ಸುದ್ದಿಗಳು

#Arecanut | ಬೆಳೆಯುತ್ತಿದೆ ಅಡಿಕೆ ಮಾರುಕಟ್ಟೆ | 2032 ರ ವೇಳೆಗೆ ಮಾರುಕಟ್ಟೆಯ ತುತ್ತತುದಿಗೆ ತಲುಪಲಿದೆ |

Share

ಅಡಿಕೆ ಮಾರುಕಟ್ಟೆಯು ಬೆಳೆಯುತ್ತಿದೆ. 2032  ರ ವೇಳೆಗೆ ಅಡಿಕೆ ಮಾರುಕಟ್ಟೆಯ US$ 1438.2 ಮಿಲಿಯನ್ ಮೌಲ್ಯದ ಜಾಗತಿಕ ವ್ಯಾಪಾರದಲ್ಲಿ ಕಾಣಿಸಿಕೊಳ್ಳಬಹುದು. ಇದೇ ವೇಳೆಯ ಅಡಿಕೆಯ ಬೇಡಿಕೆ, ಆರೋಗ್ಯ ಪರಿಣಾಮ ಹಾಗೂ ಇತರ ಪ್ರಭಾವಗಳೂ ಅಂತಿಮ ಹಂತದಲ್ಲಿ ಕಾಣಬಹುದು ಎಂದು ಮಾರುಕಟ್ಟೆ ವಿಶ್ಲೇಷಣಾ ಖಾಸಗಿ ಸಂಸ್ಥೆ ಅಭಿಪ್ರಾಯಪಟ್ಟಿದೆ.

Advertisement

ಈಗ ಅಡಿಕೆ ಮಾರುಕಟ್ಟೆಯು ಜಾಗತಿಕವಾಗಿ ಗುರುತಿಸಿಕೊಂಡಿದೆ. ಅಡಿಕೆಯನ್ನು ಹಲವು ದೇಶಗಳಲ್ಲಿ ಜಗಿಯುವ ಉದ್ದಶಗಳಿಗಾಗಿ ಬಳಕೆ ಮಾಡುತ್ತಾರೆ. ಇದರ ಜೊತೆಗೆ  ಸಾಂಪ್ರದಾಯಿಕ ಔಷಧಿಗಳಿಗೂ ಬಳಕೆ ಮಾಡುತ್ತಾರೆ. ಹಾಗಿದ್ದರೂ ಅಡಿಕೆಯ ಮೇಲೆ ಕೆಲವು ಆಪಾದನೆಗಳೂ ಇವೆ. ಈ ಎಲ್ಲದರ ನಡುವೆಯೂ ಜಾಗತಿಕ ಅಡಿಕೆ ಬೇಡಿಕೆಯು 2022 ರಲ್ಲಿ US$ 834.0 ಮಿಲಿಯನ್ ಮೌಲ್ಯದ್ದಾಗಿದೆ ಎಂದು ನಿರೀಕ್ಷಿಸಲಾಗಿದೆ. 2022 ರಿಂದ 2032 ರವರೆಗೆ ಸುಮಾರು ಶೇ.5.6 ರಷ್ಟು ಬೆಳೆಯುವ ನಿರೀಕ್ಷೆ ಇದೆ.

ಆಗ್ನೇಯ ಏಷ್ಯಾ ಮತ್ತು ಇತರ ಕಡೆ, ಜನರು ಅಡಿಕೆಯನ್ನು ತಿನ್ನಲು ಬಳಕೆ ಮಾಡುತ್ತಾರೆ . ಭಾರತವು ಅಡಿಕೆಯ ವಿಶ್ವದ ಅಗ್ರ ಉತ್ಪಾದಕ ಮತ್ತು ಗ್ರಾಹಕ. ಮಿತಿಮೀರಿದ ಅಡಿಕೆ ಸೇವನೆಯು  ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎನ್ನುವ ಕಾರಣದಿಂದ  ಅಡಿಕೆ ಮಾರುಕಟ್ಟೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಯಾವಾಗಲೂ ಸಮಸ್ಯೆಯಿಂದಲೇ ಕಾಣುತ್ತಿದೆ. ಹಾಗಿದ್ದರೂ ಅಡಿಕೆ ಜಾಗತಿಕವಾಗಿ ಗುರುತಿಸಿಕೊಂಡಿದೆ.

