ಏಷ್ಯಾ-ಪೆಸಿಫಿಕ್ ಪ್ರದೇಶದ ಬೇಡಿಕೆ ಮತ್ತು ಪಾರಂಪರಿಕ ಬಳಕೆಯ ಪರಿಣಾಮವಾಗಿ ಜಾಗತಿಕ ಅಡಿಕೆ ಮಾರುಕಟ್ಟೆ ವೇಗವಾಗಿ ವಿಸ್ತಾರವಾಗುತ್ತಿದೆ ಎಂದು Industry Today ಪ್ರಕಟಿಸಿದ ಮಾರುಕಟ್ಟೆ ಅಧ್ಯಯನ ವರದಿ ತಿಳಿಸಿದೆ.
ವರದಿಯ ಪ್ರಕಾರ, 2025ರಲ್ಲಿ ಅಡಿಕೆ ಮಾರುಕಟ್ಟೆಯ ಮೌಲ್ಯವು USD 0.96 ಬಿಲಿಯನ್ ಆಗಿದ್ದು, 2030 ರ ವೇಳೆಗೆ ಇದು USD 1.21 ಬಿಲಿಯನ್ ತಲುಪಲಿದೆ. ಈ ಅವಧಿಯಲ್ಲಿ ಮಾರುಕಟ್ಟೆ ವಾರ್ಷಿಕ ಸರಾಸರಿ 4.73% ದರದಲ್ಲಿ ಬೆಳೆಯಲಿದೆ ಎಂದು ಅಂದಾಜಿಸಲಾಗಿದೆ. ಅಡಿಕೆ ಉತ್ಪಾದನೆ ಮುಖ್ಯವಾಗಿ ಏಷ್ಯಾ-ಪೆಸಿಫಿಕ್ ಹಾಗೂ ಆಫ್ರಿಕಾ ಪ್ರದೇಶಗಳಲ್ಲಿ ಹೆಚ್ಚಾಗಿದೆ. ಭಾರತವು ಜಗತ್ತಿನಲ್ಲೇ ಅತಿದೊಡ್ಡ ಅಡಿಕೆ ಉತ್ಪಾದಕ ಮತ್ತು ಬಳಕೆದಾರ ರಾಷ್ಟ್ರವಾಗಿದ್ದು, ದಕ್ಷಿಣ ಏಷ್ಯಾದ ಹಲವು ದೇಶಗಳಲ್ಲಿ ಅಡಿಕೆ ಸಂಸ್ಕೃತಿ ಮತ್ತು ಪರಂಪರೆಯ ಭಾಗವಾಗಿದೆ ಎಂದು ವರದಿ ಹೇಳುತ್ತದೆ.
ವಾಣಿಜ್ಯ ದೃಷ್ಟಿ ಮತ್ತು ಪ್ರಾದೇಶಿಕವಾಗಿ ಅಡಿಕೆ ಬೇಡಿಕೆಯ ಕಾರಣದಿಂದ ಇತ್ತೀಚಿನ ವರ್ಷಗಳಲ್ಲಿ ಅಡಿಕೆ ಉತ್ಪಾದನೆ ಹೆಚ್ಚಾಗಿದೆ. ಏಷ್ಯಾದ ಜೊತೆಗೇ ಕೆಲವು ಪಶ್ಚಿಮ ಮಾರುಕಟ್ಟೆಗಳಲ್ಲಿಯೂ ಅಡಿಕೆ ವ್ಯಾಪಾರ ವಿಸ್ತಾರವಾಗುತ್ತಿದೆ ಎಂದು ವರದಿ ಉಲ್ಲೇಖಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ನಿಯಂತ್ರಣದ ಪರಿಣಾಮ ಮತ್ತು ಆರೋಗ್ಯ ಜಾಗೃತಿ : ಸರ್ಕಾರಿ ನಿಯಮಗಳು, ಆಮದು ಸುಂಕಗಳು ಮತ್ತು ಆರೋಗ್ಯ ಸಂಬಂಧಿತ ಸಲಹೆಗಳು ಅಡಿಕೆ ಮಾರುಕಟ್ಟೆ ಮೇಲೆ ಹೆಚ್ಚು ಪ್ರಭಾವ ಬೀರುತ್ತಿವೆ. ಅಡಿಕೆ ಸೇವನೆಯಿಂದ ಉಂಟಾಗುವ ಆರೋಗ್ಯ ಅಪಾಯಗಳ ಅರಿವು ಕೆಲವು ಪ್ರದೇಶಗಳಲ್ಲಿ ಅಡಿಕೆ ಬಳಕೆಯ ಮೇಲೆ ಪರಿಣಾಮ ಬೀರುತ್ತಿದ್ದರೂ, ಸಾಂಪ್ರದಾಯಿಕ ಬಳಕೆಯು ಪ್ರಮುಖ ಮಾರುಕಟ್ಟೆಗಳಲ್ಲಿ ಬೇಡಿಕೆಯನ್ನು ಉಳಿಸಿಕೊಳ್ಳುವುದನ್ನು ಮುಂದುವರೆಸಿದೆ. ಹೀಗಾಗಿ ಅಡಿಕೆ ಬೇಡಿಕೆ ಮುಂದುವರಿದಿದೆ.
