Advertisement
ಸುದ್ದಿಗಳು

#Arecanut | ಬೆಳೆಯುತ್ತಿದೆ ಅಡಿಕೆ ಮಾರುಕಟ್ಟೆ | 2032 ರ ವೇಳೆಗೆ ಮಾರುಕಟ್ಟೆಯ ತುತ್ತತುದಿಗೆ ತಲುಪಲಿದೆ |

Share

ಅಡಿಕೆ ಮಾರುಕಟ್ಟೆಯು ಬೆಳೆಯುತ್ತಿದೆ. 2032  ರ ವೇಳೆಗೆ ಅಡಿಕೆ ಮಾರುಕಟ್ಟೆಯ US$ 1438.2 ಮಿಲಿಯನ್ ಮೌಲ್ಯದ ಜಾಗತಿಕ ವ್ಯಾಪಾರದಲ್ಲಿ ಕಾಣಿಸಿಕೊಳ್ಳಬಹುದು. ಇದೇ ವೇಳೆಯ ಅಡಿಕೆಯ ಬೇಡಿಕೆ, ಆರೋಗ್ಯ ಪರಿಣಾಮ ಹಾಗೂ ಇತರ ಪ್ರಭಾವಗಳೂ ಅಂತಿಮ ಹಂತದಲ್ಲಿ ಕಾಣಬಹುದು ಎಂದು ಮಾರುಕಟ್ಟೆ ವಿಶ್ಲೇಷಣಾ ಖಾಸಗಿ ಸಂಸ್ಥೆ ಅಭಿಪ್ರಾಯಪಟ್ಟಿದೆ.

ಈಗ ಅಡಿಕೆ ಮಾರುಕಟ್ಟೆಯು ಜಾಗತಿಕವಾಗಿ ಗುರುತಿಸಿಕೊಂಡಿದೆ. ಅಡಿಕೆಯನ್ನು ಹಲವು ದೇಶಗಳಲ್ಲಿ ಜಗಿಯುವ ಉದ್ದಶಗಳಿಗಾಗಿ ಬಳಕೆ ಮಾಡುತ್ತಾರೆ. ಇದರ ಜೊತೆಗೆ  ಸಾಂಪ್ರದಾಯಿಕ ಔಷಧಿಗಳಿಗೂ ಬಳಕೆ ಮಾಡುತ್ತಾರೆ. ಹಾಗಿದ್ದರೂ ಅಡಿಕೆಯ ಮೇಲೆ ಕೆಲವು ಆಪಾದನೆಗಳೂ ಇವೆ. ಈ ಎಲ್ಲದರ ನಡುವೆಯೂ ಜಾಗತಿಕ ಅಡಿಕೆ ಬೇಡಿಕೆಯು 2022 ರಲ್ಲಿ US$ 834.0 ಮಿಲಿಯನ್ ಮೌಲ್ಯದ್ದಾಗಿದೆ ಎಂದು ನಿರೀಕ್ಷಿಸಲಾಗಿದೆ. 2022 ರಿಂದ 2032 ರವರೆಗೆ ಸುಮಾರು ಶೇ.5.6 ರಷ್ಟು ಬೆಳೆಯುವ ನಿರೀಕ್ಷೆ ಇದೆ.

ಆಗ್ನೇಯ ಏಷ್ಯಾ ಮತ್ತು ಇತರ ಕಡೆ, ಜನರು ಅಡಿಕೆಯನ್ನು ತಿನ್ನಲು ಬಳಕೆ ಮಾಡುತ್ತಾರೆ . ಭಾರತವು ಅಡಿಕೆಯ ವಿಶ್ವದ ಅಗ್ರ ಉತ್ಪಾದಕ ಮತ್ತು ಗ್ರಾಹಕ. ಮಿತಿಮೀರಿದ ಅಡಿಕೆ ಸೇವನೆಯು  ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎನ್ನುವ ಕಾರಣದಿಂದ  ಅಡಿಕೆ ಮಾರುಕಟ್ಟೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಯಾವಾಗಲೂ ಸಮಸ್ಯೆಯಿಂದಲೇ ಕಾಣುತ್ತಿದೆ. ಹಾಗಿದ್ದರೂ ಅಡಿಕೆ ಜಾಗತಿಕವಾಗಿ ಗುರುತಿಸಿಕೊಂಡಿದೆ.

ಭಾರತವು ಅಡಿಕೆಯ ಅತಿದೊಡ್ಡ ಉತ್ಪಾದಕ ಮತ್ತು ಗ್ರಾಹಕ. ಅಡಿಕೆಯ ಜಾಗತಿಕ ಉತ್ಪಾದನೆಯ ಅರ್ಧಕ್ಕಿಂತ ಹೆಚ್ಚಿನ ಭಾಗಕ್ಕೆ ಭಾರತವು ಕಾರಣವಾಗಿದೆ. ಭಾರತ, ಬಾಂಗ್ಲಾದೇಶ, ಇಂಡೋನೇಷಿಯಾ, ಥೈಲ್ಯಾಂಡ್, ಶ್ರೀಲಂಕಾ ಮತ್ತು ಮ್ಯಾನ್ಮಾರ್, ಅಡಿಕೆಗೆ  ಬೇಡಿಕೆಯನ್ನು ಪೂರೈಸುವ ದೇಶಗಳಾಗಿವೆ.

ಈಗ ಅಡಿಕೆ ಮಾರುಕಟ್ಟೆಯಲ್ಲಿ ಉತ್ಪಾದನೆ ಹಾಗೂ ಬಳಕೆ ಎರಡೂ ಕೂಡಾ ಒಂದು ಹಂತದಲ್ಲಿದೆ. ಇನ್ನು ಮುಂದಿನ 10 ವರ್ಷಗಳಲ್ಲಿ  ಉತ್ಪಾದನೆಯಲ್ಲಿ ಮತ್ತಷ್ಟು  ಏರಿಕೆ  ಕಾಣಲಿದೆ. ಹೀಗಾಗಿ ಮಾರುಕಟ್ಟೆ ವಿಸ್ತಾರವಾಗುತ್ತದೆ. ಬಳಕೆಯಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಆರೋಗ್ಯ ಸಂಬಂಧಿತ ದೂರುಗಳೇ ಈಗ ಇರುವ ಸವಾಲುಗಳಾಗಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

8 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

10 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 days ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago