Advertisement
ಸುದ್ದಿಗಳು

#Arecanut | ಬೆಳೆಯುತ್ತಿದೆ ಅಡಿಕೆ ಮಾರುಕಟ್ಟೆ | 2032 ರ ವೇಳೆಗೆ ಮಾರುಕಟ್ಟೆಯ ತುತ್ತತುದಿಗೆ ತಲುಪಲಿದೆ |

Share

ಅಡಿಕೆ ಮಾರುಕಟ್ಟೆಯು ಬೆಳೆಯುತ್ತಿದೆ. 2032  ರ ವೇಳೆಗೆ ಅಡಿಕೆ ಮಾರುಕಟ್ಟೆಯ US$ 1438.2 ಮಿಲಿಯನ್ ಮೌಲ್ಯದ ಜಾಗತಿಕ ವ್ಯಾಪಾರದಲ್ಲಿ ಕಾಣಿಸಿಕೊಳ್ಳಬಹುದು. ಇದೇ ವೇಳೆಯ ಅಡಿಕೆಯ ಬೇಡಿಕೆ, ಆರೋಗ್ಯ ಪರಿಣಾಮ ಹಾಗೂ ಇತರ ಪ್ರಭಾವಗಳೂ ಅಂತಿಮ ಹಂತದಲ್ಲಿ ಕಾಣಬಹುದು ಎಂದು ಮಾರುಕಟ್ಟೆ ವಿಶ್ಲೇಷಣಾ ಖಾಸಗಿ ಸಂಸ್ಥೆ ಅಭಿಪ್ರಾಯಪಟ್ಟಿದೆ.

Advertisement

ಈಗ ಅಡಿಕೆ ಮಾರುಕಟ್ಟೆಯು ಜಾಗತಿಕವಾಗಿ ಗುರುತಿಸಿಕೊಂಡಿದೆ. ಅಡಿಕೆಯನ್ನು ಹಲವು ದೇಶಗಳಲ್ಲಿ ಜಗಿಯುವ ಉದ್ದಶಗಳಿಗಾಗಿ ಬಳಕೆ ಮಾಡುತ್ತಾರೆ. ಇದರ ಜೊತೆಗೆ  ಸಾಂಪ್ರದಾಯಿಕ ಔಷಧಿಗಳಿಗೂ ಬಳಕೆ ಮಾಡುತ್ತಾರೆ. ಹಾಗಿದ್ದರೂ ಅಡಿಕೆಯ ಮೇಲೆ ಕೆಲವು ಆಪಾದನೆಗಳೂ ಇವೆ. ಈ ಎಲ್ಲದರ ನಡುವೆಯೂ ಜಾಗತಿಕ ಅಡಿಕೆ ಬೇಡಿಕೆಯು 2022 ರಲ್ಲಿ US$ 834.0 ಮಿಲಿಯನ್ ಮೌಲ್ಯದ್ದಾಗಿದೆ ಎಂದು ನಿರೀಕ್ಷಿಸಲಾಗಿದೆ. 2022 ರಿಂದ 2032 ರವರೆಗೆ ಸುಮಾರು ಶೇ.5.6 ರಷ್ಟು ಬೆಳೆಯುವ ನಿರೀಕ್ಷೆ ಇದೆ.

ಆಗ್ನೇಯ ಏಷ್ಯಾ ಮತ್ತು ಇತರ ಕಡೆ, ಜನರು ಅಡಿಕೆಯನ್ನು ತಿನ್ನಲು ಬಳಕೆ ಮಾಡುತ್ತಾರೆ . ಭಾರತವು ಅಡಿಕೆಯ ವಿಶ್ವದ ಅಗ್ರ ಉತ್ಪಾದಕ ಮತ್ತು ಗ್ರಾಹಕ. ಮಿತಿಮೀರಿದ ಅಡಿಕೆ ಸೇವನೆಯು  ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎನ್ನುವ ಕಾರಣದಿಂದ  ಅಡಿಕೆ ಮಾರುಕಟ್ಟೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಯಾವಾಗಲೂ ಸಮಸ್ಯೆಯಿಂದಲೇ ಕಾಣುತ್ತಿದೆ. ಹಾಗಿದ್ದರೂ ಅಡಿಕೆ ಜಾಗತಿಕವಾಗಿ ಗುರುತಿಸಿಕೊಂಡಿದೆ.

ಭಾರತವು ಅಡಿಕೆಯ ಅತಿದೊಡ್ಡ ಉತ್ಪಾದಕ ಮತ್ತು ಗ್ರಾಹಕ. ಅಡಿಕೆಯ ಜಾಗತಿಕ ಉತ್ಪಾದನೆಯ ಅರ್ಧಕ್ಕಿಂತ ಹೆಚ್ಚಿನ ಭಾಗಕ್ಕೆ ಭಾರತವು ಕಾರಣವಾಗಿದೆ. ಭಾರತ, ಬಾಂಗ್ಲಾದೇಶ, ಇಂಡೋನೇಷಿಯಾ, ಥೈಲ್ಯಾಂಡ್, ಶ್ರೀಲಂಕಾ ಮತ್ತು ಮ್ಯಾನ್ಮಾರ್, ಅಡಿಕೆಗೆ  ಬೇಡಿಕೆಯನ್ನು ಪೂರೈಸುವ ದೇಶಗಳಾಗಿವೆ.

ಈಗ ಅಡಿಕೆ ಮಾರುಕಟ್ಟೆಯಲ್ಲಿ ಉತ್ಪಾದನೆ ಹಾಗೂ ಬಳಕೆ ಎರಡೂ ಕೂಡಾ ಒಂದು ಹಂತದಲ್ಲಿದೆ. ಇನ್ನು ಮುಂದಿನ 10 ವರ್ಷಗಳಲ್ಲಿ  ಉತ್ಪಾದನೆಯಲ್ಲಿ ಮತ್ತಷ್ಟು  ಏರಿಕೆ  ಕಾಣಲಿದೆ. ಹೀಗಾಗಿ ಮಾರುಕಟ್ಟೆ ವಿಸ್ತಾರವಾಗುತ್ತದೆ. ಬಳಕೆಯಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಆರೋಗ್ಯ ಸಂಬಂಧಿತ ದೂರುಗಳೇ ಈಗ ಇರುವ ಸವಾಲುಗಳಾಗಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

15 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

23 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

23 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

23 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

23 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

1 day ago