Advertisement
ಸುದ್ದಿಗಳು

#Arecanut | ಬೆಳೆಯುತ್ತಿದೆ ಅಡಿಕೆ ಮಾರುಕಟ್ಟೆ | 2032 ರ ವೇಳೆಗೆ ಮಾರುಕಟ್ಟೆಯ ತುತ್ತತುದಿಗೆ ತಲುಪಲಿದೆ |

Share

ಅಡಿಕೆ ಮಾರುಕಟ್ಟೆಯು ಬೆಳೆಯುತ್ತಿದೆ. 2032  ರ ವೇಳೆಗೆ ಅಡಿಕೆ ಮಾರುಕಟ್ಟೆಯ US$ 1438.2 ಮಿಲಿಯನ್ ಮೌಲ್ಯದ ಜಾಗತಿಕ ವ್ಯಾಪಾರದಲ್ಲಿ ಕಾಣಿಸಿಕೊಳ್ಳಬಹುದು. ಇದೇ ವೇಳೆಯ ಅಡಿಕೆಯ ಬೇಡಿಕೆ, ಆರೋಗ್ಯ ಪರಿಣಾಮ ಹಾಗೂ ಇತರ ಪ್ರಭಾವಗಳೂ ಅಂತಿಮ ಹಂತದಲ್ಲಿ ಕಾಣಬಹುದು ಎಂದು ಮಾರುಕಟ್ಟೆ ವಿಶ್ಲೇಷಣಾ ಖಾಸಗಿ ಸಂಸ್ಥೆ ಅಭಿಪ್ರಾಯಪಟ್ಟಿದೆ.

ಈಗ ಅಡಿಕೆ ಮಾರುಕಟ್ಟೆಯು ಜಾಗತಿಕವಾಗಿ ಗುರುತಿಸಿಕೊಂಡಿದೆ. ಅಡಿಕೆಯನ್ನು ಹಲವು ದೇಶಗಳಲ್ಲಿ ಜಗಿಯುವ ಉದ್ದಶಗಳಿಗಾಗಿ ಬಳಕೆ ಮಾಡುತ್ತಾರೆ. ಇದರ ಜೊತೆಗೆ  ಸಾಂಪ್ರದಾಯಿಕ ಔಷಧಿಗಳಿಗೂ ಬಳಕೆ ಮಾಡುತ್ತಾರೆ. ಹಾಗಿದ್ದರೂ ಅಡಿಕೆಯ ಮೇಲೆ ಕೆಲವು ಆಪಾದನೆಗಳೂ ಇವೆ. ಈ ಎಲ್ಲದರ ನಡುವೆಯೂ ಜಾಗತಿಕ ಅಡಿಕೆ ಬೇಡಿಕೆಯು 2022 ರಲ್ಲಿ US$ 834.0 ಮಿಲಿಯನ್ ಮೌಲ್ಯದ್ದಾಗಿದೆ ಎಂದು ನಿರೀಕ್ಷಿಸಲಾಗಿದೆ. 2022 ರಿಂದ 2032 ರವರೆಗೆ ಸುಮಾರು ಶೇ.5.6 ರಷ್ಟು ಬೆಳೆಯುವ ನಿರೀಕ್ಷೆ ಇದೆ.

ಆಗ್ನೇಯ ಏಷ್ಯಾ ಮತ್ತು ಇತರ ಕಡೆ, ಜನರು ಅಡಿಕೆಯನ್ನು ತಿನ್ನಲು ಬಳಕೆ ಮಾಡುತ್ತಾರೆ . ಭಾರತವು ಅಡಿಕೆಯ ವಿಶ್ವದ ಅಗ್ರ ಉತ್ಪಾದಕ ಮತ್ತು ಗ್ರಾಹಕ. ಮಿತಿಮೀರಿದ ಅಡಿಕೆ ಸೇವನೆಯು  ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎನ್ನುವ ಕಾರಣದಿಂದ  ಅಡಿಕೆ ಮಾರುಕಟ್ಟೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಯಾವಾಗಲೂ ಸಮಸ್ಯೆಯಿಂದಲೇ ಕಾಣುತ್ತಿದೆ. ಹಾಗಿದ್ದರೂ ಅಡಿಕೆ ಜಾಗತಿಕವಾಗಿ ಗುರುತಿಸಿಕೊಂಡಿದೆ.

ಭಾರತವು ಅಡಿಕೆಯ ಅತಿದೊಡ್ಡ ಉತ್ಪಾದಕ ಮತ್ತು ಗ್ರಾಹಕ. ಅಡಿಕೆಯ ಜಾಗತಿಕ ಉತ್ಪಾದನೆಯ ಅರ್ಧಕ್ಕಿಂತ ಹೆಚ್ಚಿನ ಭಾಗಕ್ಕೆ ಭಾರತವು ಕಾರಣವಾಗಿದೆ. ಭಾರತ, ಬಾಂಗ್ಲಾದೇಶ, ಇಂಡೋನೇಷಿಯಾ, ಥೈಲ್ಯಾಂಡ್, ಶ್ರೀಲಂಕಾ ಮತ್ತು ಮ್ಯಾನ್ಮಾರ್, ಅಡಿಕೆಗೆ  ಬೇಡಿಕೆಯನ್ನು ಪೂರೈಸುವ ದೇಶಗಳಾಗಿವೆ.

ಈಗ ಅಡಿಕೆ ಮಾರುಕಟ್ಟೆಯಲ್ಲಿ ಉತ್ಪಾದನೆ ಹಾಗೂ ಬಳಕೆ ಎರಡೂ ಕೂಡಾ ಒಂದು ಹಂತದಲ್ಲಿದೆ. ಇನ್ನು ಮುಂದಿನ 10 ವರ್ಷಗಳಲ್ಲಿ  ಉತ್ಪಾದನೆಯಲ್ಲಿ ಮತ್ತಷ್ಟು  ಏರಿಕೆ  ಕಾಣಲಿದೆ. ಹೀಗಾಗಿ ಮಾರುಕಟ್ಟೆ ವಿಸ್ತಾರವಾಗುತ್ತದೆ. ಬಳಕೆಯಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಆರೋಗ್ಯ ಸಂಬಂಧಿತ ದೂರುಗಳೇ ಈಗ ಇರುವ ಸವಾಲುಗಳಾಗಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

19 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

19 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

19 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

20 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

2 days ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

2 days ago