್ಕೋ ಕೂಡ ಧಾರಣೆ ಏರಿಕೆ ಮಾಡಿದೆ.

ಇನ್ನು ಕೆಂಪಡಿಕೆ ಧಾರಣೆ ಕೂಡಾ ಏರಿಕೆಯಾಗಿದೆ. ಯಲ್ಲಾಪುರದಲ್ಲಿ ರಾಶಿ ಅಡಿಕೆ 54 ಸಾವಿರ ರೂಪಾಯಿ ದಾಟಿದೆ. ತುಮಕೂರಿನಲ್ಲಿ ಅಡಿಕೆ ಧಾರಣೆ 47,200 ರೂಪಾಯಿ ಆಗಿದೆ. ಉಳಿದಂತೆ ಎಲ್ಲೆಡೆಯೂ ಸದ್ಯ ಏರಿಕೆಯ ಹಾದಿಯಲ್ಲಿದೆ. ಸದ್ಯ ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಚುನಾವಣೆಗೂ ಮುನ್ನ ಈ ಬಾರಿ ಅಡಿಕೆ ದಾಸ್ತಾನು ನಡೆಯುವ ಸಾಧ್ಯತೆ ಇದೆ. ಹೀಗಾಗಿ ಅಡಿಕೆ ಬೇಡಿಕೆ ಹೆಚ್ಚಾಗುತ್ತಿದೆ. ಈ ನಡುವೆ ಕಳೆದ ಬಾರಿಯು ಹವಾಮಾನ ವೈಪರೀತ್ಯದ ಕಾರಣದಿಂದ ಅಡಿಕೆ ಇಳುವರಿ ಕೂಡಾ ಕಡಿಮೆಯಾಗಿರುವುದಿಂದ ಅಡಿಕೆ ಮಾರುಕಟ್ಟೆಗೆ ಬರುವ ಪ್ರಮಾಣವೂ ಕಡಿಮೆಯಾಗಿದೆ.

Arecanut Rate has increased in the state. The Arecanut market, which was in down treand for the past few days, has now gone on the path of increase. Mangalore, Puttur also saw an increase in the Market. 
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

11 minutes ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

16 hours ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

1 day ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

1 day ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

1 day ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

2 days ago