Advertisement
MIRROR FOCUS

ಅಡಿಕೆ ಕಳ್ಳಸಾಗಾಣಿಕೆ ಮತ್ತೆ ತಡೆದ ಗಡಿಭದ್ರತಾ ಪಡೆ | ಅಡಿಕೆ ಮಾರುಕಟ್ಟೆಗೆ ಸಿಗುತ್ತಿದೆ ಭದ್ರತೆ | ಏನಾಗಬಹುದು ಅಡಿಕೆ ಮಾರುಕಟ್ಟೆ ?

Share

ಮಿಜೋರಾಂನ ಚಂಪೈ ಜಿಲ್ಲೆಯಲ್ಲಿ ಅಪಾರ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಗಡಿ ಭದ್ರತಾ ಪಡೆಯು ಪತ್ತೆ ಮಾಡಿದೆ. 3.8 ಕೋಟಿ ರೂ.ಗಳ ಮೌಲ್ಯದ 2,100 ಚೀಲ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡು ತನಿಖೆಗೆ ಹಸ್ತಾಂತರಿಸಿದೆ. ಈಗಿನ ಮಾಹಿತಿ ಪ್ರಕಾರ ಮಾನ್ಮಾರ್‌ ನಿಂದ ಅಡಿಕೆಯನ್ನು  ಇಂಡೋ ಮಾನ್ಮಾರ್‌ ಗಡಿ ಮೂಲಕ ಮಿಜೋರಾಂ ದಾರಿಯಲ್ಲಿ ಸಾಗಾಟ ಮಾಡಲಾಗುತ್ತಿತ್ತು.

Advertisement
Advertisement

ಅಡಿಕೆ ಮಾರುಕಟ್ಟೆಗೆ ಮತ್ತೆ ಬಲ ಸಿಗುತ್ತಿದೆ. ಧಾರಣೆ ಸ್ಥಿರತೆ ಹಾಗೂ ಮಾರುಕಟ್ಟೆ ಏರಿಕೆಗೆ ನಿರೀಕ್ಷೆ ಕಂಡುಬಂದಿದೆ. ಲಾಕ್ಡೌನ್‌ ನಂತರ ದೇಶದ ಎಲ್ಲಾ ಗಡಿಭಾಗಗಳಲ್ಲೂ ಭದ್ರತೆಯನ್ನು ಹೆಚ್ಚಿಸಿರಿಸುವಿದರಿಂದ ಅಡಿಕೆ ಕಳ್ಳ ಸಾಗಾಣಿಕೆ ಕಷ್ಟವಾಗುತ್ತಿದೆ. ಅಕ್ರಮ ಹಾದಿಯಲ್ಲಿ ಅಡಿಕೆ ಆಮದು ಸಾಧ್ಯವಾಗುತ್ತಿಲ್ಲ.

ಇದೀಗ ಮತ್ತೆ ಮಾನ್ಮಾರ್‌ ನಿಂದ ಅಡಿಕೆಯನ್ನು ಕಳ್ಳದಾರಿಯ ಮೂಲಕ ದೇಶದೊಳಕ್ಕೆ ಸಾಗಿಸುವಾಗ ಅಸ್ಸಾಂ ಗಡಿಭದ್ರತಾ ಪಡೆಯು ತಡೆದಿದೆ. ಖಚಿತ ಮಾಹಿತಿ ಮೇರೆಗೆ, 23 ಸೆಕ್ಟರ್ ನ ಅಸ್ಸಾಂ ರೈಫಲ್ಸ್ ಮತ್ತು ಕಸ್ಟಮ್ಸ್ ವಿಭಾಗದ 8 ನೇ ಬೆಟಾಲಿಯನ್ ಜಂಟಿ ತಂಡವು ಅಡಿಕೆ ದಾಸ್ತಾನು ಮಾಡಿದ್ದ ಗೋಡೌನ್ ಮೇಲೆ ದಾಳಿ ನಡೆಸಿತು. ಈ ಸಂದರ್ಭ 3.52 ಕೋಟಿ ರೂ.ಗಳ ಮೌಲ್ಯದ 2,100 ಚೀಲ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

 

ಇದಾದ ಬೆನ್ನಲ್ಲೆ ಇನ್ನೊಂದು ದಾಸ್ತಾನು ಕೇಂದ್ರಕ್ಕೆ ದಾಳಿ ನಡೆಸಿದ ಅಸ್ಸಾಂ ಗಡಿ ಭದ್ರತಾ ಪಡೆಯು ಮಿಜೋರಾಂನ ಚಂಪೈ ಜಿಲ್ಲೆಯಲ್ಲಿ 21  ಲಕ್ಷ ರೂಪಾಯಿ ಮೌಲ್ಯದ ಅಡಿಕೆಯನ್ನು ಹಾಗೂ ಮಣಿಪುರದ ಚುರಚಾಂದ್‌ ಪುರದಿಂದ 31  ಲಕ್ಷ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದೆ.

 

ಏನಾಗಬಹುದು ಅಡಿಕೆ ಮಾರುಕಟ್ಟೆ ?
ಅಡಿಕೆ ಅಕ್ರಮ ಸಾಗಾಟಕ್ಕೆ ಈಗ ಬಹುತೇಕ ಬ್ರೇಕ್‌ ಬಿದ್ದಿರುವುದು  ಅಡಿಕೆ ಬೆಳೆಗಾರರಿಗೆ ಪ್ರಯೋಜನಕಾರಿಯಾಗಿದೆ. ಮುಂದೆ ಅಕ್ಟೋಬರ್‌, ನವೆಂಬರ್‌ ವರೆಗೆ ಉತ್ತರ ಭಾರತದ ವಿವಿದೆಡೆ ಚುನಾವಣೆಗಳೂ ಇರುವುದರಿಂದ ಗಡಿಭದ್ರತೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ಕಾರಣದಿಂದ ಅಡಿಕೆ ಮಾರುಕಟ್ಟೆ ತೇಜಿ ಇರಬಹುದು ಎಂಬುದು ಮಾರುಕಟ್ಟೆ ಲೆಕ್ಕಾಚಾರ.

ಇದೇ ವೇಳೆ ಈ ಬಾರಿ ಅಡಿಕೆ ಫಸಲು ತೀರಾ ಕಡಿಮೆ ಇರುವುದರಿಂದ ಹೊಸ ಅಡಿಕೆ ಧಾರಣೆಯೂ ಇಳಿಕೆ ಕಾಣದು ಎಂಬುದು ಮಾರುಕಟ್ಟೆಯಲ್ಲಿನ ಸದ್ಯದ ಲೆಕ್ಕಾಚಾರ.  

ಆದರೆ ಅಡಿಕೆ ಧಾರಣೆ ಏರಿಳಿಕೆಗೆ ವಿವಿಧ ಪ್ರಯತ್ನಗಳು ಆಗಾಗ ನಡೆಯುತ್ತಿರುವುದನ್ನು ಬೆಳೆಗಾರರು ಗಮನಿಸಿದರೆ ಅಡಿಕೆ ಮಾರುಕಟ್ಟೆ ಸ್ಥಿರತೆ ಹಾಗೂ ಧಾರಣೆ ಏರಿಕೆಗೆ ಹೆಚ್ಚು ಅನುಕೂಲವಾಗಲಿದೆ.

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಅಡಿಕೆ ನಿಷೇಧ ಇಲ್ಲ – ಈಗ ಅಡಿಕೆ ಬಳಕೆಯ ನಿಯಂತ್ರಣದತ್ತ ಫೋಕಸ್

ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…

3 hours ago

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

7 hours ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

7 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

17 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

17 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

18 hours ago