Advertisement
MIRROR FOCUS

#Arecanut | ಅಡಿಕೆ ಮಾರುಕಟ್ಟೆ ಏನಾಗುತ್ತಿದೆ ? | ಗಣೇಶ ಚತುರ್ಥಿ ಬಳಿಕ ಮಾರುಕಟ್ಟೆ ಚೇತರಿಕೆ ? |

Share

ಅಡಿಕೆ ಮಾರುಕಟ್ಟೆಯು ನಿರೀಕ್ಷಿತ ರೀತಿಯಲ್ಲಿ ಚೇತರಿಕೆ ಕಂಡಿಲ್ಲ. ಇದೀಗ ಚಾಲಿ ಹೊಸ ಅಡಿಕೆ ಹಾಗೂ ಹಳೆ ಅಡಿಕೆ ಧಾರಣೆಯಲ್ಲೂ ಏರಿಳಿತ ಕಂಡುಬಂದಿದೆ. ಈ ನಡುವೆ ಗಣೇಶ ಚೌತಿ ಬಳಿಕ ಅಡಿಕೆ ಧಾರಣೆಯಲ್ಲಿ ಮಹತ್ವದ ಬದಲಾವಣೆ ಕಾಣಲಿದೆ ಎಂದು ಮಾರುಕಟ್ಟೆ ವಿಶ್ಲೇಷಣೆ ಅಭಿಪ್ರಾಯ ಪಟ್ಟಿದೆ. ಇದೇ ವೇಳೆ ಗುಜರಾತಿನ ಅಹಮದಾಬಾದಿನಲ್ಲಿ  ಕೆಜಿ ಅಡಿಕೆಗೆ 600 ರೂಪಾಯಿಗೆ ಬೇಡಿಕೆ ವ್ಯಕ್ತವಾಗಿದೆ.

ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಕಳೆದ ಎರಡು  ತಿಂಗಳಿನಿಂದ ಚಾಲಿ ಅಡಿಕೆಯಲ್ಲಿ ಹೊಸ ಅಡಿಕೆ ಧಾರಣೆ ಏರುಗತಿಯಲ್ಲಿ ಸಾಗಿತ್ತು. ಹಳೆ ಅಡಿಕೆ ಧಾರಣೆ ಸ್ಥಿರತೆಯಲ್ಲಿತ್ತು. ಇದೀಗ ಹೊಸ ಅಡಿಕೆ ಧಾರಣೆ 445 ರೂಪಾಯಿ ಹಾಗೂ ಹಳೆ ಅಡಿಕೆ ಧಾರಣೆ 480 ರೂಪಾಯಿಯಲ್ಲಿದೆ. ಕಳೆದ ಒಂದು ವಾರದಿಂದ ಅಡಿಕೆ ಧಾರಣೆ ಇಳಿಕೆಯ ಹಾದಿಯಲ್ಲಿದೆ.

ಇದೇ ವೇಳೆ ಉತ್ತರ ಕನ್ನಡ, ಶಿವಮೊಗ್ಗ ಸೇರಿದಂತೆ ಇತರ ಎಲ್ಲಾ ಕಡೆಗಳಲ್ಲೂ ಅಡಿಕೆ ಧಾರಣೆ ಇಳಿಕೆಯ ಹಾದಿಯಲ್ಲಿ ಸಾಗಿದೆ. ಧಾರಣೆ ಇಳಿಕೆಗೆ ವಿವಿಧ ಕಾರಣ ನೀಡಲಾಗುತ್ತಿದೆ. ವಿದೇಶಿ ಅಡಿಕೆ ಆಮದು , ವಿಪರೀತ ದಾಸ್ತಾನು ಸೇರಿದಂತೆ ಹಲವು ಕಾರಣಗಳು ಮಾರುಕಟ್ಟೆ ವಲಯದಲ್ಲಿದೆ. ಕಳ್ಳದಾರಿಯ ಮೂಲಕ ಅಡಿಕೆ ಸಾಗಾಣಿಕೆ ಆಗಿರುವುದು ಚಾಲಿ ಅಡಿಕೆ ಮಾರುಕಟ್ಟೆ ಮೇಲೆ ಸ್ವಲ್ಪ ಪ್ರಮಾಣದ ಪರಿಣಾಮ ಬೀರಿದೆ. ಈಗಾಗಲೇ ಕೆಲವು ಕಡೆಗಳಲ್ಲಿ ಆಮದು ಅಡಿಕೆ ಲಭ್ಯವಾಗುತ್ತಿದೆ ಎಂದು ಮಾರುಕಟ್ಟೆ ವಲಯ ಹೇಳಿಕೊಂಡಿದೆ.

600 ರೂಪಾಯಿಗೆ ಅಡಿಕೆ ಬೇಡಿಕೆ

ಗಣೇಶ ಚೌತಿಯ ಬಳಿಕ ಹೊಸ ಅಡಿಕೆಯು ಮಾರುಕಟ್ಟೆ ಪ್ರವೇಶ ಮಾಡುತ್ತದೆ. ಈ ಸಂದರ್ಭ ಹೊಸ ಅಡಿಕೆ ಧಾರಣೆ ನಿಗದಿಯಾಗುತ್ತದೆ. ಆ ಬಳಿಕ ಅಡಿಕೆ ಧಾರಣೆ ಮತ್ತೆ ಏರಿಕೆಯಾಗುವುದು  ಸಾಮಾನ್ಯವಾಗಿ ಕಂಡುಬರುತ್ತದೆ. ಈ ಬಾರಿ ಕೂಡಾ ಅದೇ ಟ್ರೆಂಡ್‌ ಮುಂದುವರಿಯಲಿದೆ ಎನ್ನುವುದು ಮಾರುಕಟ್ಟೆ ವಲಯದ ಅಭಿಪ್ರಾಯ.

ದಕ್ಷಿಣ ಕನ್ನಡದಲ್ಲಿ ಖಾಸಗಿ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ದರ ಕೆಜಿಗೆ 438 ರಿಂದ 445 ರೂಪಾಯಿ ಇದೆ. ಹಳೆ ಅಡಿಕೆ ಧಾರಣೆ 465 ರಿಂದ 48೦ ರವರೆಗೆ ಇದೆ.  ವಿಶೇಷವಾಗಿ ಮಲೆನಾಡು ಭಾಗದ ಚಾಲಿ ಅಡಿಕೆ ಉತ್ತಮ ಗುಣಮಟ್ಟ ಹೊಂದಿದ್ದು ಈ ಅಡಿಕೆಯನ್ನು ಗುಜರಾತ್, ಮಹಾರಾಷ್ಟ್ರ, ಉತ್ತರ ಪ್ರದೇಶ ಮುಂತಾದ ರಾಜ್ಯಗಳಲ್ಲಿ ಬೇಡಿಕೆ ಇದೆ. ಈಗಾಗಲೇ ಕೆಜಿ ಅಡಿಕೆಗೆ 600 ರೂಪಾಯಿಗೆ ಬೇಡಿಕೆ ವ್ಯಕ್ತವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

38 minutes ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

6 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

8 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

8 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

10 hours ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

15 hours ago