Advertisement
MIRROR FOCUS

#Arecanut | ಅಡಿಕೆ ಮಾರುಕಟ್ಟೆ ಏನಾಗುತ್ತಿದೆ ? | ಗಣೇಶ ಚತುರ್ಥಿ ಬಳಿಕ ಮಾರುಕಟ್ಟೆ ಚೇತರಿಕೆ ? |

Share

ಅಡಿಕೆ ಮಾರುಕಟ್ಟೆಯು ನಿರೀಕ್ಷಿತ ರೀತಿಯಲ್ಲಿ ಚೇತರಿಕೆ ಕಂಡಿಲ್ಲ. ಇದೀಗ ಚಾಲಿ ಹೊಸ ಅಡಿಕೆ ಹಾಗೂ ಹಳೆ ಅಡಿಕೆ ಧಾರಣೆಯಲ್ಲೂ ಏರಿಳಿತ ಕಂಡುಬಂದಿದೆ. ಈ ನಡುವೆ ಗಣೇಶ ಚೌತಿ ಬಳಿಕ ಅಡಿಕೆ ಧಾರಣೆಯಲ್ಲಿ ಮಹತ್ವದ ಬದಲಾವಣೆ ಕಾಣಲಿದೆ ಎಂದು ಮಾರುಕಟ್ಟೆ ವಿಶ್ಲೇಷಣೆ ಅಭಿಪ್ರಾಯ ಪಟ್ಟಿದೆ. ಇದೇ ವೇಳೆ ಗುಜರಾತಿನ ಅಹಮದಾಬಾದಿನಲ್ಲಿ  ಕೆಜಿ ಅಡಿಕೆಗೆ 600 ರೂಪಾಯಿಗೆ ಬೇಡಿಕೆ ವ್ಯಕ್ತವಾಗಿದೆ.

ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಕಳೆದ ಎರಡು  ತಿಂಗಳಿನಿಂದ ಚಾಲಿ ಅಡಿಕೆಯಲ್ಲಿ ಹೊಸ ಅಡಿಕೆ ಧಾರಣೆ ಏರುಗತಿಯಲ್ಲಿ ಸಾಗಿತ್ತು. ಹಳೆ ಅಡಿಕೆ ಧಾರಣೆ ಸ್ಥಿರತೆಯಲ್ಲಿತ್ತು. ಇದೀಗ ಹೊಸ ಅಡಿಕೆ ಧಾರಣೆ 445 ರೂಪಾಯಿ ಹಾಗೂ ಹಳೆ ಅಡಿಕೆ ಧಾರಣೆ 480 ರೂಪಾಯಿಯಲ್ಲಿದೆ. ಕಳೆದ ಒಂದು ವಾರದಿಂದ ಅಡಿಕೆ ಧಾರಣೆ ಇಳಿಕೆಯ ಹಾದಿಯಲ್ಲಿದೆ.

ಇದೇ ವೇಳೆ ಉತ್ತರ ಕನ್ನಡ, ಶಿವಮೊಗ್ಗ ಸೇರಿದಂತೆ ಇತರ ಎಲ್ಲಾ ಕಡೆಗಳಲ್ಲೂ ಅಡಿಕೆ ಧಾರಣೆ ಇಳಿಕೆಯ ಹಾದಿಯಲ್ಲಿ ಸಾಗಿದೆ. ಧಾರಣೆ ಇಳಿಕೆಗೆ ವಿವಿಧ ಕಾರಣ ನೀಡಲಾಗುತ್ತಿದೆ. ವಿದೇಶಿ ಅಡಿಕೆ ಆಮದು , ವಿಪರೀತ ದಾಸ್ತಾನು ಸೇರಿದಂತೆ ಹಲವು ಕಾರಣಗಳು ಮಾರುಕಟ್ಟೆ ವಲಯದಲ್ಲಿದೆ. ಕಳ್ಳದಾರಿಯ ಮೂಲಕ ಅಡಿಕೆ ಸಾಗಾಣಿಕೆ ಆಗಿರುವುದು ಚಾಲಿ ಅಡಿಕೆ ಮಾರುಕಟ್ಟೆ ಮೇಲೆ ಸ್ವಲ್ಪ ಪ್ರಮಾಣದ ಪರಿಣಾಮ ಬೀರಿದೆ. ಈಗಾಗಲೇ ಕೆಲವು ಕಡೆಗಳಲ್ಲಿ ಆಮದು ಅಡಿಕೆ ಲಭ್ಯವಾಗುತ್ತಿದೆ ಎಂದು ಮಾರುಕಟ್ಟೆ ವಲಯ ಹೇಳಿಕೊಂಡಿದೆ.

600 ರೂಪಾಯಿಗೆ ಅಡಿಕೆ ಬೇಡಿಕೆ

ಗಣೇಶ ಚೌತಿಯ ಬಳಿಕ ಹೊಸ ಅಡಿಕೆಯು ಮಾರುಕಟ್ಟೆ ಪ್ರವೇಶ ಮಾಡುತ್ತದೆ. ಈ ಸಂದರ್ಭ ಹೊಸ ಅಡಿಕೆ ಧಾರಣೆ ನಿಗದಿಯಾಗುತ್ತದೆ. ಆ ಬಳಿಕ ಅಡಿಕೆ ಧಾರಣೆ ಮತ್ತೆ ಏರಿಕೆಯಾಗುವುದು  ಸಾಮಾನ್ಯವಾಗಿ ಕಂಡುಬರುತ್ತದೆ. ಈ ಬಾರಿ ಕೂಡಾ ಅದೇ ಟ್ರೆಂಡ್‌ ಮುಂದುವರಿಯಲಿದೆ ಎನ್ನುವುದು ಮಾರುಕಟ್ಟೆ ವಲಯದ ಅಭಿಪ್ರಾಯ.

ದಕ್ಷಿಣ ಕನ್ನಡದಲ್ಲಿ ಖಾಸಗಿ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ದರ ಕೆಜಿಗೆ 438 ರಿಂದ 445 ರೂಪಾಯಿ ಇದೆ. ಹಳೆ ಅಡಿಕೆ ಧಾರಣೆ 465 ರಿಂದ 48೦ ರವರೆಗೆ ಇದೆ.  ವಿಶೇಷವಾಗಿ ಮಲೆನಾಡು ಭಾಗದ ಚಾಲಿ ಅಡಿಕೆ ಉತ್ತಮ ಗುಣಮಟ್ಟ ಹೊಂದಿದ್ದು ಈ ಅಡಿಕೆಯನ್ನು ಗುಜರಾತ್, ಮಹಾರಾಷ್ಟ್ರ, ಉತ್ತರ ಪ್ರದೇಶ ಮುಂತಾದ ರಾಜ್ಯಗಳಲ್ಲಿ ಬೇಡಿಕೆ ಇದೆ. ಈಗಾಗಲೇ ಕೆಜಿ ಅಡಿಕೆಗೆ 600 ರೂಪಾಯಿಗೆ ಬೇಡಿಕೆ ವ್ಯಕ್ತವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

3 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

7 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

18 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

20 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

20 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

20 hours ago