MIRROR FOCUS

#Arecanut | ಅಡಿಕೆ ಮಾರುಕಟ್ಟೆ ಏನಾಗುತ್ತಿದೆ ? | ಗಣೇಶ ಚತುರ್ಥಿ ಬಳಿಕ ಮಾರುಕಟ್ಟೆ ಚೇತರಿಕೆ ? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಮಾರುಕಟ್ಟೆಯು ನಿರೀಕ್ಷಿತ ರೀತಿಯಲ್ಲಿ ಚೇತರಿಕೆ ಕಂಡಿಲ್ಲ. ಇದೀಗ ಚಾಲಿ ಹೊಸ ಅಡಿಕೆ ಹಾಗೂ ಹಳೆ ಅಡಿಕೆ ಧಾರಣೆಯಲ್ಲೂ ಏರಿಳಿತ ಕಂಡುಬಂದಿದೆ. ಈ ನಡುವೆ ಗಣೇಶ ಚೌತಿ ಬಳಿಕ ಅಡಿಕೆ ಧಾರಣೆಯಲ್ಲಿ ಮಹತ್ವದ ಬದಲಾವಣೆ ಕಾಣಲಿದೆ ಎಂದು ಮಾರುಕಟ್ಟೆ ವಿಶ್ಲೇಷಣೆ ಅಭಿಪ್ರಾಯ ಪಟ್ಟಿದೆ. ಇದೇ ವೇಳೆ ಗುಜರಾತಿನ ಅಹಮದಾಬಾದಿನಲ್ಲಿ  ಕೆಜಿ ಅಡಿಕೆಗೆ 600 ರೂಪಾಯಿಗೆ ಬೇಡಿಕೆ ವ್ಯಕ್ತವಾಗಿದೆ.

Advertisement

ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಕಳೆದ ಎರಡು  ತಿಂಗಳಿನಿಂದ ಚಾಲಿ ಅಡಿಕೆಯಲ್ಲಿ ಹೊಸ ಅಡಿಕೆ ಧಾರಣೆ ಏರುಗತಿಯಲ್ಲಿ ಸಾಗಿತ್ತು. ಹಳೆ ಅಡಿಕೆ ಧಾರಣೆ ಸ್ಥಿರತೆಯಲ್ಲಿತ್ತು. ಇದೀಗ ಹೊಸ ಅಡಿಕೆ ಧಾರಣೆ 445 ರೂಪಾಯಿ ಹಾಗೂ ಹಳೆ ಅಡಿಕೆ ಧಾರಣೆ 480 ರೂಪಾಯಿಯಲ್ಲಿದೆ. ಕಳೆದ ಒಂದು ವಾರದಿಂದ ಅಡಿಕೆ ಧಾರಣೆ ಇಳಿಕೆಯ ಹಾದಿಯಲ್ಲಿದೆ.

ಇದೇ ವೇಳೆ ಉತ್ತರ ಕನ್ನಡ, ಶಿವಮೊಗ್ಗ ಸೇರಿದಂತೆ ಇತರ ಎಲ್ಲಾ ಕಡೆಗಳಲ್ಲೂ ಅಡಿಕೆ ಧಾರಣೆ ಇಳಿಕೆಯ ಹಾದಿಯಲ್ಲಿ ಸಾಗಿದೆ. ಧಾರಣೆ ಇಳಿಕೆಗೆ ವಿವಿಧ ಕಾರಣ ನೀಡಲಾಗುತ್ತಿದೆ. ವಿದೇಶಿ ಅಡಿಕೆ ಆಮದು , ವಿಪರೀತ ದಾಸ್ತಾನು ಸೇರಿದಂತೆ ಹಲವು ಕಾರಣಗಳು ಮಾರುಕಟ್ಟೆ ವಲಯದಲ್ಲಿದೆ. ಕಳ್ಳದಾರಿಯ ಮೂಲಕ ಅಡಿಕೆ ಸಾಗಾಣಿಕೆ ಆಗಿರುವುದು ಚಾಲಿ ಅಡಿಕೆ ಮಾರುಕಟ್ಟೆ ಮೇಲೆ ಸ್ವಲ್ಪ ಪ್ರಮಾಣದ ಪರಿಣಾಮ ಬೀರಿದೆ. ಈಗಾಗಲೇ ಕೆಲವು ಕಡೆಗಳಲ್ಲಿ ಆಮದು ಅಡಿಕೆ ಲಭ್ಯವಾಗುತ್ತಿದೆ ಎಂದು ಮಾರುಕಟ್ಟೆ ವಲಯ ಹೇಳಿಕೊಂಡಿದೆ.