ಭಾರತವು ಅಡಿಕೆಯ ಅತಿದೊಡ್ಡ ಉತ್ಪಾದಕ ಮತ್ತು ಗ್ರಾಹಕ. ಅಡಿಕೆಯ ಜಾಗತಿಕ ಉತ್ಪಾದನೆಯ ಅರ್ಧಕ್ಕಿಂತ ಹೆಚ್ಚಿನ ಭಾಗಕ್ಕೆ ಭಾರತವು ಕಾರಣವಾಗಿದೆ. ಭಾರತ, ಬಾಂಗ್ಲಾದೇಶ, ಇಂಡೋನೇಷಿಯಾ, ಥೈಲ್ಯಾಂಡ್, ಶ್ರೀಲಂಕಾ ಮತ್ತು ಮ್ಯಾನ್ಮಾರ್, ಅಡಿಕೆಗೆ  ಬೇಡಿಕೆಯನ್ನು ಪೂರೈಸುವ ದೇಶಗಳಾಗಿವೆ.

ಈಗ ಅಡಿಕೆ ಮಾರುಕಟ್ಟೆಯಲ್ಲಿ ಉತ್ಪಾದನೆ ಹಾಗೂ ಬಳಕೆ ಎರಡೂ ಕೂಡಾ ಒಂದು ಹಂತದಲ್ಲಿದೆ. ಇನ್ನು ಮುಂದಿನ 10 ವರ್ಷಗಳಲ್ಲಿ  ಉತ್ಪಾದನೆಯಲ್ಲಿ ಮತ್ತಷ್ಟು  ಏರಿಕೆ  ಕಾಣಲಿದೆ. ಹೀಗಾಗಿ ಮಾರುಕಟ್ಟೆ ವಿಸ್ತಾರವಾಗುತ್ತದೆ. ಬಳಕೆಯಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಆರೋಗ್ಯ ಸಂಬಂಧಿತ ದೂರುಗಳೇ ಈಗ ಇರುವ ಸವಾಲುಗಳಾಗಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬೆಳೆಗಾರರಿಗೆ ನಿಜವಾದ ಸಮಸ್ಯೆ ಯಾವುದು ? ಮುಂದೆ ಇರುವ ಸವಾಲುಗಳು ಯಾವುದು ?

ಅಡಿಕೆ ಬೆಳೆ ರಾಜ್ಯದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆ…

6 hours ago

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಹೊಸತನ | ವಜ್ರಗಳ LGD ಟೆಸ್ಟಿಂಗ್ ಮಿಷನ್

ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…

13 hours ago

ಹವಾಮಾನ ಬದಲಾವಣೆಯ ಪರಿಣಾಮ | ಬಾಂಗ್ಲಾದಲ್ಲಿ ಹೆಚ್ಚಾಗಲಿರುವ ಚಂಡಮಾರುತ |

ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ  ಹೆಚ್ಚಾಗುವ…

14 hours ago

ಹವಾಮಾನ ವರದಿ | 15-04-2025 | ಕೆಲವು ಕಡೆ ತುಂತುರು ಮಳೆ | ಎ.19 ರಿಂದ ಕೆಲವು ಕಡೆ ಉತ್ತಮ ಮಳೆ ಸಾಧ್ಯತೆ |

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…

16 hours ago

ಬುಧನ ಚಲನೆ | 3 ರಾಶಿಗೆ ಸಂಪತ್ತಿನ ಮಳೆ, ಯಶಸ್ಸು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

21 hours ago

ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

ಹರಿಯಾಣ ಪ್ರವಾಸದಲ್ಲಿರುವ  ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…

1 day ago