Advertisement
ಸುದ್ದಿಗಳು

#Arecanut | ಬೆಳೆಯುತ್ತಿದೆ ಅಡಿಕೆ ಮಾರುಕಟ್ಟೆ | 2032 ರ ವೇಳೆಗೆ ಮಾರುಕಟ್ಟೆಯ ತುತ್ತತುದಿಗೆ ತಲುಪಲಿದೆ |

Share

ಅಡಿಕೆ ಮಾರುಕಟ್ಟೆಯು ಬೆಳೆಯುತ್ತಿದೆ. 2032  ರ ವೇಳೆಗೆ ಅಡಿಕೆ ಮಾರುಕಟ್ಟೆಯ US$ 1438.2 ಮಿಲಿಯನ್ ಮೌಲ್ಯದ ಜಾಗತಿಕ ವ್ಯಾಪಾರದಲ್ಲಿ ಕಾಣಿಸಿಕೊಳ್ಳಬಹುದು. ಇದೇ ವೇಳೆಯ ಅಡಿಕೆಯ ಬೇಡಿಕೆ, ಆರೋಗ್ಯ ಪರಿಣಾಮ ಹಾಗೂ ಇತರ ಪ್ರಭಾವಗಳೂ ಅಂತಿಮ ಹಂತದಲ್ಲಿ ಕಾಣಬಹುದು ಎಂದು ಮಾರುಕಟ್ಟೆ ವಿಶ್ಲೇಷಣಾ ಖಾಸಗಿ ಸಂಸ್ಥೆ ಅಭಿಪ್ರಾಯಪಟ್ಟಿದೆ.

ಈಗ ಅಡಿಕೆ ಮಾರುಕಟ್ಟೆಯು ಜಾಗತಿಕವಾಗಿ ಗುರುತಿಸಿಕೊಂಡಿದೆ. ಅಡಿಕೆಯನ್ನು ಹಲವು ದೇಶಗಳಲ್ಲಿ ಜಗಿಯುವ ಉದ್ದಶಗಳಿಗಾಗಿ ಬಳಕೆ ಮಾಡುತ್ತಾರೆ. ಇದರ ಜೊತೆಗೆ  ಸಾಂಪ್ರದಾಯಿಕ ಔಷಧಿಗಳಿಗೂ ಬಳಕೆ ಮಾಡುತ್ತಾರೆ. ಹಾಗಿದ್ದರೂ ಅಡಿಕೆಯ ಮೇಲೆ ಕೆಲವು ಆಪಾದನೆಗಳೂ ಇವೆ. ಈ ಎಲ್ಲದರ ನಡುವೆಯೂ ಜಾಗತಿಕ ಅಡಿಕೆ ಬೇಡಿಕೆಯು 2022 ರಲ್ಲಿ US$ 834.0 ಮಿಲಿಯನ್ ಮೌಲ್ಯದ್ದಾಗಿದೆ ಎಂದು ನಿರೀಕ್ಷಿಸಲಾಗಿದೆ. 2022 ರಿಂದ 2032 ರವರೆಗೆ ಸುಮಾರು ಶೇ.5.6 ರಷ್ಟು ಬೆಳೆಯುವ ನಿರೀಕ್ಷೆ ಇದೆ.

ಆಗ್ನೇಯ ಏಷ್ಯಾ ಮತ್ತು ಇತರ ಕಡೆ, ಜನರು ಅಡಿಕೆಯನ್ನು ತಿನ್ನಲು ಬಳಕೆ ಮಾಡುತ್ತಾರೆ . ಭಾರತವು ಅಡಿಕೆಯ ವಿಶ್ವದ ಅಗ್ರ ಉತ್ಪಾದಕ ಮತ್ತು ಗ್ರಾಹಕ. ಮಿತಿಮೀರಿದ ಅಡಿಕೆ ಸೇವನೆಯು  ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎನ್ನುವ ಕಾರಣದಿಂದ  ಅಡಿಕೆ ಮಾರುಕಟ್ಟೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಯಾವಾಗಲೂ ಸಮಸ್ಯೆಯಿಂದಲೇ ಕಾಣುತ್ತಿದೆ. ಹಾಗಿದ್ದರೂ ಅಡಿಕೆ ಜಾಗತಿಕವಾಗಿ ಗುರುತಿಸಿಕೊಂಡಿದೆ.

ಭಾರತವು ಅಡಿಕೆಯ ಅತಿದೊಡ್ಡ ಉತ್ಪಾದಕ ಮತ್ತು ಗ್ರಾಹಕ. ಅಡಿಕೆಯ ಜಾಗತಿಕ ಉತ್ಪಾದನೆಯ ಅರ್ಧಕ್ಕಿಂತ ಹೆಚ್ಚಿನ ಭಾಗಕ್ಕೆ ಭಾರತವು ಕಾರಣವಾಗಿದೆ. ಭಾರತ, ಬಾಂಗ್ಲಾದೇಶ, ಇಂಡೋನೇಷಿಯಾ, ಥೈಲ್ಯಾಂಡ್, ಶ್ರೀಲಂಕಾ ಮತ್ತು ಮ್ಯಾನ್ಮಾರ್, ಅಡಿಕೆಗೆ  ಬೇಡಿಕೆಯನ್ನು ಪೂರೈಸುವ ದೇಶಗಳಾಗಿವೆ.

ಈಗ ಅಡಿಕೆ ಮಾರುಕಟ್ಟೆಯಲ್ಲಿ ಉತ್ಪಾದನೆ ಹಾಗೂ ಬಳಕೆ ಎರಡೂ ಕೂಡಾ ಒಂದು ಹಂತದಲ್ಲಿದೆ. ಇನ್ನು ಮುಂದಿನ 10 ವರ್ಷಗಳಲ್ಲಿ  ಉತ್ಪಾದನೆಯಲ್ಲಿ ಮತ್ತಷ್ಟು  ಏರಿಕೆ  ಕಾಣಲಿದೆ. ಹೀಗಾಗಿ ಮಾರುಕಟ್ಟೆ ವಿಸ್ತಾರವಾಗುತ್ತದೆ. ಬಳಕೆಯಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಆರೋಗ್ಯ ಸಂಬಂಧಿತ ದೂರುಗಳೇ ಈಗ ಇರುವ ಸವಾಲುಗಳಾಗಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

4 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

15 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

20 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

21 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

23 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

23 hours ago