600 ರೂಪಾಯಿಗೆ ಅಡಿಕೆ ಬೇಡಿಕೆ

ಗಣೇಶ ಚೌತಿಯ ಬಳಿಕ ಹೊಸ ಅಡಿಕೆಯು ಮಾರುಕಟ್ಟೆ ಪ್ರವೇಶ ಮಾಡುತ್ತದೆ. ಈ ಸಂದರ್ಭ ಹೊಸ ಅಡಿಕೆ ಧಾರಣೆ ನಿಗದಿಯಾಗುತ್ತದೆ. ಆ ಬಳಿಕ ಅಡಿಕೆ ಧಾರಣೆ ಮತ್ತೆ ಏರಿಕೆಯಾಗುವುದು  ಸಾಮಾನ್ಯವಾಗಿ ಕಂಡುಬರುತ್ತದೆ. ಈ ಬಾರಿ ಕೂಡಾ ಅದೇ ಟ್ರೆಂಡ್‌ ಮುಂದುವರಿಯಲಿದೆ ಎನ್ನುವುದು ಮಾರುಕಟ್ಟೆ ವಲಯದ ಅಭಿಪ್ರಾಯ.

ದಕ್ಷಿಣ ಕನ್ನಡದಲ್ಲಿ ಖಾಸಗಿ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ದರ ಕೆಜಿಗೆ 438 ರಿಂದ 445 ರೂಪಾಯಿ ಇದೆ. ಹಳೆ ಅಡಿಕೆ ಧಾರಣೆ 465 ರಿಂದ 48೦ ರವರೆಗೆ ಇದೆ.  ವಿಶೇಷವಾಗಿ ಮಲೆನಾಡು ಭಾಗದ ಚಾಲಿ ಅಡಿಕೆ ಉತ್ತಮ ಗುಣಮಟ್ಟ ಹೊಂದಿದ್ದು ಈ ಅಡಿಕೆಯನ್ನು ಗುಜರಾತ್, ಮಹಾರಾಷ್ಟ್ರ, ಉತ್ತರ ಪ್ರದೇಶ ಮುಂತಾದ ರಾಜ್ಯಗಳಲ್ಲಿ ಬೇಡಿಕೆ ಇದೆ. ಈಗಾಗಲೇ ಕೆಜಿ ಅಡಿಕೆಗೆ 600 ರೂಪಾಯಿಗೆ ಬೇಡಿಕೆ ವ್ಯಕ್ತವಾಗಿದೆ.

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೈಕ್ರೋಪ್ಲಾಸ್ಟಿಕ್‌ಗಳು ಕೃಷಿಗೆ ಅಡ್ಡಿ-ಇಳುವರಿಯ ಮೇಲೆ ಪರಿಣಾಮ | ವಿಜ್ಞಾನಿಗಳಿಂದ ಎಚ್ಚರಿಕೆ |

ಪರಿಸರದ ಮೇಲೆ ಮೈಕ್ರೋಪ್ಲಾಸ್ಟಿಕ್‌ಗಳ ಪರಿಣಾಮವನ್ನು ತಗ್ಗಿಸಲು ತಕ್ಷಣದ ಕ್ರಮ ಕೈಗೊಳ್ಳಬೇಕೆಂದು ಸಂಶೋಧನೆಗಳು ಹೇಳುತ್ತವೆ.…

3 hours ago

ಪಪ್ಪಾಯಿ ಕೃಷಿ ಕಲಿಸಿದ ಪಾಠ

https://www.youtube.com/watch?v=GSG6_RAqSJ0&t=70s

12 hours ago

223 ಕಾಡ್ಗಿಚ್ಚು ಘಟನೆ – 130 ಹೆಕ್ಟೇರ್ ಅರಣ್ಯ ನಾಶ

ಮಿಜೋರಾಂನ ಕೊಲಾಸಿಬ್ ಜಿಲ್ಲೆಯಲ್ಲಿ ಸುಮಾರು 130 ಹೆಕ್ಟೇರ್‌ಗಳಷ್ಟು ಅರಣ್ಯ ಪ್ರದೇಶ ಸುಟ್ಟುಹೋಗಿರುವ ಬಗ್ಗೆ…

12 hours ago

ರಾಜ್ಯದಲ್ಲಿ ಹಾಲಿನ ಬೆಲೆ ಏರಿಕೆ | ಯುಗಾದಿಗೆ ರೈತರಿಗೆ ಕೊಡುಗೆ |

ಹಾಲಿನ ದರವನ್ನ 4 ರೂ. ಹೆಚ್ಚಳ ಮಾಡಿರುವ ಸರ್ಕಾರದ ನಿರ್ಧಾರವನ್ನ ಮೈಮುಲ್ ಅಧ್ಯಕ್ಷ…

13 hours ago

‘ಪರಿಸರ-2025’ ರಾಷ್ಟ್ರೀಯ ಸಮ್ಮೇಳನ | ಉಸಿರಾಡುವ  ಗಾಳಿ , ಕುಡಿಯುವ ನೀರು ,  ಪಕ್ಷಿಗಳ ಕೂಗಿನ ಬಗ್ಗೆ ಯೋಚಿಸುವ ಅಗತ್ಯವಿದೆ

ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸುವ  ಬಗ್ಗೆ ಚಿಂತಿಸುವ ಪೋಷಕರು ಅವರು ಭವಿಷ್ಯದಲ್ಲಿ ಉಸಿರಾಡುವ …

14 hours ago