Advertisement
MIRROR FOCUS

Arecanut Market | ಅಡಿಕೆ ಧಾರಣೆ ದಿಢೀರ್‌ ಏರಿಕೆ | ಏನಿದು ಧಾರಣೆ ಏರಿಕೆಯ ಗುಟ್ಟು…?

Share

ರಾಜ್ಯದಲ್ಲಿ ಅಡಿಕೆ ಧಾರಣೆ ಏರಿಕೆ ಕಂಡಿದೆ. ಕಳೆದ ಕೆಲವು ದಿನಗಳಿಂದ ಏರಿಳಿಕೆಯಲ್ಲಿದ್ದ ಅಡಿಕೆ ಮಾರುಕಟ್ಟೆ ಇದೀಗ ಏರಿಕೆಯ ಹಾದಿಯಲ್ಲಿ ಸಾಗಿದೆ.ಮಂಗಳೂರು ಚಾಲಿ ಅಡಿಕೆ ಸೇರಿದಂತೆ ಕೆಂಪಡಿಕೆ ಧಾರಣೆಯಲ್ಲೂ ಏರಿಕೆ ಕಂಡಿದೆ.

ಕಳೆದ ಕೆಲವು ದಿನಗಳಿಂದ ಕುಸಿತದ ಹಾದಿಯಲ್ಲಿದ್ದ ಮಂಗಳೂರು ಚಾಲಿ ಅಡಿಕೆ ಈಗ 352-355 ರೂಪಾಯಿಗೆ ಜಿಗಿತವಾಗಿದೆ. ಇದೇ ವೇಳೆ ಹಳೆ ಚಾಲಿ ಅಡಿಕೆ ಧಾರಣೆ 420-428 ರೂಪಾಯಿಗೆ ಏರಿಕೆ ಕಂಡಿದೆ. ಅಂದರೆ ವಾರದಲ್ಲಿ ಸುಮಾರು 10 ರೂಪಾಯಿ ಧಾರಣೆಯಲ್ಲಿ ಏರಿಕೆಯಾಗಿದೆ. ಕ್ಯಾಂಪ್ಕೋ ಕೂಡ ಧಾರಣೆ ಏರಿಕೆ ಮಾಡಿದೆ.

ಇನ್ನು ಕೆಂಪಡಿಕೆ ಧಾರಣೆ ಕೂಡಾ ಏರಿಕೆಯಾಗಿದೆ. ಯಲ್ಲಾಪುರದಲ್ಲಿ ರಾಶಿ ಅಡಿಕೆ 54 ಸಾವಿರ ರೂಪಾಯಿ ದಾಟಿದೆ. ತುಮಕೂರಿನಲ್ಲಿ ಅಡಿಕೆ ಧಾರಣೆ 47,200 ರೂಪಾಯಿ ಆಗಿದೆ. ಉಳಿದಂತೆ ಎಲ್ಲೆಡೆಯೂ ಸದ್ಯ ಏರಿಕೆಯ ಹಾದಿಯಲ್ಲಿದೆ. ಸದ್ಯ ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಚುನಾವಣೆಗೂ ಮುನ್ನ ಈ ಬಾರಿ ಅಡಿಕೆ ದಾಸ್ತಾನು ನಡೆಯುವ ಸಾಧ್ಯತೆ ಇದೆ. ಹೀಗಾಗಿ ಅಡಿಕೆ ಬೇಡಿಕೆ ಹೆಚ್ಚಾಗುತ್ತಿದೆ. ಈ ನಡುವೆ ಕಳೆದ ಬಾರಿಯು ಹವಾಮಾನ ವೈಪರೀತ್ಯದ ಕಾರಣದಿಂದ ಅಡಿಕೆ ಇಳುವರಿ ಕೂಡಾ ಕಡಿಮೆಯಾಗಿರುವುದಿಂದ ಅಡಿಕೆ ಮಾರುಕಟ್ಟೆಗೆ ಬರುವ ಪ್ರಮಾಣವೂ ಕಡಿಮೆಯಾಗಿದೆ.

Arecanut Rate has increased in the state. The Arecanut market, which was in down treand for the past few days, has now gone on the path of increase. Mangalore, Puttur also saw an increase in the Market. 
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

48 minutes ago

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

5 hours ago

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ

ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್‌ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…

6 hours ago

ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…

6 hours ago

ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ

ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…

6 hours ago

ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ

ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…

7 hours ago