Advertisement
MIRROR FOCUS

#Arecanut | ಅಡಿಕೆ ಮಾರುಕಟ್ಟೆ ಏನಾಗುತ್ತಿದೆ ? | ಗಣೇಶ ಚತುರ್ಥಿ ಬಳಿಕ ಮಾರುಕಟ್ಟೆ ಚೇತರಿಕೆ ? |

Share

ಅಡಿಕೆ ಮಾರುಕಟ್ಟೆಯು ನಿರೀಕ್ಷಿತ ರೀತಿಯಲ್ಲಿ ಚೇತರಿಕೆ ಕಂಡಿಲ್ಲ. ಇದೀಗ ಚಾಲಿ ಹೊಸ ಅಡಿಕೆ ಹಾಗೂ ಹಳೆ ಅಡಿಕೆ ಧಾರಣೆಯಲ್ಲೂ ಏರಿಳಿತ ಕಂಡುಬಂದಿದೆ. ಈ ನಡುವೆ ಗಣೇಶ ಚೌತಿ ಬಳಿಕ ಅಡಿಕೆ ಧಾರಣೆಯಲ್ಲಿ ಮಹತ್ವದ ಬದಲಾವಣೆ ಕಾಣಲಿದೆ ಎಂದು ಮಾರುಕಟ್ಟೆ ವಿಶ್ಲೇಷಣೆ ಅಭಿಪ್ರಾಯ ಪಟ್ಟಿದೆ. ಇದೇ ವೇಳೆ ಗುಜರಾತಿನ ಅಹಮದಾಬಾದಿನಲ್ಲಿ  ಕೆಜಿ ಅಡಿಕೆಗೆ 600 ರೂಪಾಯಿಗೆ ಬೇಡಿಕೆ ವ್ಯಕ್ತವಾಗಿದೆ.

Advertisement
Advertisement

ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಕಳೆದ ಎರಡು  ತಿಂಗಳಿನಿಂದ ಚಾಲಿ ಅಡಿಕೆಯಲ್ಲಿ ಹೊಸ ಅಡಿಕೆ ಧಾರಣೆ ಏರುಗತಿಯಲ್ಲಿ ಸಾಗಿತ್ತು. ಹಳೆ ಅಡಿಕೆ ಧಾರಣೆ ಸ್ಥಿರತೆಯಲ್ಲಿತ್ತು. ಇದೀಗ ಹೊಸ ಅಡಿಕೆ ಧಾರಣೆ 445 ರೂಪಾಯಿ ಹಾಗೂ ಹಳೆ ಅಡಿಕೆ ಧಾರಣೆ 480 ರೂಪಾಯಿಯಲ್ಲಿದೆ. ಕಳೆದ ಒಂದು ವಾರದಿಂದ ಅಡಿಕೆ ಧಾರಣೆ ಇಳಿಕೆಯ ಹಾದಿಯಲ್ಲಿದೆ.

Advertisement

ಇದೇ ವೇಳೆ ಉತ್ತರ ಕನ್ನಡ, ಶಿವಮೊಗ್ಗ ಸೇರಿದಂತೆ ಇತರ ಎಲ್ಲಾ ಕಡೆಗಳಲ್ಲೂ ಅಡಿಕೆ ಧಾರಣೆ ಇಳಿಕೆಯ ಹಾದಿಯಲ್ಲಿ ಸಾಗಿದೆ. ಧಾರಣೆ ಇಳಿಕೆಗೆ ವಿವಿಧ ಕಾರಣ ನೀಡಲಾಗುತ್ತಿದೆ. ವಿದೇಶಿ ಅಡಿಕೆ ಆಮದು , ವಿಪರೀತ ದಾಸ್ತಾನು ಸೇರಿದಂತೆ ಹಲವು ಕಾರಣಗಳು ಮಾರುಕಟ್ಟೆ ವಲಯದಲ್ಲಿದೆ. ಕಳ್ಳದಾರಿಯ ಮೂಲಕ ಅಡಿಕೆ ಸಾಗಾಣಿಕೆ ಆಗಿರುವುದು ಚಾಲಿ ಅಡಿಕೆ ಮಾರುಕಟ್ಟೆ ಮೇಲೆ ಸ್ವಲ್ಪ ಪ್ರಮಾಣದ ಪರಿಣಾಮ ಬೀರಿದೆ. ಈಗಾಗಲೇ ಕೆಲವು ಕಡೆಗಳಲ್ಲಿ ಆಮದು ಅಡಿಕೆ ಲಭ್ಯವಾಗುತ್ತಿದೆ ಎಂದು ಮಾರುಕಟ್ಟೆ ವಲಯ ಹೇಳಿಕೊಂಡಿದೆ.

600 ರೂಪಾಯಿಗೆ ಅಡಿಕೆ ಬೇಡಿಕೆ

ಗಣೇಶ ಚೌತಿಯ ಬಳಿಕ ಹೊಸ ಅಡಿಕೆಯು ಮಾರುಕಟ್ಟೆ ಪ್ರವೇಶ ಮಾಡುತ್ತದೆ. ಈ ಸಂದರ್ಭ ಹೊಸ ಅಡಿಕೆ ಧಾರಣೆ ನಿಗದಿಯಾಗುತ್ತದೆ. ಆ ಬಳಿಕ ಅಡಿಕೆ ಧಾರಣೆ ಮತ್ತೆ ಏರಿಕೆಯಾಗುವುದು  ಸಾಮಾನ್ಯವಾಗಿ ಕಂಡುಬರುತ್ತದೆ. ಈ ಬಾರಿ ಕೂಡಾ ಅದೇ ಟ್ರೆಂಡ್‌ ಮುಂದುವರಿಯಲಿದೆ ಎನ್ನುವುದು ಮಾರುಕಟ್ಟೆ ವಲಯದ ಅಭಿಪ್ರಾಯ.

Advertisement

ದಕ್ಷಿಣ ಕನ್ನಡದಲ್ಲಿ ಖಾಸಗಿ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ದರ ಕೆಜಿಗೆ 438 ರಿಂದ 445 ರೂಪಾಯಿ ಇದೆ. ಹಳೆ ಅಡಿಕೆ ಧಾರಣೆ 465 ರಿಂದ 48೦ ರವರೆಗೆ ಇದೆ.  ವಿಶೇಷವಾಗಿ ಮಲೆನಾಡು ಭಾಗದ ಚಾಲಿ ಅಡಿಕೆ ಉತ್ತಮ ಗುಣಮಟ್ಟ ಹೊಂದಿದ್ದು ಈ ಅಡಿಕೆಯನ್ನು ಗುಜರಾತ್, ಮಹಾರಾಷ್ಟ್ರ, ಉತ್ತರ ಪ್ರದೇಶ ಮುಂತಾದ ರಾಜ್ಯಗಳಲ್ಲಿ ಬೇಡಿಕೆ ಇದೆ. ಈಗಾಗಲೇ ಕೆಜಿ ಅಡಿಕೆಗೆ 600 ರೂಪಾಯಿಗೆ ಬೇಡಿಕೆ ವ್ಯಕ್ತವಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

43 mins ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

1 hour ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

2 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

2 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

4 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

6 hours ago