ಸಾಂಪ್ರದಾಯಿಕ ಮತ್ತು ಸಂಸ್ಕರಿಸಿದ ಅನ್ವಯಿಕೆಗಳಲ್ಲಿ ನಿರಂತರ ಬಳಕೆ : ಪಾನ್ ಮಸಾಲ, ಗುಟ್ಕಾ, ಅಡಿಕೆ ಹುಡಿ ಮತ್ತು ಸಾಂಪ್ರದಾಯಿಕ ಔಷಧೀಯ ಪದ್ಧತಿಗಳಲ್ಲಿ ಅಡಿಕೆಯನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಈ ಬೇಡಿಕೆಯು ಮುಂದುವರಿಯುತ್ತದೆ ಮತ್ತು ದೀರ್ಘಕಾಲೀನ ಅಡಿಕೆ ಮಾರುಕಟ್ಟೆಯ ಬೆಳವಣಿಗೆಗೆ ಕಾರಣವಾಗುತ್ತದೆ. ವಿಶೇಷವಾಗಿ ಗ್ರಾಮೀಣ ಮತ್ತು ಅರೆ-ನಗರ ಮಾರುಕಟ್ಟೆಗಳಲ್ಲಿ ಸಾಂಸ್ಕೃತಿಕ ಬಳಕೆಯು ಹೆಚ್ಚಾಗಿದೆ.
ದೇಶೀಯ ಬಳಕೆಯನ್ನು ಪೂರೈಸಲು ಆಮದುಗಳಲ್ಲಿ ಏರಿಕೆ : ದೇಶೀಯ ಅಡಿಕೆ ಬೇಡಿಕೆಯನ್ನು ಪೂರೈಸಲು, ವಿಶೇಷವಾಗಿ ಭಾರತದಲ್ಲಿ, ಆಮದು ಪ್ರಮಾಣವೂ ಹೆಚ್ಚಾಗುತ್ತಿದೆ. ದೊಡ್ಡ ಪ್ರಮಾಣದಲ್ಲಿ ದೇಶೀಯ ಉತ್ಪಾದನೆಯ ಹೊರತಾಗಿಯೂ, ಶ್ರೀಲಂಕಾ, ಇಂಡೋನೇಷ್ಯಾ, ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ನಿಂದ ಆಮದಾಗುತ್ತಲೇ ಇವೆ, ಸ್ಥಿರ ಲಭ್ಯತೆಯನ್ನು ಸದ್ಯ ಅಡಿಕೆ ಮಾರುಕಟ್ಟೆ ನಿರೀಕ್ಷಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…
ರಾಜಸ್ಥಾನದಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳನ್ನು ಉತ್ತೇಜಿಸುವ ಮೂಲಕ ರೈತರ ಭವಿಷ್ಯವನ್ನು ಸಂಪೂರ್ಣವಾಗಿ ಬದಲಾಯಿಸಬಹುದು…