Advertisement
ಸುದ್ದಿಗಳು

#Arecanut | ಬೆಳೆಯುತ್ತಿದೆ ಅಡಿಕೆ ಮಾರುಕಟ್ಟೆ | 2032 ರ ವೇಳೆಗೆ ಮಾರುಕಟ್ಟೆಯ ತುತ್ತತುದಿಗೆ ತಲುಪಲಿದೆ |

Share

ಅಡಿಕೆ ಮಾರುಕಟ್ಟೆಯು ಬೆಳೆಯುತ್ತಿದೆ. 2032  ರ ವೇಳೆಗೆ ಅಡಿಕೆ ಮಾರುಕಟ್ಟೆಯ US$ 1438.2 ಮಿಲಿಯನ್ ಮೌಲ್ಯದ ಜಾಗತಿಕ ವ್ಯಾಪಾರದಲ್ಲಿ ಕಾಣಿಸಿಕೊಳ್ಳಬಹುದು. ಇದೇ ವೇಳೆಯ ಅಡಿಕೆಯ ಬೇಡಿಕೆ, ಆರೋಗ್ಯ ಪರಿಣಾಮ ಹಾಗೂ ಇತರ ಪ್ರಭಾವಗಳೂ ಅಂತಿಮ ಹಂತದಲ್ಲಿ ಕಾಣಬಹುದು ಎಂದು ಮಾರುಕಟ್ಟೆ ವಿಶ್ಲೇಷಣಾ ಖಾಸಗಿ ಸಂಸ್ಥೆ ಅಭಿಪ್ರಾಯಪಟ್ಟಿದೆ.

ಈಗ ಅಡಿಕೆ ಮಾರುಕಟ್ಟೆಯು ಜಾಗತಿಕವಾಗಿ ಗುರುತಿಸಿಕೊಂಡಿದೆ. ಅಡಿಕೆಯನ್ನು ಹಲವು ದೇಶಗಳಲ್ಲಿ ಜಗಿಯುವ ಉದ್ದಶಗಳಿಗಾಗಿ ಬಳಕೆ ಮಾಡುತ್ತಾರೆ. ಇದರ ಜೊತೆಗೆ  ಸಾಂಪ್ರದಾಯಿಕ ಔಷಧಿಗಳಿಗೂ ಬಳಕೆ ಮಾಡುತ್ತಾರೆ. ಹಾಗಿದ್ದರೂ ಅಡಿಕೆಯ ಮೇಲೆ ಕೆಲವು ಆಪಾದನೆಗಳೂ ಇವೆ. ಈ ಎಲ್ಲದರ ನಡುವೆಯೂ ಜಾಗತಿಕ ಅಡಿಕೆ ಬೇಡಿಕೆಯು 2022 ರಲ್ಲಿ US$ 834.0 ಮಿಲಿಯನ್ ಮೌಲ್ಯದ್ದಾಗಿದೆ ಎಂದು ನಿರೀಕ್ಷಿಸಲಾಗಿದೆ. 2022 ರಿಂದ 2032 ರವರೆಗೆ ಸುಮಾರು ಶೇ.5.6 ರಷ್ಟು ಬೆಳೆಯುವ ನಿರೀಕ್ಷೆ ಇದೆ.

ಆಗ್ನೇಯ ಏಷ್ಯಾ ಮತ್ತು ಇತರ ಕಡೆ, ಜನರು ಅಡಿಕೆಯನ್ನು ತಿನ್ನಲು ಬಳಕೆ ಮಾಡುತ್ತಾರೆ . ಭಾರತವು ಅಡಿಕೆಯ ವಿಶ್ವದ ಅಗ್ರ ಉತ್ಪಾದಕ ಮತ್ತು ಗ್ರಾಹಕ. ಮಿತಿಮೀರಿದ ಅಡಿಕೆ ಸೇವನೆಯು  ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎನ್ನುವ ಕಾರಣದಿಂದ  ಅಡಿಕೆ ಮಾರುಕಟ್ಟೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಯಾವಾಗಲೂ ಸಮಸ್ಯೆಯಿಂದಲೇ ಕಾಣುತ್ತಿದೆ. ಹಾಗಿದ್ದರೂ ಅಡಿಕೆ ಜಾಗತಿಕವಾಗಿ ಗುರುತಿಸಿಕೊಂಡಿದೆ.

ಭಾರತವು ಅಡಿಕೆಯ ಅತಿದೊಡ್ಡ ಉತ್ಪಾದಕ ಮತ್ತು ಗ್ರಾಹಕ. ಅಡಿಕೆಯ ಜಾಗತಿಕ ಉತ್ಪಾದನೆಯ ಅರ್ಧಕ್ಕಿಂತ ಹೆಚ್ಚಿನ ಭಾಗಕ್ಕೆ ಭಾರತವು ಕಾರಣವಾಗಿದೆ. ಭಾರತ, ಬಾಂಗ್ಲಾದೇಶ, ಇಂಡೋನೇಷಿಯಾ, ಥೈಲ್ಯಾಂಡ್, ಶ್ರೀಲಂಕಾ ಮತ್ತು ಮ್ಯಾನ್ಮಾರ್, ಅಡಿಕೆಗೆ  ಬೇಡಿಕೆಯನ್ನು ಪೂರೈಸುವ ದೇಶಗಳಾಗಿವೆ.

ಈಗ ಅಡಿಕೆ ಮಾರುಕಟ್ಟೆಯಲ್ಲಿ ಉತ್ಪಾದನೆ ಹಾಗೂ ಬಳಕೆ ಎರಡೂ ಕೂಡಾ ಒಂದು ಹಂತದಲ್ಲಿದೆ. ಇನ್ನು ಮುಂದಿನ 10 ವರ್ಷಗಳಲ್ಲಿ  ಉತ್ಪಾದನೆಯಲ್ಲಿ ಮತ್ತಷ್ಟು  ಏರಿಕೆ  ಕಾಣಲಿದೆ. ಹೀಗಾಗಿ ಮಾರುಕಟ್ಟೆ ವಿಸ್ತಾರವಾಗುತ್ತದೆ. ಬಳಕೆಯಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಆರೋಗ್ಯ ಸಂಬಂಧಿತ ದೂರುಗಳೇ ಈಗ ಇರುವ ಸವಾಲುಗಳಾಗಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

7 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

8 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

9 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

12 hours ago